ಹರಾರೆ: ಸಾಮಾಜಿಕ ಮಾಧ್ಯಮದಲ್ಲಿ ನನ್ನ ಸಾವಿನ ಕುರಿತು ವದಂತಿ ಹಬ್ಬಿಸಿರುವುದಕ್ಕೆ ನನಗೆ ನೋವಾಗಿದೆ. ವದಂತಿಯನ್ನು ಹಬ್ಬಿಸಿದವರು ಕ್ಷಮೆಯಾಚಿಸಬೇಕು ಎಂದು ಝಿಂಬಾಬ್ವೆ ಕ್ರಿಕೆಟ್ ದಂತಕತೆ ಹೀತ್ ಸ್ಟ್ರೀಕ್ ಹೇಳಿದ್ದಾರೆ.
ಸ್ಟ್ರೀಕ್ ನ ಮಾಜಿ ಸಹ ಆಟಗಾರ ಹೆನ್ರಿ ಒಲಾಂಗ ಅವರು ಬುಧವಾರ ಬೆಳಿಗ್ಗೆ ಟ್ವೀಟ್ ಮಾಡಿ, ನನ್ನ ಮಾಜಿ ಸಹ ಆಟಗಾರ ಸ್ಟ್ರೀಕ್ ಕ್ಯಾನ್ಸರ್ ನೊಂದಿಗೆ ದೀರ್ಘಕಾಲ ಹೋರಾಟ ನಡೆಸಿ ನಿಧನರಾದರು ಎಂದು ತಿಳಿಸಿದ್ದರು.
ಕೆಲವು ಗಂಟೆಗಳ ನಂತರ ಮತ್ತೊಂದು ಟ್ವೀಟ್ ಮಾಡಿದ್ದ ಓಲಾಂಗ, ಮಾಜಿ ಝಿಂಬಾಬ್ವೆ ನಾಯಕ ಸ್ಟ್ರೀಕ್ ವಾಸ್ತವವಾಗಿ ಜೀವಂತವಾಗಿದ್ದಾರೆ, ಚೆನ್ನಾಗಿದ್ದಾರೆ ಎಂದು ಹೇಳಿದ್ದರು.
ಸ್ವತಃ ಮಾಧ್ಯಮವೊಂದರ ಜೊತೆ ಮಾತನಾಡಿದ ಸ್ಟ್ರೀಕ್ , ನನ್ನ ಸಾವಿನ ಕುರಿತು ಸುಳ್ಳು ಸುದ್ದಿ ಮಾಡಿದ್ದಾರೆ, ನಾನು ಜೀವಂತವಾಗಿದ್ದೇನೆ ಹಾಗೂ ಚೆನ್ನಾಗಿದ್ದೇನೆ ಎಂದು ಹೇಳಿದರು.
“ಇದು ಸಂಪೂರ್ಣ ವದಂತಿ ಮತ್ತು ಸುಳ್ಳು. ನಾನು ಜೀವಂತವಾಗಿದ್ದೇನೆ ಮತ್ತು ಚೆನ್ನಾಗಿಯೇ ಇದ್ದೇನೆ. ಯಾರೋ ಒಬ್ಬರು ಸತ್ಯಾಂಶವನ್ನು ಪರಿಶೀಲಿಸದೆ ವಿಶೇಷವಾಗಿ ನಮ್ಮ ಸಾಮಾಜಿಕ ಮಾಧ್ಯಮದ ಯುಗದಲ್ಲಿ ಈ ರೀತಿ ಮಾಡಿದ್ದಾರೆ. ಸುಳ್ಳು ಸುದ್ದಿಯ ಮೂಲವು ಇದಕ್ಕೆ ಕ್ಷಮೆಯಾಚಿಸಬೇಕು ಎಂದು ನಾನು ನಂಬುತ್ತೇನೆ. ಸುದ್ದಿಯಿಂದ ನನಗೆ ನೋವಾಗಿದೆ” ಎಂದು ಸ್ಟ್ರೀಕ್ ಹೇಳಿದ್ದಾರೆ.
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…