ಮುಂಬೈ: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದ ಸೋಲು ಭಾರತೀಯ ತಂಡದಲ್ಲಿನ ಕೆಲವು ಅನುಭವಿಗಳ ಭವಿಷ್ಯದ ಮೇಲೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮುಂದಿನ ವೆಸ್ಟ್ ಇಂಡೀಸ್ ಸರಣಿಗೆ ಅನುಭವಿ ಆಟಗಾರರ ಬದಲು ಯುವ ಆಟಗಾರರನ್ನು ಆಯ್ಕೆ ಮಾಡಬೇಕು ಎಂಬ ಅಭಿಪ್ರಾಯ ಕೇಳಿ ಬರುತ್ತಿದೆ. ಇದೀಗ ಮಾಜಿ ಆಟಗಾರ ವಾಸಿಂ ಜಾಫರ್ ಕೂಡಾ ಇದಕ್ಕೆ ದನಿಗೂಡಿಸಿದ್ದಾರೆ.
ಟೆಸ್ಟ್ ತಂಡ ಮತ್ತು ಟಿ20 ತಂಡದಲ್ಲಿ ವೆಸ್ಟ್ ಇಂಡೀಸ್ ಪ್ರವಾಸಕ್ಕಾಗಿ ಗಂಭೀರವಾಗಿ ಪರಿಗಣಿಸಬೇಕಾದ ಒಂದು ಹೆಸರು ಯಶಸ್ವಿ ಜೈಸ್ವಾಲ್ ಎಂದು ವಾಸಿಂ ಜಾಫರ್ ಅಭಿಪ್ರಾಯಪಟ್ಟಿದ್ದಾರೆ.
“ಭಾರತವು ನಿರ್ಭೀತ ಕ್ರಿಕೆಟ್ ಆಡಬೇಕಾಗುತ್ತದೆ. ವಿಶೇಷವಾಗಿ ಸೀಮಿತ ಓವರ್ ಕ್ರಿಕೆಟ್ ನಲ್ಲಿ, ನೀವು ಭಯವಿಲ್ಲದ ಹುಡುಗರಿಗೆ ಅವಕಾಶಗಳನ್ನು ನೀಡಬೇಕು. ಯಾಕೆಂದರೆ ಆಟವು ಈಗ ಬದಲಾಗುತ್ತಿದೆ. ಭಾರತವು ಟ್ರೋಫಿಗಳನ್ನು ಗೆಲ್ಲಬೇಕಾದರೆ, ಅವರು ಆ ವಿಧಾನವನ್ನು ಅಳವಡಿಸಿಕೊಳ್ಳಬೇಕಾಗುತ್ತದೆ.” ಜಾಫರ್ ಹೇಳಿದರು.
ಸೀಮಿತ ಓವರ್ ಮಾದರಿ ಕ್ರಿಕೆಟ್ ನಲ್ಲಿ ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ ಮತ್ತು ಜಿತೇಶ್ ಶರ್ಮಾಗೆ ಅವಕಾಶ ಕೊಡಬೇಕು ಎಂದು ಜಾಫರ್ ಹೇಳಿದ್ದಾರೆ.
“ಟಿ20 ಕ್ರಿಕೆಟ್ ನಲ್ಲಿ ಯಶಸ್ವಿ ಜೈಸ್ವಾಲ್ ಮತ್ತು ರಿಂಕು ಸಿಂಗ್ ಅದ್ಭುತವಾಗಿದ್ದಾರೆ. ಸದ್ಯ ರಿಷಭ್ ಪಂತ್ ಇಲ್ಲದ ಕಾರಣ ಅವರ ಜಾಗಕ್ಕೆ ಜಿತೇಶ್ ಶರ್ಮಾ ಆಡಬಹುದು. ಏಕದಿನ ಕ್ರಿಕೆಟ್ ನಲ್ಲಿ ಸಂಜು ಸ್ಯಾಮ್ಸನ್ ಗೆ ಅವಕಾಶ ನೀಡಬೇಕು. ನನ್ನ ಪ್ರಕಾರ ಭಾರತ ಈ ಆಟಗಾರರಿಗೆ ಅವಕಾಶ ಕೊಟ್ಟು ನೋಡಬೇಕು” ಎಂದಿದ್ದಾರೆ.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್ಗಳನ್ನು…
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…
ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…
ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…