ಕ್ರೀಡೆ

‘ಟೈಮ್ಡ್ ಔಟ್’ ಮೇಲ್ಮನವಿ ತನ್ನ ಕಲ್ಪನೆಯಲ್ಲ: ಶಕೀಬ್ ಅಲ್ ಹಸನ್

ನವದೆಹಲಿ : ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಯ ಶ್ರೀಲಂಕಾ ವಿರುದ್ದದ ಪಂದ್ಯದಲ್ಲಿ ಬಾಂಗ್ಲಾ ನಾಯಕ ತೆಗೆದುಕೊಂಡ ವಿವಾದಾತ್ಮಕ ಟೈಮ್ಡ್ – ಔಟ್ ಮನವಿ ತೀವ್ರ ಟೀಕೆಗೆ ಗುರಿಯಾಗಿತ್ತು. ಈ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ಶಕೀಬ್ ಅದು ಮೂಲತಃ ತನ್ನ ಕಲ್ಪನೆಯಲ್ಲ ಎಂದು ಹೇಳಿದ್ದಾರೆ.

ಶ್ರೀಲಂಕಾ ಮತ್ತು ಬಾಂಗ್ಲಾದೇಶ ನಡುವಿನ ಕ್ರಿಕೆಟ್ ವಿಶ್ವಕಪ್ 2023 ಪಂದ್ಯದ ವೇಳೆ ಆ್ಯಂಜೆಲೊ ಮ್ಯಾಥ್ಯೂಸ್ ಅಂತರ್ರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಗೆ ‘ಟೈಮ್ ಔಟ್’ ಆದ ಕ್ರಿಕೆಟಿಗ ಎನಿಸಿಕೊಂಡರು. ಸಮರವಿಕ್ರಮ ಔಟ್ ಆದ ಬಳಿಕ ಬ್ಯಾಟಿಂಗ್ ಬಂದ ಮ್ಯಾಥ್ಯೂಸ್ ಎರಡು ನಿಮಿಷಗಳ ಒಳಗಡೆ ಎಸೆತವನ್ನು ಎದುರಿಸಲು ಸಿದ್ಧರಿರಲಿಲ್ಲ. ಅವರ ಹೆಲ್ಮೆಟ್ ಮುರಿದಿತ್ತು. ಈ ಬಗ್ಗೆ ಅಂಪೈರ್ ಗಮನಕ್ಕೆ ತಂದ ಬಾಂಗ್ಲಾ ನಾಯಕ ಶಕೀಬ್ ಟೈಮ್ಡ್ – ಔಟ್ ಗೆ ಮನವಿ ಮಾಡಿದರು.

ಶಕೀಬ್ ಅಲ್ ಹಸನ್ ಅವರ ಮನವಿಯ ನಂತರ ಅಂಪೈರ್, ಮ್ಯಾಥ್ಯೂಸ್ ರನ್ನು ಔಟ್ ಮಾಡುವುದನ್ನು ಬಿಟ್ಟು ಅವರ ಬಳಿ ಬೇರೆ ಆಯ್ಕೆ ಇರಲಿಲ್ಲ. ಘಟನೆಯ ನಂತರ ಈ ಬಗ್ಗೆ ಅಸಮಾಧಾನ ಹೊರಹಾಕಿದ ಮ್ಯಾಥ್ಯೂಸ್ ಬಾಂಗ್ಲಾ ತಂಡವನ್ನು ತೀವ್ರವಾಗಿ ಟೀಕಿಸಿದ್ದರು. ಅಲ್ಲದೇ ಮನವಿಗಾಗಿ ಶಕೀಬ್ ಅಲ್ ಹಸನ್, ಅಭಿಮಾನಿಗಳು ಮತ್ತು ಕ್ರಿಕೆಟಿಗರಿಂದ ಸಾಕಷ್ಟು ಟೀಕೆಗಳನ್ನು ಎದುರಿಸಿದ್ದಾರೆ. ಅದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಕೀಬ್, ಈ ಮನವಿಯು ಮೂಲತಃ ತನ್ನ ಕಲ್ಪನೆಯಲ್ಲ ಎಂದು ಪಂದ್ಯದ ನಂತರ ಬಹಿರಂಗಪಡಿಸಿದರು.

ನಮ್ಮ ಫೀಲ್ಡರ್ ಒಬ್ಬರು ನನ್ನ ಬಳಿಗೆ ಬಂದು ನಾನು ಮೇಲ್ಮನವಿ ಸಲ್ಲಿಸಿದರೆ ಅವರು ಔಟ್ ಆಗುತ್ತಾರೆ ಎಂದು ಹೇಳಿದರು. ಈ ಬಗ್ಗೆ ಅಂಪೈರ್ ಬಳಿ ಕೇಳಿದಾಗ, ಇದು ಕಾನೂನಿನಲ್ಲಿ ಇದೆ, ನೀವು ಆ ಬಗ್ಗೆ ಗಂಭೀರವಾಗಿ ಯೋಚಿಸುತ್ತಿದ್ದೀರಾ? ಎಂದು ನನ್ನನ್ನು ಕೇಳಿದರು. ಬಳಿಕ ಕ್ರಿಕೆಟ್ ನಿಯಮಗಳ ಪ್ರಕಾರ ಆ್ಯಂಜೆಲೊ ಔಟ್ ಆದರು. ಅದು ಸರಿಯೋ ತಪ್ಪೋ ಎಂದು ನನಗೆ ತಿಳಿದಿಲ್ಲ. ಒಟ್ಟಿನಲ್ಲಿ ನಾವು ಪಂದ್ಯದಲ್ಲಿ ಏನು ಮಾಡಬೇಕೋ ಅದನ್ನು ಮಾಡಿದ್ದೇವೆ. ಚರ್ಚೆಗಳು ನಡೆಯುತ್ತವೆ ಎಂದು ಶಕೀಬ್ ಪ್ರತಿಕ್ರಿಯಿಸಿದ್ದಾರೆ.

ವಿಶ್ವಕಪ್ ನಿಂದ ಹೊರನಡೆದ ಶಕೀಬ್ : ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಶಕೀಬ್ ವಿಶ್ವಕಪ್ ನಿಂದ ಹೊರ ನಡೆದಿದ್ದಾರೆ. ಬಾಂಗ್ಲಾದೇಶದ ನಾಯಕ ವಿಶ್ವಕಪ್ ಟೂರ್ನಿಯಲ್ಲಿ ನ.11 ರಂದು ಪುಣೆಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡಬೇಕಿತ್ತು. ಎಡಗೈ ತೋರು ಬೆರಳಿನ ಮೂಳೆ ಮುರಿತದಿಂದಾಗಿ ತಂಡದಿಂದ ಹೊರಗುಳಿಯುವುದಾಗಿ ಅವರು ತಂಡದ ಫಿಸಿಯೋ ಗೇ ತಿಳಿದ್ದಾರೆ.

ಶಕೀಬ್ ಮಂಗಳವಾರ ಢಾಕಾಗೆ ವಾಪಸಾಗಲಿದ್ದಾರೆ. ಅವರನ್ನು ಹೊರತುಪಡಿಸಿದ ತಂಡ ದೆಹಲಿಯಿಂದ ಪುಣೆಗೆ ಪ್ರಯಾಣ ಬೆಳೆಸಲಿದೆ. ಶಕೀಬ್ ಬದಲಿಗೆ ಬ್ಯಾಟರ್ ಅನಾಮುಲ್ ಹಕ್ ತಂಡ ಸೇರಿಕೊಳ್ಳಲಿದ್ದಾರೆ.

ಸೋಮವಾರ ದೆಹಲಿಯಲ್ಲಿ ಶ್ರೀಲಂಕಾ ವಿರುದ್ಧದ ಶಕೀಬ್ ಅಲ್‌ ಹಸನ್ ಗಾಯಗೊಂಡಿದ್ದರು.

andolanait

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

4 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

5 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

6 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

6 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

6 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

8 hours ago