ಹರಾರೆ: ಸಾಮಾಜಿಕ ಮಾಧ್ಯಮದಲ್ಲಿ ನನ್ನ ಸಾವಿನ ಕುರಿತು ವದಂತಿ ಹಬ್ಬಿಸಿರುವುದಕ್ಕೆ ನನಗೆ ನೋವಾಗಿದೆ. ವದಂತಿಯನ್ನು ಹಬ್ಬಿಸಿದವರು ಕ್ಷಮೆಯಾಚಿಸಬೇಕು ಎಂದು ಝಿಂಬಾಬ್ವೆ ಕ್ರಿಕೆಟ್ ದಂತಕತೆ ಹೀತ್ ಸ್ಟ್ರೀಕ್ ಹೇಳಿದ್ದಾರೆ.
ಸ್ಟ್ರೀಕ್ ನ ಮಾಜಿ ಸಹ ಆಟಗಾರ ಹೆನ್ರಿ ಒಲಾಂಗ ಅವರು ಬುಧವಾರ ಬೆಳಿಗ್ಗೆ ಟ್ವೀಟ್ ಮಾಡಿ, ನನ್ನ ಮಾಜಿ ಸಹ ಆಟಗಾರ ಸ್ಟ್ರೀಕ್ ಕ್ಯಾನ್ಸರ್ ನೊಂದಿಗೆ ದೀರ್ಘಕಾಲ ಹೋರಾಟ ನಡೆಸಿ ನಿಧನರಾದರು ಎಂದು ತಿಳಿಸಿದ್ದರು.
ಕೆಲವು ಗಂಟೆಗಳ ನಂತರ ಮತ್ತೊಂದು ಟ್ವೀಟ್ ಮಾಡಿದ್ದ ಓಲಾಂಗ, ಮಾಜಿ ಝಿಂಬಾಬ್ವೆ ನಾಯಕ ಸ್ಟ್ರೀಕ್ ವಾಸ್ತವವಾಗಿ ಜೀವಂತವಾಗಿದ್ದಾರೆ, ಚೆನ್ನಾಗಿದ್ದಾರೆ ಎಂದು ಹೇಳಿದ್ದರು.
ಸ್ವತಃ ಮಾಧ್ಯಮವೊಂದರ ಜೊತೆ ಮಾತನಾಡಿದ ಸ್ಟ್ರೀಕ್ , ನನ್ನ ಸಾವಿನ ಕುರಿತು ಸುಳ್ಳು ಸುದ್ದಿ ಮಾಡಿದ್ದಾರೆ, ನಾನು ಜೀವಂತವಾಗಿದ್ದೇನೆ ಹಾಗೂ ಚೆನ್ನಾಗಿದ್ದೇನೆ ಎಂದು ಹೇಳಿದರು.
“ಇದು ಸಂಪೂರ್ಣ ವದಂತಿ ಮತ್ತು ಸುಳ್ಳು. ನಾನು ಜೀವಂತವಾಗಿದ್ದೇನೆ ಮತ್ತು ಚೆನ್ನಾಗಿಯೇ ಇದ್ದೇನೆ. ಯಾರೋ ಒಬ್ಬರು ಸತ್ಯಾಂಶವನ್ನು ಪರಿಶೀಲಿಸದೆ ವಿಶೇಷವಾಗಿ ನಮ್ಮ ಸಾಮಾಜಿಕ ಮಾಧ್ಯಮದ ಯುಗದಲ್ಲಿ ಈ ರೀತಿ ಮಾಡಿದ್ದಾರೆ. ಸುಳ್ಳು ಸುದ್ದಿಯ ಮೂಲವು ಇದಕ್ಕೆ ಕ್ಷಮೆಯಾಚಿಸಬೇಕು ಎಂದು ನಾನು ನಂಬುತ್ತೇನೆ. ಸುದ್ದಿಯಿಂದ ನನಗೆ ನೋವಾಗಿದೆ” ಎಂದು ಸ್ಟ್ರೀಕ್ ಹೇಳಿದ್ದಾರೆ.
ಉತ್ತರ ಪ್ರದೇಶ: ಫೆಬ್ರವರಿ.10ರಂದು ಎರಡೂವರೆ ಗಂಟೆಗಳ ಕಾಲ ಪ್ರವಾಸಿಗರಿಗೆ ತಾಜ್ಮಹಲ್ ಪ್ರವೇಶ ನಿಷೇಧಿಸಲಾಗಿದೆ. ಭಾರತೀಯ ಪುರಾತತ್ವ ಸಮೀಕ್ಷೆ ಪ್ರಕಾರ ಸೀಶೆಲ್ಸ್…
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಶೇಕಡಾ.5ರಷ್ಟು ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ…
ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಎಂದೇ ಹೇಳಲಾಗುವ ತಿರುಪಯಯಿ ತಿರುಮಲ ಶ್ರೀ ವೆಂಕಟೇಶ್ವರ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ…
ಬೆಂಗಳೂರು: ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ…
ಮೈಸೂರು: ಹಳೆಯ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರಿನ ಎನ್.ಆರ್.ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು-ಬೆಂಗಳೂರು ರಸ್ತೆಯ…
ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…