ಕ್ರೀಡೆ

ನನ್ನ ಸಾವಿನ ಕುರಿತ ದಂತಿಯನ್ನು ಹಬ್ಬಿಸಿದವರು ಕ್ಷಮೆಯಾಚಿಸಬೇಕು: ಹೀತ್ ಸ್ಟ್ರೀಕ್

ಹರಾರೆ: ಸಾಮಾಜಿಕ ಮಾಧ್ಯಮದಲ್ಲಿ ನನ್ನ ಸಾವಿನ ಕುರಿತು ವದಂತಿ ಹಬ್ಬಿಸಿರುವುದಕ್ಕೆ ನನಗೆ ನೋವಾಗಿದೆ. ವದಂತಿಯನ್ನು ಹಬ್ಬಿಸಿದವರು ಕ್ಷಮೆಯಾಚಿಸಬೇಕು ಎಂದು ಝಿಂಬಾಬ್ವೆ ಕ್ರಿಕೆಟ್ ದಂತಕತೆ ಹೀತ್ ಸ್ಟ್ರೀಕ್ ಹೇಳಿದ್ದಾರೆ.

ಸ್ಟ್ರೀಕ್ ನ ಮಾಜಿ ಸಹ ಆಟಗಾರ ಹೆನ್ರಿ ಒಲಾಂಗ ಅವರು ಬುಧವಾರ ಬೆಳಿಗ್ಗೆ ಟ್ವೀಟ್ ಮಾಡಿ, ನನ್ನ ಮಾಜಿ ಸಹ ಆಟಗಾರ ಸ್ಟ್ರೀಕ್ ಕ್ಯಾನ್ಸರ್ ನೊಂದಿಗೆ ದೀರ್ಘಕಾಲ ಹೋರಾಟ ನಡೆಸಿ ನಿಧನರಾದರು ಎಂದು ತಿಳಿಸಿದ್ದರು.

ಕೆಲವು ಗಂಟೆಗಳ ನಂತರ ಮತ್ತೊಂದು ಟ್ವೀಟ್ ಮಾಡಿದ್ದ ಓಲಾಂಗ, ಮಾಜಿ ಝಿಂಬಾಬ್ವೆ ನಾಯಕ ಸ್ಟ್ರೀಕ್ ವಾಸ್ತವವಾಗಿ ಜೀವಂತವಾಗಿದ್ದಾರೆ, ಚೆನ್ನಾಗಿದ್ದಾರೆ ಎಂದು ಹೇಳಿದ್ದರು.

ಸ್ವತಃ ಮಾಧ್ಯಮವೊಂದರ ಜೊತೆ ಮಾತನಾಡಿದ ಸ್ಟ್ರೀಕ್ , ನನ್ನ ಸಾವಿನ ಕುರಿತು ಸುಳ್ಳು ಸುದ್ದಿ ಮಾಡಿದ್ದಾರೆ, ನಾನು ಜೀವಂತವಾಗಿದ್ದೇನೆ ಹಾಗೂ ಚೆನ್ನಾಗಿದ್ದೇನೆ ಎಂದು ಹೇಳಿದರು.

“ಇದು ಸಂಪೂರ್ಣ ವದಂತಿ ಮತ್ತು ಸುಳ್ಳು. ನಾನು ಜೀವಂತವಾಗಿದ್ದೇನೆ ಮತ್ತು ಚೆನ್ನಾಗಿಯೇ ಇದ್ದೇನೆ. ಯಾರೋ ಒಬ್ಬರು ಸತ್ಯಾಂಶವನ್ನು ಪರಿಶೀಲಿಸದೆ ವಿಶೇಷವಾಗಿ ನಮ್ಮ ಸಾಮಾಜಿಕ ಮಾಧ್ಯಮದ ಯುಗದಲ್ಲಿ ಈ ರೀತಿ ಮಾಡಿದ್ದಾರೆ. ಸುಳ್ಳು ಸುದ್ದಿಯ ಮೂಲವು ಇದಕ್ಕೆ ಕ್ಷಮೆಯಾಚಿಸಬೇಕು ಎಂದು ನಾನು ನಂಬುತ್ತೇನೆ. ಸುದ್ದಿಯಿಂದ ನನಗೆ ನೋವಾಗಿದೆ” ಎಂದು ಸ್ಟ್ರೀಕ್ ಹೇಳಿದ್ದಾರೆ.

andolanait

Recent Posts

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

7 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

8 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

9 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

10 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

11 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

12 hours ago