ಕ್ರೀಡೆ

ಕರ್ನಾಟಕದಲ್ಲಿ 3 ಹೊಸ ಅಂತರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂ

ಐಪಿಎಲ್‌ನಲ್ಲಿ ಪ್ರತಿ ತಂಡಗಳಿಗೂ ಒಂದು ತವರು ಮೈದಾನವಿದ್ದು, ನಗರ ಮತ್ತು ಕೇಂದ್ರ ರೂಪಿಸಿಯೇ ಐಪಿಎಲ್‌ ತಂಡಗಳನ್ನು ರಚಿಸಲಾಗಿದೆ.

ಪಂಜಾಬ್‌ ಕಿಂಗ್ಸ್‌, ರಾಜಸ್ಥಾನ ರಾಯಲ್ಸ್‌ ತಂಡಗಳಿಗೆ ಮಾತ್ರ ಎರಡು ತವರು ಮೈದಾನಗಳಿದ್ದವು, ಈಗ ಹೊಸದಾಗಿ ಕರ್ನಾಟಕದಲ್ಲಿ 3 ಕ್ರಿಕೆಟ್‌ ಮೈದಾನಗಳು ನಿರ್ಮಾಣವಾಗುತ್ತಿರುವುದರಿಂದ ಈ ತಂಡಗಳ ಸಾಲಿಗೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಸೇರ್ಪಡೆಯಾಗಲಿದೆ.

17 ವರ್ಷಗಳಿಂದ ಆರ್‌ಸಿಬಿ ತಂಡ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮಾತ್ರ ತವರು ಪಂದ್ಯಗಳನ್ನು ಆಡುತ್ತಿತ್ತು. ಈಗ ಹೊಸ ಕ್ರಿಕೆಟ್‌ ಮೈದಾನಗಳ ನಿರ್ಮಾಣದಿಂದ ಹೆಚ್ಚುವರಿ ಪಂದ್ಯಗಳ ಅವಕಾಶ ಆರ್‌ಸಿಬಿ ತಂಡಕ್ಕೆ ದೊರೆಯಲಿದೆ.

ಈಗಾಗಲೇ ಕೊಡಗು ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣದ ಕಾಮಗಾರಿ ಆರಂಭವಾಗಿದ್ದು, ಹಿಮಾಚಲ ಪ್ರದೇಶದ ಧರ್ಮಶಾಲಾ ಮೈದಾನದ ರೀತಿ ಈ ಮೈದಾನ ನಿರ್ಮಿಸಲಾಗುತ್ತಿದೆ. ವಿಶೇಷ ಎಂದರೆ ಈ ಸ್ಟೇಡಿಯಂ ಚಿನ್ನಸ್ವಾಮಿ ಕ್ರೀಡಾಂಗಣಕ್ಕಿಂತ ಸ್ವಲ್ಪ ದೊಡ್ಡದಾಗಿರಲಿದೆ. ಈ ಮೈದಾನವು ಇನ್ನು 3-4 ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ.

ತುಮಕೂರಿನ ಪಿ. ಗೊಲ್ಲಹಳ್ಳಿ ಮತ್ತು ಸೋರೆಕುಂಟೆ ವ್ಯಾಪ್ತಿಯಲ್ಲಿ 41 ಎಕರೆ ಭೂ ಪ್ರದೇಶದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂ ತಲೆ ಎತ್ತಲಿದ್ದು, ಡಿ.2ರಂದು ಈ ಸ್ಟೇಡಿಯಂಗೆ ಶಂಕು ಸ್ಥಾಪನೆ ನೆರವೇರಲಿದೆ. ಇನ್ನು 2 ವರ್ಷಗಳಲ್ಲಿ ಈ ಕ್ರಿಡಾಂಗಣವು ಲೋಕಾರ್ಪಣೆಯಾಗಲಿದೆ.

ಮೈಸೂರಿನಲ್ಲೂ ಅಂತರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣವಾಗುತ್ತದೆ ಎಂಬ ಸುದ್ದಿಗಳು ಕೇಳಿ ಬರುತ್ತಿವೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಇಲವಾಲ ಬಳಿ 20.8 ಎಕರೆ ಭೂಮಿಯನ್ನು ಕ್ರಿಕೆಟ್‌ ಸ್ಟೇಡಿಯಂಗೆ ಗುರುತಿಸಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರೀಕ್ಷಿಸಬಹುದು.

ಹೀಗೆ ಕರ್ನಾಟಕದಲ್ಲಿ 3 ಸ್ಟೇಡಿಯಂಗಳು ಲೋಕಾರ್ಪಣೆಯಾದರೆ ಆರ್‌ಸಿಬಿಗೆ ಹೋಮ್‌ ಗ್ರೌಂಡ್‌ಗಳ ಆಯ್ಕೆ ದೊರೆಯಲಿದೆ.

 

ಆಂದೋಲನ ಡೆಸ್ಕ್

Recent Posts

ಸರ್ಕಾರದ ವೈಫಲ್ಯದ ವಿರುದ್ಧ ಕೈ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದ್ರೂ ಅಚ್ಚರಿಯಿಲ್ಲ: ವಿಜಯೇಂದ್ರ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…

4 mins ago

ಹುಣಸೂರು| ಗುರುಪುರದ ಬಳಿ ಒಂದು ವರ್ಷದ ಹುಲಿ ಮರಿ ಸೆರೆ

ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…

24 mins ago

ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್‌ ನೀಡಿದೆ. ಆ ಮೂಲಕ ನಮಗೆ…

2 hours ago

ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ: ಸಚಿವ ಕೆ.ಜೆ.ಜಾರ್ಜ್‌

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್‌ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…

2 hours ago

2 ಗುಂಪುಗಳ ಮಧ್ಯೆ ಮಾರಾಮಾರಿ: ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ

ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…

2 hours ago

ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಮನುವಾದಿ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…

2 hours ago