ಕ್ರೀಡೆ

ಟೈಮ್ಡ್- ಔಟ್ ವಿವಾದ: ಬಾಂಗ್ಲಾ ನಾಯಕನ ಕಾಲೆಳೆದ ಆ್ಯಂಜೆಲೊ ಮ್ಯಾಥ್ಯೂಸ್

ನವದೆಹಲಿ : ಇಲ್ಲಿನ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಯ ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಲಂಕಾ ಆಲ್ ರೌಂಡರ್ ಆ್ಯಂಜೆಲೊ ಮ್ಯಾಥ್ಯೂಸ್ ಬಾಂಗ್ಲಾ ನಾಯಕ ಶಕೀಬ್ ರನ್ನು 82 ರನ್ ಗೆ ಔಟ್ ಮಾಡಿದ ಮೇಲೆ ಭಿನ್ನ ರೀತಿಯಲ್ಲಿ ಸಂಭ್ರಮಿಸಿದರು.

ಈ ಪಂದ್ಯದಲ್ಲಿ ಬಾಂಗ್ಲಾದೇಶ 3 ವಿಕೆಟ್ ಗಳಿಂದ ಜಯ ಸಾಧಿಸಿದ್ದರೂ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಶಕೀಬ್ರನ್ನು ಶತಕದ ಅಂಚಿನಲ್ಲಿ ಕೆಡವಿದ ಆ್ಯಂಜೆಲೊ ಮ್ಯಾಥ್ಯೂಸ್, ತನ್ನ ‘ಟೈಮ್-ಔಟ್’ ಗೆ ಕಾರಣರಾದ ಶಕೀಬ್‌ ರ ವಿಕೆಟ್‌ ಪಡೆದು “ಕಾಲ ಎಲ್ಲರ ಕಾಲೆಳೆಯುತ್ತೆ” ಎಂಬಂತೆ ಕಾಲ್ಪನಿಕ ಕೈ ಗಡಿಯಾರದ ಸನ್ನೆ ಮಾಡಿ ತಮ್ಮ ಅಸಹನೆ ಹೊರ ಹಾಕಿದರು.

2023 ರ ಐಸಿಸಿ ವಿಶ್ವಕಪ್ನಲ್ಲಿ ಏಷ್ಯನ್ ಪ್ರತಿಸ್ಪರ್ಧಿಗಳ ನಡುವಿನ ರೋಮಾಂಚಕ ಮುಖಾಮುಖಿಯಲ್ಲಿ ಮೊದಲು ಬ್ಯಾಟ್ ಮಾಡಿದ್ದ ಶ್ರೀಲಂಕಾ 280 ರನ್ ಗಳ ಗುರಿ ನೀಡಿತ್ತು. ಈ ಮೊತ್ತವನ್ನು ಯಶಸ್ವಿಯಾಗಿ ಬೆನ್ನಟ್ಟಿದ್ದ ಬಾಂಗ್ಲಾ 3 ವಿಕೆಟ್ ಗೆಲುವು ಸಾಧಿಸಿತು . ಆದರೆ ಈ ಪಂದ್ಯದಲ್ಲಿ ಬಾಂಗ್ಲಾದೇಶದ ನಾಯಕ ಶಕೀಬ್ ಅಲ್ ಹಸನ್ ಹಾಗೂ ನಜ್ಮುಲ್ ಹುಸೈನ್ ಶಾಂಟೊ ಇಬ್ಬರನ್ನೂ ಆ್ಯಂಜೆಲೊ ಮ್ಯಾಥ್ಯೂಸ್ ಶತಕದ ಹೊಸ್ತಿಲ್ಲಿ ಔಟ್ ಮಾಡಿದ್ದರು.

ಮ್ಯಾಥ್ಯೂಸ್ ‘ಟೈಮ್ಡ್-ಔಟ್’

ಪ್ರಥಮ ಇನ್ನಿಂಗ್ಸ್‌ ನಲ್ಲಿ ಶ್ರೀಲಂಕಾದ ಅನುಭವಿ ಆಲ್‌ ರೌಂಡರ್ ಆ್ಯಂಜೆಲೊ ಮ್ಯಾಥ್ಯೂಸ್ ರನ್ನು ಬಾಂಗ್ಲಾ ದೇಶದ ಮನವಿಯಂತೆ ವಿವಾದಾತ್ಮಕವಾಗಿ ‘ಟೈಮ್ ಔಟ್’ ಘೋಷಿಸಲಾಯಿತು. ಪರಿಣಾಮ 146 ವರ್ಷಗಳ ಅಂತರ್ರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಮ್ಯಾಥ್ಯೂಸ್ ಮೊದಲ ‘ಟೈಮ್ಡ್-ಔಟ್’ ಆದ ಮೊದಲ ಆಟಗಾರರಾದರು. ಆದರೆ ಇದಕ್ಕೂ ಮುನ್ನ ಬಾಂಗ್ಲಾ ನಾಯಕನ ಬಳಿ ಅವರು ಸಂಕ್ಷಿಪ್ತ ಮಾತುಕತೆ ನಡೆಸಿದ್ದರು. ಅದರೆ ಬಾಂಗ್ಲಾ ತನ್ನ ಮನವಿಯನ್ನು ಹಿಂಪಡೆಯಲು ನಿರಾಕರಿಸಿತು.

andolanait

Recent Posts

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

33 mins ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

1 hour ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

2 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

2 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

2 hours ago

ದ್ವೇಷ ಭಾಷಣಕ್ಕೆ ಕಡಿವಾಣ | ಗರಿಷ್ಟ 10 ವರ್ಷ ಶಿಕ್ಷೆ, ವಿಧಾನಸಭೆಯಲ್ಲಿ ಮಸೂದೆ ಮಂಡನೆ, BJP ವಿರೋಧ

ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…

2 hours ago