ಕ್ರೀಡೆ

ಇದು ʼಆರ್‌ಸಿಬಿʼಯ ಹೊಸ ಅಧ್ಯಾಯ: ವಿರಾಟ್‌ ಕೊಹ್ಲಿ

ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ʼಅನ್‌ಬಾಕ್ಸ್‌ʼ ಈವೆಂಟ್‌ ಅದ್ದೂರಿಯಾಗಿ ನಡೆಯಿತು.

ಈ ಈವೆಂಟ್‌ನಲ್ಲಿ ಆರ್‌ಸಿಬಿಯ ಹೆಸರಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರ್‌ ಹೆಸರನ್ನು ʼರಾಯಲ್‌ ಚಾಲೆಂಜರ್ಸ್‌ ಬೆಂಗಳೂರುʼ ಎಂದು ಅಧಿಕೃತವಾಗಿ ಬದಲಾಯಿಸಿದೆ.

ಇದೇ ವೇಳೆ ಆರ್‌ಸಿಬಿ ನೂತನ ಜೆರ್ಸಿಯನ್ನು ಅನಾವರಣಗೊಳಿಸಲಾಯಿತು. ನೀಲಿ ಮತ್ತು ಕೆಂಪು ಬಣ್ಣ ಸಂಯೋಜನೆಯ ಜೆರ್ಸಿಯನ್ನು ಆರ್‌ಸಿಬಿ ನಾಯಕ ಫಾಫ್‌ ಡು ಪ್ಲೆಸ್ಸಿ, ವಿರಾಟ್‌ ಕೊಹ್ಲಿ ಮತ್ತು ಆರ್‌ಸಿಬಿ ಮಹಿಳಾ ತಂಡದ ನಾಯಕಿ ಸ್ಮೃತಿ ಮಂದನಾ ಅನಾವರಣಗೊಳಿಸಿದರು.

ಈ ಬಗ್ಗೆ ಆರ್‌ಸಿಬಿ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ “ಹೊಸ ಅಧ್ಯಾಯಕ್ಕೆ ಸಮಯ ಬಂದಿದೆ. ನಿಮ್ಮ ತಂಡ, ನಿಮ್ಮ ಆರ್‌ಸಿಬಿ” ಎಂದು ಬರೆದುಕೊಂಡಿದ್ದಾರೆ.

ಈ ಸಂದರ್ಭದಲ್ಲಿ ನೆರೆದಿದ್ದ ಅಭಿಮಾನಿಗಳನ್ನು ಉದ್ದೇಶಿ ವಿರಾಟ್‌ ಕೊಹ್ಲಿ ʼಇದು ಆರ್‌ಸಿಬಿ ಯ ಹೊಸ ಅಧ್ಯಾಯʼ ಎಂದು ಕನ್ನಡದಲ್ಲೇ ಹೇಳುವ ಮೂಲಕ ಎಲ್ಲರ ಹುಬ್ಬೇರಿಸಿದರು.

ಅನ್‌ ಬಾಕ್ಸ್‌ ಕಾರ್ಯಕ್ರಮಕ್ಕೂ ಮೊದಲು ಚೊಚ್ಚಲ ಟ್ರೋಫಿ ಗೆದ್ದ ಆರ್‌ಸಿಬಿ ಮಹಿಳಾ ತಂಡದ ವಿಜಯೋತ್ಸವ ಸಮಾರಂಭ ನಡೆಯಿತು.

ಈ ಕಾರ್ಯಕ್ರಮದಲ್ಲಿ ಕರ್ನಾಟಕ ವೇಗಿ ಆರ್‌. ವಿನಯ್‌ ಕುಮಾರ್‌ ಅವರನ್ನು ಗೌರವಿಸಲಾಯಿತು. ಇದೇ ವೇಳೆ ಹಾಲಿವುಡ್‌ ರ್ಯಾಪರ್‌ ಆಲನ್‌ ವಾಕರ್‌, ಅಶ್ವಿನಿ ಪುನೀತ್‌ ರಾಜ್‌ ಕುಮಾರ್‌ ಉಪಸ್ಥಿತರಿದ್ದರು.

andolanait

Recent Posts

ಬಂಡೀಪುರ ಅರಣ್ಯದಲ್ಲಿ ನೀರಿನ ಸಮಸ್ಯೆಗೆ ಬ್ರೇಕ್: ಸೋಲಾರ್‌ ಬೋರ್‌ವೆಲ್‌ ಮೂಲಕ ನೀರು ತುಂಬಿಸಲು ಪ್ಲಾನ್‌

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್‌ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…

10 seconds ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.…

24 mins ago

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

44 mins ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

1 hour ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

1 hour ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

5 hours ago