ಕ್ರೀಡೆ

ತೃತೀಯ ಏಕದಿನ ಪಂದ್ಯ : ಕ್ಲೀನ್ ಸ್ವೀಪ್ ಮುಜುಗರವನ್ನು ತಪ್ಪಿಸಿಕೊಳ್ಳುವುದೇ ಟೀಂ ಇಂಡಿಯಾ

ಢಾಕಾ: ಏಕದಿನ ಸರಣಿಯ ಮೊದಲೆರಡು ಪಂದ್ಯಗಳನ್ನು ಸೋಲುವುದರೊಂದಿಗೆ ಸರಣಿಯನ್ನು ಕಳೆದುಕೊಂಡಿರುವ ಟೀಂ ಇಂಡಿಯಾ ಇಂದು ನಡೆಯಲಿರುವ ಕೊನೆಯ ಏಕದಿನ ಪಂದ್ಯವನ್ನು ಗೆದ್ದು ಕ್ಲೀನ್ ಸ್ವೀಪ್ ಮುಜುಗರವನ್ನು ತಪ್ಪಿಸಿಕೊಳ್ಳಲು ಮುಂದಾಗಿದೆ.

ಇದರ ಜತೆಗೆ ತಂಡದಲ್ಲಿ ಗಾಯಾಳುಗಳ ಸಮಸ್ಯೆ ಉಲ್ಬಣವಾಗಿದೆ. ಎರಡನೇ ಏಕದಿನ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಸೇರಿ ಮೂವರು ಆಟಗಾರರು ಗಾಯಗೊಂಡಿದ್ದರು. ಆದ್ದರಿಂದ ಕೊನೆಯ ಏಕದಿನ ಪಂದ್ಯಕ್ಕೆ ತಂಡದಲ್ಲಿ ಬೇರೆ ಮುಖಗಳಿಗೆ ಅವಕಾಶ ಕೊಡಲಾಗಿದೆ.

ಕುಲ್ದೀಪ್ ಯಾದವ್ ಹೊಸದಾಗಿ ತಂಡಕ್ಕೆ ಸೇರಿದ್ದಾರೆ. ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದರೂ
ಎರಡನೇ ಏಕದಿನ ಪಂದ್ಯದಲ್ಲಿ ನೋವಿನ ನಡುವೆ ಏಕಾಂಗಿಯಾಗಿ ಪಂದ್ಯ ಗೆಲ್ಲಿಸಲು ಪ್ರಯತ್ನಿಸಿದ್ದರು. ಆದರೆ ಸಹ ಆಟಗಾರರಿಂದ ಸೂಕ್ತ ನೆರವು ದೊರೆಯದೇ ಟೀಂ ಇಂಡಿಯಾ ಸರಣಿ ಸೋತಿತು. ರೋಹಿತ್ ಈಗಾಗಲೇ ತಂಡ ತೊರೆದು ಮುಂಬೈಗೆ ವಾಪಸ್ಸಾಗಿದ್ದಾರೆ. ವೇಗದ ಬೌಲರ್ ಕುಲದೀಪ್ ಸೇನ್ ಕೂಡ ಮೊದಲ ಏಕದಿನ ಪಂದ್ಯದಲ್ಲಿ ಬೆನ್ನು ನೋವಿಗೆ ಒಳಗಾಗಿದ್ದರು. ಆದ್ದರಿಂದ ಕುಲದೀಪ್​ಗೆ ಎರಡನೇ ಏಕದಿನ ಪಂದ್ಯದಿಂದ ವಿಶ್ರಾಂತಿ ನೀಡಲಾಗಿತ್ತು. ಈಗ ಅವರನ್ನು ಸಂಪೂರ್ಣ ಸರಣಿಯಿಂದಲೇ ಕೈಬಿಡಲಾಗಿದೆ.

ವೇಗದ ಬೌಲರ್ ದೀಪಕ್ ಚಹಾರ್ ಕೂಡ ಎರಡನೇ ಏಕದಿನ ಪಂದ್ಯದಲ್ಲಿ ಗಾಯಗೊಂಡಿದ್ದು, ಅವರು ಕೂಡ ಸರಣಿಯಿಂದ ಹೊರಗುಳಿದಿದ್ದಾರೆ. ಸರಣಿ ಮಧ್ಯದಲ್ಲಿ ಮೂವರು ಆಟಗಾರರು ಗಾಯಗೊಂಡಿದ್ದರಿಂದ ತಂಡವನ್ನು ಬಲಪಡಿಸುವ ಸಲುವಾಗಿ ಆಯ್ಕೆ ಸಮಿತಿ ಕುಲದೀಪ್ ಯಾದವ್ ಅವರನ್ನು ಕೊನೆಯ ಏಕದಿನ ಪಂದ್ಯಕ್ಕೆ ಆಯ್ಕೆ ಮಾಡಿದೆ. ಕೆ.ಎಲ್ ರಾಹುಲ್ ಮೂರನೇ ಏಕದಿನ ಪಂದ್ಯದಲ್ಲಿ ತಂಡದ ಸಾರಥ್ಯವಹಿಸಿಕೊಳ್ಳಲಿದ್ದಾರೆ.

ಮೂರನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ಇಂತಿದೆ.

ಕೆ.ಎಲ್. ರಾಹುಲ್ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್, ಶಹಬಾಜ್ ಅಹ್ಮದ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಕುಲದೀಪ್ ಯಾದವ್

andolana

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

6 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

6 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

7 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

9 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

12 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

12 hours ago