ಹರಾರೆ: ಸಾಮಾಜಿಕ ಮಾಧ್ಯಮದಲ್ಲಿ ನನ್ನ ಸಾವಿನ ಕುರಿತು ವದಂತಿ ಹಬ್ಬಿಸಿರುವುದಕ್ಕೆ ನನಗೆ ನೋವಾಗಿದೆ. ವದಂತಿಯನ್ನು ಹಬ್ಬಿಸಿದವರು ಕ್ಷಮೆಯಾಚಿಸಬೇಕು ಎಂದು ಝಿಂಬಾಬ್ವೆ ಕ್ರಿಕೆಟ್ ದಂತಕತೆ ಹೀತ್ ಸ್ಟ್ರೀಕ್ ಹೇಳಿದ್ದಾರೆ.
ಸ್ಟ್ರೀಕ್ ನ ಮಾಜಿ ಸಹ ಆಟಗಾರ ಹೆನ್ರಿ ಒಲಾಂಗ ಅವರು ಬುಧವಾರ ಬೆಳಿಗ್ಗೆ ಟ್ವೀಟ್ ಮಾಡಿ, ನನ್ನ ಮಾಜಿ ಸಹ ಆಟಗಾರ ಸ್ಟ್ರೀಕ್ ಕ್ಯಾನ್ಸರ್ ನೊಂದಿಗೆ ದೀರ್ಘಕಾಲ ಹೋರಾಟ ನಡೆಸಿ ನಿಧನರಾದರು ಎಂದು ತಿಳಿಸಿದ್ದರು.
ಕೆಲವು ಗಂಟೆಗಳ ನಂತರ ಮತ್ತೊಂದು ಟ್ವೀಟ್ ಮಾಡಿದ್ದ ಓಲಾಂಗ, ಮಾಜಿ ಝಿಂಬಾಬ್ವೆ ನಾಯಕ ಸ್ಟ್ರೀಕ್ ವಾಸ್ತವವಾಗಿ ಜೀವಂತವಾಗಿದ್ದಾರೆ, ಚೆನ್ನಾಗಿದ್ದಾರೆ ಎಂದು ಹೇಳಿದ್ದರು.
ಸ್ವತಃ ಮಾಧ್ಯಮವೊಂದರ ಜೊತೆ ಮಾತನಾಡಿದ ಸ್ಟ್ರೀಕ್ , ನನ್ನ ಸಾವಿನ ಕುರಿತು ಸುಳ್ಳು ಸುದ್ದಿ ಮಾಡಿದ್ದಾರೆ, ನಾನು ಜೀವಂತವಾಗಿದ್ದೇನೆ ಹಾಗೂ ಚೆನ್ನಾಗಿದ್ದೇನೆ ಎಂದು ಹೇಳಿದರು.
“ಇದು ಸಂಪೂರ್ಣ ವದಂತಿ ಮತ್ತು ಸುಳ್ಳು. ನಾನು ಜೀವಂತವಾಗಿದ್ದೇನೆ ಮತ್ತು ಚೆನ್ನಾಗಿಯೇ ಇದ್ದೇನೆ. ಯಾರೋ ಒಬ್ಬರು ಸತ್ಯಾಂಶವನ್ನು ಪರಿಶೀಲಿಸದೆ ವಿಶೇಷವಾಗಿ ನಮ್ಮ ಸಾಮಾಜಿಕ ಮಾಧ್ಯಮದ ಯುಗದಲ್ಲಿ ಈ ರೀತಿ ಮಾಡಿದ್ದಾರೆ. ಸುಳ್ಳು ಸುದ್ದಿಯ ಮೂಲವು ಇದಕ್ಕೆ ಕ್ಷಮೆಯಾಚಿಸಬೇಕು ಎಂದು ನಾನು ನಂಬುತ್ತೇನೆ. ಸುದ್ದಿಯಿಂದ ನನಗೆ ನೋವಾಗಿದೆ” ಎಂದು ಸ್ಟ್ರೀಕ್ ಹೇಳಿದ್ದಾರೆ.
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ನಂಜೆದೇವಪುರ ಗ್ರಾಮದ ಸುತ್ತಮುತ್ತ ಹುಲಿಗಳನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಮುಂದುವರಿಸಲಾಗಿದೆ. ಚಾಮರಾಜನಗರ ತಾಲ್ಲೂಕಿನ…
ಬೆಂಗಳೂರು: ಕ್ರಿಕೆಟ್ ಪ್ರೇಮಿಗಳಿಗೆ ಶಾಕ್ ಎಂಬಂತೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳಿನ ಪಂದ್ಯಕ್ಕೆ ಅವಕಾಶ ಇಲ್ಲ ಎಂದು ತಿಳಿದುಬಂದಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ…
ಮೈಸೂರು: ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದ ವ್ಯಕ್ತಿಯಿಂದ 80 ಸಾವಿರ ರೂ ದೋಚಿದ್ದ ಇಬ್ಬರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ರಮೇಶ್ ಹಾಗೂ…
ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಯಲ್ಲಿ ನಡೆದಿದೆ.…
ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಸ್ಟಾರ್ ವಾರ್ ಬಗ್ಗೆ ನಟ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಯುದ್ಧಕ್ಕೆ ಸಿದ್ಧ ಮಾತಿಗೆ…
ಮೈಸೂರಿನ ಸುಭಾಷ್ ನಗರದ ೪ನೇ ಮುಖ್ಯರಸ್ತೆಯಲ್ಲಿರುವ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲುತ್ತಿದ್ದು, ಗಾಳಿ ಅಥವಾ ಮಳೆಯ ಸಮಯದಲ್ಲಿ ಶಾರ್ಟ್…