ನವದೆಹಲಿ : ಇಲ್ಲಿನ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಯ ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಲಂಕಾ ಆಲ್ ರೌಂಡರ್ ಆ್ಯಂಜೆಲೊ ಮ್ಯಾಥ್ಯೂಸ್ ಬಾಂಗ್ಲಾ ನಾಯಕ ಶಕೀಬ್ ರನ್ನು 82 ರನ್ ಗೆ ಔಟ್ ಮಾಡಿದ ಮೇಲೆ ಭಿನ್ನ ರೀತಿಯಲ್ಲಿ ಸಂಭ್ರಮಿಸಿದರು.
ಈ ಪಂದ್ಯದಲ್ಲಿ ಬಾಂಗ್ಲಾದೇಶ 3 ವಿಕೆಟ್ ಗಳಿಂದ ಜಯ ಸಾಧಿಸಿದ್ದರೂ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಶಕೀಬ್ರನ್ನು ಶತಕದ ಅಂಚಿನಲ್ಲಿ ಕೆಡವಿದ ಆ್ಯಂಜೆಲೊ ಮ್ಯಾಥ್ಯೂಸ್, ತನ್ನ ‘ಟೈಮ್-ಔಟ್’ ಗೆ ಕಾರಣರಾದ ಶಕೀಬ್ ರ ವಿಕೆಟ್ ಪಡೆದು “ಕಾಲ ಎಲ್ಲರ ಕಾಲೆಳೆಯುತ್ತೆ” ಎಂಬಂತೆ ಕಾಲ್ಪನಿಕ ಕೈ ಗಡಿಯಾರದ ಸನ್ನೆ ಮಾಡಿ ತಮ್ಮ ಅಸಹನೆ ಹೊರ ಹಾಕಿದರು.
2023 ರ ಐಸಿಸಿ ವಿಶ್ವಕಪ್ನಲ್ಲಿ ಏಷ್ಯನ್ ಪ್ರತಿಸ್ಪರ್ಧಿಗಳ ನಡುವಿನ ರೋಮಾಂಚಕ ಮುಖಾಮುಖಿಯಲ್ಲಿ ಮೊದಲು ಬ್ಯಾಟ್ ಮಾಡಿದ್ದ ಶ್ರೀಲಂಕಾ 280 ರನ್ ಗಳ ಗುರಿ ನೀಡಿತ್ತು. ಈ ಮೊತ್ತವನ್ನು ಯಶಸ್ವಿಯಾಗಿ ಬೆನ್ನಟ್ಟಿದ್ದ ಬಾಂಗ್ಲಾ 3 ವಿಕೆಟ್ ಗೆಲುವು ಸಾಧಿಸಿತು . ಆದರೆ ಈ ಪಂದ್ಯದಲ್ಲಿ ಬಾಂಗ್ಲಾದೇಶದ ನಾಯಕ ಶಕೀಬ್ ಅಲ್ ಹಸನ್ ಹಾಗೂ ನಜ್ಮುಲ್ ಹುಸೈನ್ ಶಾಂಟೊ ಇಬ್ಬರನ್ನೂ ಆ್ಯಂಜೆಲೊ ಮ್ಯಾಥ್ಯೂಸ್ ಶತಕದ ಹೊಸ್ತಿಲ್ಲಿ ಔಟ್ ಮಾಡಿದ್ದರು.
ಮ್ಯಾಥ್ಯೂಸ್ ‘ಟೈಮ್ಡ್-ಔಟ್’
ಪ್ರಥಮ ಇನ್ನಿಂಗ್ಸ್ ನಲ್ಲಿ ಶ್ರೀಲಂಕಾದ ಅನುಭವಿ ಆಲ್ ರೌಂಡರ್ ಆ್ಯಂಜೆಲೊ ಮ್ಯಾಥ್ಯೂಸ್ ರನ್ನು ಬಾಂಗ್ಲಾ ದೇಶದ ಮನವಿಯಂತೆ ವಿವಾದಾತ್ಮಕವಾಗಿ ‘ಟೈಮ್ ಔಟ್’ ಘೋಷಿಸಲಾಯಿತು. ಪರಿಣಾಮ 146 ವರ್ಷಗಳ ಅಂತರ್ರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಮ್ಯಾಥ್ಯೂಸ್ ಮೊದಲ ‘ಟೈಮ್ಡ್-ಔಟ್’ ಆದ ಮೊದಲ ಆಟಗಾರರಾದರು. ಆದರೆ ಇದಕ್ಕೂ ಮುನ್ನ ಬಾಂಗ್ಲಾ ನಾಯಕನ ಬಳಿ ಅವರು ಸಂಕ್ಷಿಪ್ತ ಮಾತುಕತೆ ನಡೆಸಿದ್ದರು. ಅದರೆ ಬಾಂಗ್ಲಾ ತನ್ನ ಮನವಿಯನ್ನು ಹಿಂಪಡೆಯಲು ನಿರಾಕರಿಸಿತು.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್ನಲ್ಲಿ ಶೆಡ್ವೊಂದರ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…