ಢಾಕಾ: ಏಕದಿನ ಸರಣಿಯ ಮೊದಲೆರಡು ಪಂದ್ಯಗಳನ್ನು ಸೋಲುವುದರೊಂದಿಗೆ ಸರಣಿಯನ್ನು ಕಳೆದುಕೊಂಡಿರುವ ಟೀಂ ಇಂಡಿಯಾ ಇಂದು ನಡೆಯಲಿರುವ ಕೊನೆಯ ಏಕದಿನ ಪಂದ್ಯವನ್ನು ಗೆದ್ದು ಕ್ಲೀನ್ ಸ್ವೀಪ್ ಮುಜುಗರವನ್ನು ತಪ್ಪಿಸಿಕೊಳ್ಳಲು ಮುಂದಾಗಿದೆ.
ಇದರ ಜತೆಗೆ ತಂಡದಲ್ಲಿ ಗಾಯಾಳುಗಳ ಸಮಸ್ಯೆ ಉಲ್ಬಣವಾಗಿದೆ. ಎರಡನೇ ಏಕದಿನ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಸೇರಿ ಮೂವರು ಆಟಗಾರರು ಗಾಯಗೊಂಡಿದ್ದರು. ಆದ್ದರಿಂದ ಕೊನೆಯ ಏಕದಿನ ಪಂದ್ಯಕ್ಕೆ ತಂಡದಲ್ಲಿ ಬೇರೆ ಮುಖಗಳಿಗೆ ಅವಕಾಶ ಕೊಡಲಾಗಿದೆ.
ಕುಲ್ದೀಪ್ ಯಾದವ್ ಹೊಸದಾಗಿ ತಂಡಕ್ಕೆ ಸೇರಿದ್ದಾರೆ. ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದರೂ
ಎರಡನೇ ಏಕದಿನ ಪಂದ್ಯದಲ್ಲಿ ನೋವಿನ ನಡುವೆ ಏಕಾಂಗಿಯಾಗಿ ಪಂದ್ಯ ಗೆಲ್ಲಿಸಲು ಪ್ರಯತ್ನಿಸಿದ್ದರು. ಆದರೆ ಸಹ ಆಟಗಾರರಿಂದ ಸೂಕ್ತ ನೆರವು ದೊರೆಯದೇ ಟೀಂ ಇಂಡಿಯಾ ಸರಣಿ ಸೋತಿತು. ರೋಹಿತ್ ಈಗಾಗಲೇ ತಂಡ ತೊರೆದು ಮುಂಬೈಗೆ ವಾಪಸ್ಸಾಗಿದ್ದಾರೆ. ವೇಗದ ಬೌಲರ್ ಕುಲದೀಪ್ ಸೇನ್ ಕೂಡ ಮೊದಲ ಏಕದಿನ ಪಂದ್ಯದಲ್ಲಿ ಬೆನ್ನು ನೋವಿಗೆ ಒಳಗಾಗಿದ್ದರು. ಆದ್ದರಿಂದ ಕುಲದೀಪ್ಗೆ ಎರಡನೇ ಏಕದಿನ ಪಂದ್ಯದಿಂದ ವಿಶ್ರಾಂತಿ ನೀಡಲಾಗಿತ್ತು. ಈಗ ಅವರನ್ನು ಸಂಪೂರ್ಣ ಸರಣಿಯಿಂದಲೇ ಕೈಬಿಡಲಾಗಿದೆ.
ವೇಗದ ಬೌಲರ್ ದೀಪಕ್ ಚಹಾರ್ ಕೂಡ ಎರಡನೇ ಏಕದಿನ ಪಂದ್ಯದಲ್ಲಿ ಗಾಯಗೊಂಡಿದ್ದು, ಅವರು ಕೂಡ ಸರಣಿಯಿಂದ ಹೊರಗುಳಿದಿದ್ದಾರೆ. ಸರಣಿ ಮಧ್ಯದಲ್ಲಿ ಮೂವರು ಆಟಗಾರರು ಗಾಯಗೊಂಡಿದ್ದರಿಂದ ತಂಡವನ್ನು ಬಲಪಡಿಸುವ ಸಲುವಾಗಿ ಆಯ್ಕೆ ಸಮಿತಿ ಕುಲದೀಪ್ ಯಾದವ್ ಅವರನ್ನು ಕೊನೆಯ ಏಕದಿನ ಪಂದ್ಯಕ್ಕೆ ಆಯ್ಕೆ ಮಾಡಿದೆ. ಕೆ.ಎಲ್ ರಾಹುಲ್ ಮೂರನೇ ಏಕದಿನ ಪಂದ್ಯದಲ್ಲಿ ತಂಡದ ಸಾರಥ್ಯವಹಿಸಿಕೊಳ್ಳಲಿದ್ದಾರೆ.
ಮೂರನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ಇಂತಿದೆ.
ಕೆ.ಎಲ್. ರಾಹುಲ್ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್, ಶಹಬಾಜ್ ಅಹ್ಮದ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಕುಲದೀಪ್ ಯಾದವ್
ಮೈಸೂರು: ಸಚಿವ ಎಚ್.ಸಿ.ಮಹದೇವಪ್ಪ ಮುಖ್ಯಮಂತ್ರಿಯಾದರೆ ನನಗೆ ಖುಷಿಯಿದೆ ಎಂದು ಸಚಿವ ಕೆ.ವೆಂಕಟೇಶ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ದಲಿತ ಸಿಎಂ ಕೂಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದೂರಾಡಳಿತವನ್ನು ಅಂತ್ಯಗೊಳಿಸಿ ರಾಜ್ಯದಲ್ಲಿ ಬಿಜೆಪಿ…
ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಕುರಿತು ಆದಷ್ಟು ಶೀಘ್ರವಾಗಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಬೇಕೆಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ಗೆ…
ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಬೇಸಿಗೆ ಆರಂಭಕ್ಕೂ ಮುನ್ನವೇ ಬಿಸಿಲಿನ ಝಳ ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ…
ಬೆಂಗಳೂರು: ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಫೋನ್ ಬಳಸುವುದನ್ನು ನಿಷೇಧಿಸುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ-ಕೇಂದ್ರ ಸಚಿವ ಕುಮಾರಸ್ವಾಮಿ ನಡುವಿನ ಜಟಾಪಟಿಯಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ನಿಲುವುಗಳನ್ನು ಸಚಿವ ಪರಮೇಶ್ವರ್…