ಕ್ರೀಡೆ

ಕರ್ನಾಟಕದಲ್ಲಿ 3 ಹೊಸ ಅಂತರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂ

ಐಪಿಎಲ್‌ನಲ್ಲಿ ಪ್ರತಿ ತಂಡಗಳಿಗೂ ಒಂದು ತವರು ಮೈದಾನವಿದ್ದು, ನಗರ ಮತ್ತು ಕೇಂದ್ರ ರೂಪಿಸಿಯೇ ಐಪಿಎಲ್‌ ತಂಡಗಳನ್ನು ರಚಿಸಲಾಗಿದೆ.

ಪಂಜಾಬ್‌ ಕಿಂಗ್ಸ್‌, ರಾಜಸ್ಥಾನ ರಾಯಲ್ಸ್‌ ತಂಡಗಳಿಗೆ ಮಾತ್ರ ಎರಡು ತವರು ಮೈದಾನಗಳಿದ್ದವು, ಈಗ ಹೊಸದಾಗಿ ಕರ್ನಾಟಕದಲ್ಲಿ 3 ಕ್ರಿಕೆಟ್‌ ಮೈದಾನಗಳು ನಿರ್ಮಾಣವಾಗುತ್ತಿರುವುದರಿಂದ ಈ ತಂಡಗಳ ಸಾಲಿಗೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಸೇರ್ಪಡೆಯಾಗಲಿದೆ.

17 ವರ್ಷಗಳಿಂದ ಆರ್‌ಸಿಬಿ ತಂಡ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮಾತ್ರ ತವರು ಪಂದ್ಯಗಳನ್ನು ಆಡುತ್ತಿತ್ತು. ಈಗ ಹೊಸ ಕ್ರಿಕೆಟ್‌ ಮೈದಾನಗಳ ನಿರ್ಮಾಣದಿಂದ ಹೆಚ್ಚುವರಿ ಪಂದ್ಯಗಳ ಅವಕಾಶ ಆರ್‌ಸಿಬಿ ತಂಡಕ್ಕೆ ದೊರೆಯಲಿದೆ.

ಈಗಾಗಲೇ ಕೊಡಗು ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣದ ಕಾಮಗಾರಿ ಆರಂಭವಾಗಿದ್ದು, ಹಿಮಾಚಲ ಪ್ರದೇಶದ ಧರ್ಮಶಾಲಾ ಮೈದಾನದ ರೀತಿ ಈ ಮೈದಾನ ನಿರ್ಮಿಸಲಾಗುತ್ತಿದೆ. ವಿಶೇಷ ಎಂದರೆ ಈ ಸ್ಟೇಡಿಯಂ ಚಿನ್ನಸ್ವಾಮಿ ಕ್ರೀಡಾಂಗಣಕ್ಕಿಂತ ಸ್ವಲ್ಪ ದೊಡ್ಡದಾಗಿರಲಿದೆ. ಈ ಮೈದಾನವು ಇನ್ನು 3-4 ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ.

ತುಮಕೂರಿನ ಪಿ. ಗೊಲ್ಲಹಳ್ಳಿ ಮತ್ತು ಸೋರೆಕುಂಟೆ ವ್ಯಾಪ್ತಿಯಲ್ಲಿ 41 ಎಕರೆ ಭೂ ಪ್ರದೇಶದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂ ತಲೆ ಎತ್ತಲಿದ್ದು, ಡಿ.2ರಂದು ಈ ಸ್ಟೇಡಿಯಂಗೆ ಶಂಕು ಸ್ಥಾಪನೆ ನೆರವೇರಲಿದೆ. ಇನ್ನು 2 ವರ್ಷಗಳಲ್ಲಿ ಈ ಕ್ರಿಡಾಂಗಣವು ಲೋಕಾರ್ಪಣೆಯಾಗಲಿದೆ.

ಮೈಸೂರಿನಲ್ಲೂ ಅಂತರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣವಾಗುತ್ತದೆ ಎಂಬ ಸುದ್ದಿಗಳು ಕೇಳಿ ಬರುತ್ತಿವೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಇಲವಾಲ ಬಳಿ 20.8 ಎಕರೆ ಭೂಮಿಯನ್ನು ಕ್ರಿಕೆಟ್‌ ಸ್ಟೇಡಿಯಂಗೆ ಗುರುತಿಸಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರೀಕ್ಷಿಸಬಹುದು.

ಹೀಗೆ ಕರ್ನಾಟಕದಲ್ಲಿ 3 ಸ್ಟೇಡಿಯಂಗಳು ಲೋಕಾರ್ಪಣೆಯಾದರೆ ಆರ್‌ಸಿಬಿಗೆ ಹೋಮ್‌ ಗ್ರೌಂಡ್‌ಗಳ ಆಯ್ಕೆ ದೊರೆಯಲಿದೆ.

 

ಆಂದೋಲನ ಡೆಸ್ಕ್

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

2 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

4 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

5 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

6 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

8 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

8 hours ago