ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ʼಅನ್ಬಾಕ್ಸ್ʼ ಈವೆಂಟ್ ಅದ್ದೂರಿಯಾಗಿ ನಡೆಯಿತು.
ಈ ಈವೆಂಟ್ನಲ್ಲಿ ಆರ್ಸಿಬಿಯ ಹೆಸರಾದ ರಾಯಲ್ ಚಾಲೆಂಜರ್ಸ್ ಬೆಂಗಳೂರ್ ಹೆಸರನ್ನು ʼರಾಯಲ್ ಚಾಲೆಂಜರ್ಸ್ ಬೆಂಗಳೂರುʼ ಎಂದು ಅಧಿಕೃತವಾಗಿ ಬದಲಾಯಿಸಿದೆ.
ಇದೇ ವೇಳೆ ಆರ್ಸಿಬಿ ನೂತನ ಜೆರ್ಸಿಯನ್ನು ಅನಾವರಣಗೊಳಿಸಲಾಯಿತು. ನೀಲಿ ಮತ್ತು ಕೆಂಪು ಬಣ್ಣ ಸಂಯೋಜನೆಯ ಜೆರ್ಸಿಯನ್ನು ಆರ್ಸಿಬಿ ನಾಯಕ ಫಾಫ್ ಡು ಪ್ಲೆಸ್ಸಿ, ವಿರಾಟ್ ಕೊಹ್ಲಿ ಮತ್ತು ಆರ್ಸಿಬಿ ಮಹಿಳಾ ತಂಡದ ನಾಯಕಿ ಸ್ಮೃತಿ ಮಂದನಾ ಅನಾವರಣಗೊಳಿಸಿದರು.
ಈ ಬಗ್ಗೆ ಆರ್ಸಿಬಿ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ “ಹೊಸ ಅಧ್ಯಾಯಕ್ಕೆ ಸಮಯ ಬಂದಿದೆ. ನಿಮ್ಮ ತಂಡ, ನಿಮ್ಮ ಆರ್ಸಿಬಿ” ಎಂದು ಬರೆದುಕೊಂಡಿದ್ದಾರೆ.
ಈ ಸಂದರ್ಭದಲ್ಲಿ ನೆರೆದಿದ್ದ ಅಭಿಮಾನಿಗಳನ್ನು ಉದ್ದೇಶಿ ವಿರಾಟ್ ಕೊಹ್ಲಿ ʼಇದು ಆರ್ಸಿಬಿ ಯ ಹೊಸ ಅಧ್ಯಾಯʼ ಎಂದು ಕನ್ನಡದಲ್ಲೇ ಹೇಳುವ ಮೂಲಕ ಎಲ್ಲರ ಹುಬ್ಬೇರಿಸಿದರು.
ಅನ್ ಬಾಕ್ಸ್ ಕಾರ್ಯಕ್ರಮಕ್ಕೂ ಮೊದಲು ಚೊಚ್ಚಲ ಟ್ರೋಫಿ ಗೆದ್ದ ಆರ್ಸಿಬಿ ಮಹಿಳಾ ತಂಡದ ವಿಜಯೋತ್ಸವ ಸಮಾರಂಭ ನಡೆಯಿತು.
ಈ ಕಾರ್ಯಕ್ರಮದಲ್ಲಿ ಕರ್ನಾಟಕ ವೇಗಿ ಆರ್. ವಿನಯ್ ಕುಮಾರ್ ಅವರನ್ನು ಗೌರವಿಸಲಾಯಿತು. ಇದೇ ವೇಳೆ ಹಾಲಿವುಡ್ ರ್ಯಾಪರ್ ಆಲನ್ ವಾಕರ್, ಅಶ್ವಿನಿ ಪುನೀತ್ ರಾಜ್ ಕುಮಾರ್ ಉಪಸ್ಥಿತರಿದ್ದರು.
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…