ಕ್ರೀಡೆ

2023ರ ಏಕದಿನ ವಿಶ್ವಕಪ್‌ನಲ್ಲಿ ದಾಖಲಾದ ವಿಶೇಷ ರೆಕಾರ್ಡ್ಸ್‌ ಇವು

ಮೈಸೂರು : ಐಸಿಸಿ ಏಕದಿನ ವಿಶ್ವಕಪ್‌ 2023 ಅಂತಿಮಘಟ್ಟ ತಲುಪಿದ್ದು, ಇದರೊಂದಿಗೆ ಹಲವಾರು ವಿಶೇಷ ದಾಖಲೆಗಳು ಸಹಾ ಮೂಡಿಬಂದಿವೆ.

ಇದರೊಂದಿಗೆ ಈ ಬಾರಿಯ ವಿಶ್ವಕಪ್‌ನಲ್ಲಿ ದಾಖಲಾದ ವಿಶೇಷ ದಾಖಲೆಗಳನ್ನು ಮಾಡಿರುವ ಕುರಿತು ಚುಟುಕು ಮಾಹಿತಿ ಇಲ್ಲಿದೆ.

ದಾಖಲೆ : ಏಕದಿನ ಕ್ರಿಕೆಟ್‌ ವಿಶ್ವಕಪ್‌ನಲ್ಲಿ ಒಟ್ಟು 51 ಸಿಕ್ಸರ್‌ ಬಾರಿಸಿರುವ ಹಿಟ್‌ಮ್ಯಾನ್‌ ವಿಶ್ವಕಪ್‌ನಲ್ಲಿ ಅತಿಹೆಚ್ಚು ಸಿಕ್ಸರ್‌ ಬಾರಿಸಿರುವ ಆಟಗಾರ ಎಂಬ ವಿಶ್ವ ದಾಖಲೆ ಬರೆದಿದ್ದಾರೆ. ರೋಹಿತ್‌ ಶರ್ಮಾ 7 ಶತಕ ಬಾರಿಸಿ ಅತಿಹೆಚ್ಚು ಶತಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದಾರೆ.

ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ಅತಿಹೆಚ್ಚು ಶತಕ ಬಾರಿಸಿದ ಆಟಗಾರ ಎಂಬ ವಿಶ್ವದಾಖಲೆ ಬರೆದಿದ್ದಾರೆ. 711 ರನ್‌ಗಳನ್ನು ಈ ಆವೃತ್ತಿಯ ವಿಶ್ವಕಪ್‌ನಲ್ಲಿ ಬಾರಿಸಿರುವ ಕೊಹ್ಲಿ ವಿಶ್ವಕಪ್‌ ಸೀಸನ್‌ ಒಂದರಲ್ಲಿ ಅತಿಹೆಚ್ಚು ರನ್‌ ಬಾರಿಸಿದ ಆಟಗಾರ ಎಂಬ ವಿಶ್ವದಾಖಲೆ ಬರೆದಿದ್ದಾರೆ. ಅಲ್ಲದೇ ವಿಶ್ವಕಪ್‌ ಆವೃತ್ತಿಯೊಂದರಲ್ಲಿ ಅತಿಹೆಚ್ಚು ಬಾರಿ 50+ ರನ್‌ ಬಾರಿಸಿದ ಆಟಗಾರ ಎಂಬ ದಾಖಲೆಯನ್ನೂ ಸಹ ಕೊಹ್ಲಿ ಮಾಡಿದ್ದಾರೆ. ಕೊಹ್ಲಿ ಈ ಬಾರಿ ಒಟ್ಟು 8 ಬಾರಿ 50+ ರನ್‌ ಬಾರಿಸಿದ್ದಾರೆ. ಈ ಬಾರಿಯ ವಿಶ್ವಕಪ್‌ನಲ್ಲಿ ಕೊಹ್ಲಿ ಅತಿಹೆಚ್ಚು ರನ್‌ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಮಹಮದ್‌ ಶಮಿ ವಿಶ್ವಕಪ್‌ನಲ್ಲಿ ಅತಿವೇಗವಾಗಿ 50 ವಿಕೆಟ್‌ ಪಡೆದ ವೇಗಿ ಎಂಬ ದಾಖಲೆ ಬರೆದಿದ್ದಾರೆ. ಅಲ್ಲದೇ ವಿಶ್ವಕಪ್‌ನಲ್ಲಿ ಅತಿಹೆಚ್ಚು ವಿಕೆಟ್‌ ಪಡೆದ ಭಾರತೀಯ ಎನಿಸಿಕೊಂಡಿದ್ದಾರೆ. ಇನ್ನು ವಿಶ್ವಕಪ್‌ ಆವೃತ್ತಿಯೊಂದರಲ್ಲಿ ಅತಿಹೆಚ್ಚು ವಿಕೆಟ್‌ ಪಡೆದ ಭಾರತೀಯ ಬೌಲರ್‌ ಎಂಬ ದಾಖಲೆಯನ್ನು ಶಮಿ ಮಾಡಿದ್ದಾರೆ. ಅಲ್ಲದೇ ವಿಶ್ವಕಪ್‌ನಲ್ಲಿ ಮೂರು ಬಾರಿ 5 ವಿಕೆಟ್‌ ಗೊಂಚಲು ಪಡೆದಿರುವ ಶಮಿ ಅತಿಹೆಚ್ಚು ಬಾರಿ 5 ವಿಕೆಟ್‌ಗಳ ಗೊಂಚಲನ್ನು ಪಡೆದ ಬೌಲರ್‌ ಎಂಬ ದಾಖಲೆ ಬರೆದಿದ್ದಾರೆ. ಈ ಬಾರಿಯ ಆವೃತ್ತಿಯಲ್ಲಿ ಶಮಿ ಅತಿಹೆಚ್ಚು ವಿಕೆಟ್‌ ಪಡೆದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಶ್ರೇಯಸ್‌ ಅಯ್ಯರ್‌ ವಿಶ್ವಕಪ್‌ ಆವೃತ್ತಿಯೊಂದರಲ್ಲಿ 500 ಕ್ಕಿಂತ ಹೆಚ್ಚು ರನ್‌ ಬಾರಿಸಿದ ವಿಶ್ವದ ಮೊದಲ 4ನೇ ಕ್ರಮಾಂಕದ ಆಟಗಾರ ಎಂಬ ದಾಖಲೆ ಬರೆದಿದ್ದಾರೆ. ನ್ಯೂಜಿಲೆಂಡ್‌ ವಿರುದ್ಧದ ಪಂದ್ಯದಲ್ಲಿ 67 ಎಸೆತಗಳಿಗೆ ಶತಕವನ್ನು ಪೂರೈಸಿದ ಅಯ್ಯರ್‌ ವಿಶ್ವಕಪ್‌ ನಾಕ್‌ಔಟ್‌ ಪಂದ್ಯಗಳಲ್ಲಿ ಅತಿವೇಗದ ಶತಕ ಬಾರಿಸಿದ ಆಟಗಾರ ಎಂಬ ವಿಶ್ವದಾಖಲೆ ಬರೆದಿದ್ದಾರೆ. ಅಲ್ಲದೇ ವಿಶ್ವಕಪ್‌ನಲ್ಲಿ ಸತತವಾಗಿ ಎರಡು ಶತಕಗಳನ್ನು ಬಾರಿಸಿದ ಮೂರನೇ ಭಾರತೀಯ ಎಂಬ ಸಾಧನೆ ಮಾಡಿದ್ದಾರೆ.

ನೆದರ್ಲೆಂಡ್‌ ವಿರುದ್ಧದ ಪಂದ್ಯದಲ್ಲಿ 62 ಎಸೆತಗಳಿಗೆ ಶತಕ ಬಾರಿಸಿದ ಕೆಎಲ್‌ ರಾಹುಲ್‌ ವಿಶ್ವಕಪ್‌ನಲ್ಲಿ ಅತಿ ವೇಗವಾಗಿ ಶತಕ ಬಾರಿಸಿದ ಭಾರತೀಯ ಎಂಬ ದಾಖಲೆ ನಿರ್ಮಿಸಿದರು. ಅಲ್ಲದೇ ವಿಶ್ವಕಪ್‌ನಲ್ಲಿ ರಾಹುಲ್‌ ದ್ರಾವಿಡ್‌ ಬಳಿಕ ಶತಕ ಬಾರಿಸಿದ ಎರಡನೇ ಭಾರತೀಯ ವಿಕೆಟ್‌ ಕೀಪರ್‌ ಎಂಬ ಸಾಧನೆಯನ್ನೂ ಸಹ ಮಾಡಿದರು.

ನೆದರ್ಲೆಂಡ್‌ ವಿರುದ್ಧದ ಪಂದ್ಯದಲ್ಲಿ 62 ಎಸೆತಗಳಿಗೆ ಶತಕ ಬಾರಿಸಿದ ಕೆಎಲ್‌ ರಾಹುಲ್‌ ಭಾರತ ಪರ ವಿಶ್ವಕಪ್‌ನಲ್ಲಿ ಅತಿ ವೇಗವಾಗಿ ಶತಕ ಬಾರಿಸಿದ ಭಾರತೀಯ ಎಂಬ ದಾಖಲೆ ನಿರ್ಮಿಸಿದರು. ಅಲ್ಲದೇ ವಿಶ್ವಕಪ್‌ನಲ್ಲಿ ರಾಹುಲ್‌ ದ್ರಾವಿಡ್‌ ಬಳಿಕ ಶತಕ ಬಾರಿಸಿದ ಎರಡನೇ ಭಾರತೀಯ ವಿಕೆಟ್‌ ಕೀಪರ್‌ ಎಂಬ ಸಾಧನೆಯನ್ನೂ ಸಹ ಮಾಡಿದರು.

ದಕ್ಷಿಣ ಆಫ್ರಿಕಾ ಆಟಗಾರ ಕ್ವಿಂಟನ್‌ ಡಿ ಕಾಕ್‌ ಅವರು ಈ ಸೀಸನ್‌ ನಲ್ಲಿ 4 ಶತಕಗಳನ್ನು ಸಿಡಿಸಿದ್ದಾರೆ. ಸೌತ್‌ ಆಫ್ರಿಕಾ ಆಟಗಾರರೊಬ್ಬರು ವರ್ಲ್ಡ್‌ ಕಪ್‌ ಸೀಸನ್‌ನಲ್ಲಿ ಗಳಿಸಿದ ಅತಿಹೆಚ್ಚು ಸೆಂಚುರಿ ಎಂಬ ಹೆಗ್ಗಳಿಕೆ ಅವರದ್ದಾಗಿದೆ.

ರಚಿನ್‌ ರವೀಂದ್ರ ಈ ಟೂರ್ನಿಯ ಎಮರ್ಜಿಂಗ್‌ ಪ್ಲೇಯರ್‌ ಎಂದರೇ ಭಾಗಶಃ ತಪ್ಪಾಗಲಾರದು. ತಮ್ಮ ಮೊದಲ ವರರ್ಲ್ಡ್‌ಕಪ್‌ ಟೂರ್ನಿಯಲ್ಲಿ 3 ಶತಕ ದಾಖಲಿಸಿದ್ದಾರೆ. ವಿಶ್ವಕಪ್‌ನಲ್ಲಿ ಶತಕ ದಾಖಲಿಸಿದ ಅತಿ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೂ ರಚಿನ್‌ ಪಾತ್ರರಾಗಿದ್ದಾರೆ. ಈ ಹಿಂದೆ ಈ ದಾಖಲೆ ಸಚಿನ್‌ ಹೆಸರಿನಲ್ಲಿತ್ತು.

ಗ್ಲೇನ್‌ ಮ್ಯಾಕ್ಸ್‌ವೆಲ್‌ ಈ ಟೂರ್ನಿಯಲ್ಲಿ ವಯಕ್ತಿಕ ಗರಿಷ್ಠ ಮೊತ್ತ ದಾಖಲಿಸಿದ್ದಾರೆ. ಅಫ್ಘಾನಿಸ್ಯಾನ ವಿರುದ್ಧ ನಡೆದ ಪಂದ್ಯದಲ್ಲಿ 201ರನ್‌ ಗಳಿಸುವ ಮೂಲಕ ಈ ಆವೃತ್ತಿಯಲ್ಲಿ ದಾಖಲಾದ ಮೊದಲ ದ್ವಿಶತಕ ಇದಾಗಿದೆ.

ಆಸ್ಟ್ರೇಲಿಯಾ ಆರಂಭಿಕ ಆಟಗಾರ ಡೆವಿಡ್‌ ವಾರ್ನರ್‌ ವಿಶ್ವಕಪ್‌ 2023ರಲ್ಲಿ ಸಚಿನ್‌ ದಾಖಲೆ ಮುರಿದಿದ್ದಾರೆ. 6 ಶತಕ ಬಾರಿಸುವ ಮೂಲಕ ರಿಕ್ಕಿ ಪಾಂಟಿಂಗ್‌ ದಾಖಲೆಯನ್ನು ಮುರಿದಿದದಾರೆ. ಸಚಿನ್‌ ರೊಂದಿಗೆ ಜಂಟಿ ಸ್ಥಾನದಲ್ಲಿದ್ದಾರೆ.

andolanait

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

5 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

18 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

18 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

18 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

18 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

18 hours ago