ಮುಂಬೈ: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದ ಸೋಲು ಭಾರತೀಯ ತಂಡದಲ್ಲಿನ ಕೆಲವು ಅನುಭವಿಗಳ ಭವಿಷ್ಯದ ಮೇಲೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮುಂದಿನ ವೆಸ್ಟ್ ಇಂಡೀಸ್ ಸರಣಿಗೆ ಅನುಭವಿ ಆಟಗಾರರ ಬದಲು ಯುವ ಆಟಗಾರರನ್ನು ಆಯ್ಕೆ ಮಾಡಬೇಕು ಎಂಬ ಅಭಿಪ್ರಾಯ ಕೇಳಿ ಬರುತ್ತಿದೆ. ಇದೀಗ ಮಾಜಿ ಆಟಗಾರ ವಾಸಿಂ ಜಾಫರ್ ಕೂಡಾ ಇದಕ್ಕೆ ದನಿಗೂಡಿಸಿದ್ದಾರೆ.
ಟೆಸ್ಟ್ ತಂಡ ಮತ್ತು ಟಿ20 ತಂಡದಲ್ಲಿ ವೆಸ್ಟ್ ಇಂಡೀಸ್ ಪ್ರವಾಸಕ್ಕಾಗಿ ಗಂಭೀರವಾಗಿ ಪರಿಗಣಿಸಬೇಕಾದ ಒಂದು ಹೆಸರು ಯಶಸ್ವಿ ಜೈಸ್ವಾಲ್ ಎಂದು ವಾಸಿಂ ಜಾಫರ್ ಅಭಿಪ್ರಾಯಪಟ್ಟಿದ್ದಾರೆ.
“ಭಾರತವು ನಿರ್ಭೀತ ಕ್ರಿಕೆಟ್ ಆಡಬೇಕಾಗುತ್ತದೆ. ವಿಶೇಷವಾಗಿ ಸೀಮಿತ ಓವರ್ ಕ್ರಿಕೆಟ್ ನಲ್ಲಿ, ನೀವು ಭಯವಿಲ್ಲದ ಹುಡುಗರಿಗೆ ಅವಕಾಶಗಳನ್ನು ನೀಡಬೇಕು. ಯಾಕೆಂದರೆ ಆಟವು ಈಗ ಬದಲಾಗುತ್ತಿದೆ. ಭಾರತವು ಟ್ರೋಫಿಗಳನ್ನು ಗೆಲ್ಲಬೇಕಾದರೆ, ಅವರು ಆ ವಿಧಾನವನ್ನು ಅಳವಡಿಸಿಕೊಳ್ಳಬೇಕಾಗುತ್ತದೆ.” ಜಾಫರ್ ಹೇಳಿದರು.
ಸೀಮಿತ ಓವರ್ ಮಾದರಿ ಕ್ರಿಕೆಟ್ ನಲ್ಲಿ ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ ಮತ್ತು ಜಿತೇಶ್ ಶರ್ಮಾಗೆ ಅವಕಾಶ ಕೊಡಬೇಕು ಎಂದು ಜಾಫರ್ ಹೇಳಿದ್ದಾರೆ.
“ಟಿ20 ಕ್ರಿಕೆಟ್ ನಲ್ಲಿ ಯಶಸ್ವಿ ಜೈಸ್ವಾಲ್ ಮತ್ತು ರಿಂಕು ಸಿಂಗ್ ಅದ್ಭುತವಾಗಿದ್ದಾರೆ. ಸದ್ಯ ರಿಷಭ್ ಪಂತ್ ಇಲ್ಲದ ಕಾರಣ ಅವರ ಜಾಗಕ್ಕೆ ಜಿತೇಶ್ ಶರ್ಮಾ ಆಡಬಹುದು. ಏಕದಿನ ಕ್ರಿಕೆಟ್ ನಲ್ಲಿ ಸಂಜು ಸ್ಯಾಮ್ಸನ್ ಗೆ ಅವಕಾಶ ನೀಡಬೇಕು. ನನ್ನ ಪ್ರಕಾರ ಭಾರತ ಈ ಆಟಗಾರರಿಗೆ ಅವಕಾಶ ಕೊಟ್ಟು ನೋಡಬೇಕು” ಎಂದಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…