ಕ್ರೀಡೆ

ತೃತೀಯ ಏಕದಿನ ಪಂದ್ಯ : ಕ್ಲೀನ್ ಸ್ವೀಪ್ ಮುಜುಗರವನ್ನು ತಪ್ಪಿಸಿಕೊಳ್ಳುವುದೇ ಟೀಂ ಇಂಡಿಯಾ

ಢಾಕಾ: ಏಕದಿನ ಸರಣಿಯ ಮೊದಲೆರಡು ಪಂದ್ಯಗಳನ್ನು ಸೋಲುವುದರೊಂದಿಗೆ ಸರಣಿಯನ್ನು ಕಳೆದುಕೊಂಡಿರುವ ಟೀಂ ಇಂಡಿಯಾ ಇಂದು ನಡೆಯಲಿರುವ ಕೊನೆಯ ಏಕದಿನ ಪಂದ್ಯವನ್ನು ಗೆದ್ದು ಕ್ಲೀನ್ ಸ್ವೀಪ್ ಮುಜುಗರವನ್ನು ತಪ್ಪಿಸಿಕೊಳ್ಳಲು ಮುಂದಾಗಿದೆ.

ಇದರ ಜತೆಗೆ ತಂಡದಲ್ಲಿ ಗಾಯಾಳುಗಳ ಸಮಸ್ಯೆ ಉಲ್ಬಣವಾಗಿದೆ. ಎರಡನೇ ಏಕದಿನ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಸೇರಿ ಮೂವರು ಆಟಗಾರರು ಗಾಯಗೊಂಡಿದ್ದರು. ಆದ್ದರಿಂದ ಕೊನೆಯ ಏಕದಿನ ಪಂದ್ಯಕ್ಕೆ ತಂಡದಲ್ಲಿ ಬೇರೆ ಮುಖಗಳಿಗೆ ಅವಕಾಶ ಕೊಡಲಾಗಿದೆ.

ಕುಲ್ದೀಪ್ ಯಾದವ್ ಹೊಸದಾಗಿ ತಂಡಕ್ಕೆ ಸೇರಿದ್ದಾರೆ. ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದರೂ
ಎರಡನೇ ಏಕದಿನ ಪಂದ್ಯದಲ್ಲಿ ನೋವಿನ ನಡುವೆ ಏಕಾಂಗಿಯಾಗಿ ಪಂದ್ಯ ಗೆಲ್ಲಿಸಲು ಪ್ರಯತ್ನಿಸಿದ್ದರು. ಆದರೆ ಸಹ ಆಟಗಾರರಿಂದ ಸೂಕ್ತ ನೆರವು ದೊರೆಯದೇ ಟೀಂ ಇಂಡಿಯಾ ಸರಣಿ ಸೋತಿತು. ರೋಹಿತ್ ಈಗಾಗಲೇ ತಂಡ ತೊರೆದು ಮುಂಬೈಗೆ ವಾಪಸ್ಸಾಗಿದ್ದಾರೆ. ವೇಗದ ಬೌಲರ್ ಕುಲದೀಪ್ ಸೇನ್ ಕೂಡ ಮೊದಲ ಏಕದಿನ ಪಂದ್ಯದಲ್ಲಿ ಬೆನ್ನು ನೋವಿಗೆ ಒಳಗಾಗಿದ್ದರು. ಆದ್ದರಿಂದ ಕುಲದೀಪ್​ಗೆ ಎರಡನೇ ಏಕದಿನ ಪಂದ್ಯದಿಂದ ವಿಶ್ರಾಂತಿ ನೀಡಲಾಗಿತ್ತು. ಈಗ ಅವರನ್ನು ಸಂಪೂರ್ಣ ಸರಣಿಯಿಂದಲೇ ಕೈಬಿಡಲಾಗಿದೆ.

ವೇಗದ ಬೌಲರ್ ದೀಪಕ್ ಚಹಾರ್ ಕೂಡ ಎರಡನೇ ಏಕದಿನ ಪಂದ್ಯದಲ್ಲಿ ಗಾಯಗೊಂಡಿದ್ದು, ಅವರು ಕೂಡ ಸರಣಿಯಿಂದ ಹೊರಗುಳಿದಿದ್ದಾರೆ. ಸರಣಿ ಮಧ್ಯದಲ್ಲಿ ಮೂವರು ಆಟಗಾರರು ಗಾಯಗೊಂಡಿದ್ದರಿಂದ ತಂಡವನ್ನು ಬಲಪಡಿಸುವ ಸಲುವಾಗಿ ಆಯ್ಕೆ ಸಮಿತಿ ಕುಲದೀಪ್ ಯಾದವ್ ಅವರನ್ನು ಕೊನೆಯ ಏಕದಿನ ಪಂದ್ಯಕ್ಕೆ ಆಯ್ಕೆ ಮಾಡಿದೆ. ಕೆ.ಎಲ್ ರಾಹುಲ್ ಮೂರನೇ ಏಕದಿನ ಪಂದ್ಯದಲ್ಲಿ ತಂಡದ ಸಾರಥ್ಯವಹಿಸಿಕೊಳ್ಳಲಿದ್ದಾರೆ.

ಮೂರನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ಇಂತಿದೆ.

ಕೆ.ಎಲ್. ರಾಹುಲ್ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್, ಶಹಬಾಜ್ ಅಹ್ಮದ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಕುಲದೀಪ್ ಯಾದವ್

andolana

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

5 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

18 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

18 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

18 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

18 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

18 hours ago