ಕ್ರೀಡೆ

ಇದು ʼಆರ್‌ಸಿಬಿʼಯ ಹೊಸ ಅಧ್ಯಾಯ: ವಿರಾಟ್‌ ಕೊಹ್ಲಿ

ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ʼಅನ್‌ಬಾಕ್ಸ್‌ʼ ಈವೆಂಟ್‌ ಅದ್ದೂರಿಯಾಗಿ ನಡೆಯಿತು.

ಈ ಈವೆಂಟ್‌ನಲ್ಲಿ ಆರ್‌ಸಿಬಿಯ ಹೆಸರಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರ್‌ ಹೆಸರನ್ನು ʼರಾಯಲ್‌ ಚಾಲೆಂಜರ್ಸ್‌ ಬೆಂಗಳೂರುʼ ಎಂದು ಅಧಿಕೃತವಾಗಿ ಬದಲಾಯಿಸಿದೆ.

ಇದೇ ವೇಳೆ ಆರ್‌ಸಿಬಿ ನೂತನ ಜೆರ್ಸಿಯನ್ನು ಅನಾವರಣಗೊಳಿಸಲಾಯಿತು. ನೀಲಿ ಮತ್ತು ಕೆಂಪು ಬಣ್ಣ ಸಂಯೋಜನೆಯ ಜೆರ್ಸಿಯನ್ನು ಆರ್‌ಸಿಬಿ ನಾಯಕ ಫಾಫ್‌ ಡು ಪ್ಲೆಸ್ಸಿ, ವಿರಾಟ್‌ ಕೊಹ್ಲಿ ಮತ್ತು ಆರ್‌ಸಿಬಿ ಮಹಿಳಾ ತಂಡದ ನಾಯಕಿ ಸ್ಮೃತಿ ಮಂದನಾ ಅನಾವರಣಗೊಳಿಸಿದರು.

ಈ ಬಗ್ಗೆ ಆರ್‌ಸಿಬಿ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ “ಹೊಸ ಅಧ್ಯಾಯಕ್ಕೆ ಸಮಯ ಬಂದಿದೆ. ನಿಮ್ಮ ತಂಡ, ನಿಮ್ಮ ಆರ್‌ಸಿಬಿ” ಎಂದು ಬರೆದುಕೊಂಡಿದ್ದಾರೆ.

ಈ ಸಂದರ್ಭದಲ್ಲಿ ನೆರೆದಿದ್ದ ಅಭಿಮಾನಿಗಳನ್ನು ಉದ್ದೇಶಿ ವಿರಾಟ್‌ ಕೊಹ್ಲಿ ʼಇದು ಆರ್‌ಸಿಬಿ ಯ ಹೊಸ ಅಧ್ಯಾಯʼ ಎಂದು ಕನ್ನಡದಲ್ಲೇ ಹೇಳುವ ಮೂಲಕ ಎಲ್ಲರ ಹುಬ್ಬೇರಿಸಿದರು.

ಅನ್‌ ಬಾಕ್ಸ್‌ ಕಾರ್ಯಕ್ರಮಕ್ಕೂ ಮೊದಲು ಚೊಚ್ಚಲ ಟ್ರೋಫಿ ಗೆದ್ದ ಆರ್‌ಸಿಬಿ ಮಹಿಳಾ ತಂಡದ ವಿಜಯೋತ್ಸವ ಸಮಾರಂಭ ನಡೆಯಿತು.

ಈ ಕಾರ್ಯಕ್ರಮದಲ್ಲಿ ಕರ್ನಾಟಕ ವೇಗಿ ಆರ್‌. ವಿನಯ್‌ ಕುಮಾರ್‌ ಅವರನ್ನು ಗೌರವಿಸಲಾಯಿತು. ಇದೇ ವೇಳೆ ಹಾಲಿವುಡ್‌ ರ್ಯಾಪರ್‌ ಆಲನ್‌ ವಾಕರ್‌, ಅಶ್ವಿನಿ ಪುನೀತ್‌ ರಾಜ್‌ ಕುಮಾರ್‌ ಉಪಸ್ಥಿತರಿದ್ದರು.

andolanait

Recent Posts

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್‌ ಅಹಮ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ…

10 mins ago

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

3 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

3 hours ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

3 hours ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

3 hours ago

ಆಂತರಿಕ ಕ್ಷೋಭೆಯಿಂದ ಭಾರತ ರಕ್ಷಿಸಿದ ಅಂಬೇಡ್ಕರ್

ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…

3 hours ago