ಕ್ರೀಡೆ

ತೃತೀಯ ಏಕದಿನ ಪಂದ್ಯ : ಕ್ಲೀನ್ ಸ್ವೀಪ್ ಮುಜುಗರವನ್ನು ತಪ್ಪಿಸಿಕೊಳ್ಳುವುದೇ ಟೀಂ ಇಂಡಿಯಾ

ಢಾಕಾ: ಏಕದಿನ ಸರಣಿಯ ಮೊದಲೆರಡು ಪಂದ್ಯಗಳನ್ನು ಸೋಲುವುದರೊಂದಿಗೆ ಸರಣಿಯನ್ನು ಕಳೆದುಕೊಂಡಿರುವ ಟೀಂ ಇಂಡಿಯಾ ಇಂದು ನಡೆಯಲಿರುವ ಕೊನೆಯ ಏಕದಿನ ಪಂದ್ಯವನ್ನು ಗೆದ್ದು ಕ್ಲೀನ್ ಸ್ವೀಪ್ ಮುಜುಗರವನ್ನು ತಪ್ಪಿಸಿಕೊಳ್ಳಲು ಮುಂದಾಗಿದೆ.

ಇದರ ಜತೆಗೆ ತಂಡದಲ್ಲಿ ಗಾಯಾಳುಗಳ ಸಮಸ್ಯೆ ಉಲ್ಬಣವಾಗಿದೆ. ಎರಡನೇ ಏಕದಿನ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಸೇರಿ ಮೂವರು ಆಟಗಾರರು ಗಾಯಗೊಂಡಿದ್ದರು. ಆದ್ದರಿಂದ ಕೊನೆಯ ಏಕದಿನ ಪಂದ್ಯಕ್ಕೆ ತಂಡದಲ್ಲಿ ಬೇರೆ ಮುಖಗಳಿಗೆ ಅವಕಾಶ ಕೊಡಲಾಗಿದೆ.

ಕುಲ್ದೀಪ್ ಯಾದವ್ ಹೊಸದಾಗಿ ತಂಡಕ್ಕೆ ಸೇರಿದ್ದಾರೆ. ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದರೂ
ಎರಡನೇ ಏಕದಿನ ಪಂದ್ಯದಲ್ಲಿ ನೋವಿನ ನಡುವೆ ಏಕಾಂಗಿಯಾಗಿ ಪಂದ್ಯ ಗೆಲ್ಲಿಸಲು ಪ್ರಯತ್ನಿಸಿದ್ದರು. ಆದರೆ ಸಹ ಆಟಗಾರರಿಂದ ಸೂಕ್ತ ನೆರವು ದೊರೆಯದೇ ಟೀಂ ಇಂಡಿಯಾ ಸರಣಿ ಸೋತಿತು. ರೋಹಿತ್ ಈಗಾಗಲೇ ತಂಡ ತೊರೆದು ಮುಂಬೈಗೆ ವಾಪಸ್ಸಾಗಿದ್ದಾರೆ. ವೇಗದ ಬೌಲರ್ ಕುಲದೀಪ್ ಸೇನ್ ಕೂಡ ಮೊದಲ ಏಕದಿನ ಪಂದ್ಯದಲ್ಲಿ ಬೆನ್ನು ನೋವಿಗೆ ಒಳಗಾಗಿದ್ದರು. ಆದ್ದರಿಂದ ಕುಲದೀಪ್​ಗೆ ಎರಡನೇ ಏಕದಿನ ಪಂದ್ಯದಿಂದ ವಿಶ್ರಾಂತಿ ನೀಡಲಾಗಿತ್ತು. ಈಗ ಅವರನ್ನು ಸಂಪೂರ್ಣ ಸರಣಿಯಿಂದಲೇ ಕೈಬಿಡಲಾಗಿದೆ.

ವೇಗದ ಬೌಲರ್ ದೀಪಕ್ ಚಹಾರ್ ಕೂಡ ಎರಡನೇ ಏಕದಿನ ಪಂದ್ಯದಲ್ಲಿ ಗಾಯಗೊಂಡಿದ್ದು, ಅವರು ಕೂಡ ಸರಣಿಯಿಂದ ಹೊರಗುಳಿದಿದ್ದಾರೆ. ಸರಣಿ ಮಧ್ಯದಲ್ಲಿ ಮೂವರು ಆಟಗಾರರು ಗಾಯಗೊಂಡಿದ್ದರಿಂದ ತಂಡವನ್ನು ಬಲಪಡಿಸುವ ಸಲುವಾಗಿ ಆಯ್ಕೆ ಸಮಿತಿ ಕುಲದೀಪ್ ಯಾದವ್ ಅವರನ್ನು ಕೊನೆಯ ಏಕದಿನ ಪಂದ್ಯಕ್ಕೆ ಆಯ್ಕೆ ಮಾಡಿದೆ. ಕೆ.ಎಲ್ ರಾಹುಲ್ ಮೂರನೇ ಏಕದಿನ ಪಂದ್ಯದಲ್ಲಿ ತಂಡದ ಸಾರಥ್ಯವಹಿಸಿಕೊಳ್ಳಲಿದ್ದಾರೆ.

ಮೂರನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ಇಂತಿದೆ.

ಕೆ.ಎಲ್. ರಾಹುಲ್ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್, ಶಹಬಾಜ್ ಅಹ್ಮದ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಕುಲದೀಪ್ ಯಾದವ್

andolana

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

15 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

19 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

19 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

19 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

19 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

19 hours ago