ಚೆನ್ನೈ: ತಮಿಳುನಾಡು ಪ್ರೀಮಿಯರ್ ಲೀಗ್ ನಲ್ಲಿ ಕ್ರಿಕೆಟ್ ಜಗತ್ತಿನ ದುಬಾರಿ ಎಸೆತವೊಂದು ದಾಖಲಾಗಿದ್ದು, ಬೌಲರ್ ಓರ್ವ ಒಂದೇ ಎಸೆತದಲ್ಲಿ ಬರೊಬ್ಬರಿ 18 ರನ್ ನೀಡಿರುವ ಘಟನೆ ನಡೆದಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಆರಂಭವಾಗಿರುವ ತಮಿಳುನಾಡು ಪ್ರೀಮಿಯರ್ ಲೀಗ್ ನ ಎರಡನೇ ಪಂದ್ಯವೇ ಕ್ರಿಕೆಟ್ ಜಗತ್ತಿನಲ್ಲಿ ಭಾರಿ ಸದ್ದು ಮಾಡಿದೆ. ಮಂಗಳವಾರ ನಡೆದ ಪಂದ್ಯದಲ್ಲಿ ಬೌಲರ್ ಒಬ್ಬರು ಒಂದು ಎಸೆತದಲ್ಲಿ 18 ರನ್ ಬಿಟ್ಟುಕೊಟ್ಟು ಕ್ರಿಕೆಟ್ ಜಗತ್ತಿನ ದುಬಾರಿ ಎಸೆತವನ್ನು ಎಸೆದಿದ್ದಾರೆ.
ಸೇಲಂ ಸ್ಪಾರ್ಟನ್ಸ್ ಮತ್ತು ಚೆಪಾಕ್ ಸೂಪರ್ ಗಿಲ್ಲಿಸ್ ತಂಡದ ನಡುವಿನ ಪಂದ್ಯದಲ್ಲಿ ಈ ಘಟನೆ ನಡೆದಿದ್ದು, ಸೇಲಂ ಸ್ಪಾರ್ಟನ್ಸ್ ನಾಯಕ ಮತ್ತು ವೇಗದ ಬೌಲರ್ ಅಭಿಷೇಕ್ ತನ್ವಾರ್ ಈ ಕೆಟ್ಟ ದಾಖಲೆಗೆ ಪಾತ್ರರಾಗಿದ್ದಾರೆ
ಚೆಪಾಕ್ ತಂಡದ ಬ್ಯಾಟಿಂಗ್ ನ ಕೊನೆಯ ಎಸೆತವಾಗಿತ್ತು. 20ನೇ ಓವರ್ ನ ಕೊನೆಯ ಎಸೆತವನ್ನು ಅಭಿಷೇಕ್ ಯಾರ್ಕರ್ ಎಸೆದಿದ್ದರು. ಬ್ಯಾಟರ್ ಬೌಲ್ಡ್ ಆಗಿದ್ದರು. ಆದರೆ ಅದು ನೋ ಬಾಲ್ ಆಗಿತ್ತು. ಮುಂದಿನ ಎಸೆತದಲ್ಲಿ ಬ್ಯಾಟರ್ ಸಂಜಯ್ ಯಾದವ್ ಸಿಕ್ಸರ್ ಬಾರಿಸಿದರು. ಆದರೆ ಅದು ಕೂಡಾ ನೋ ಬಾಲ್ ಆಗಿತ್ತು.. ತನ್ವಾರ್ ಮತ್ತೊಂದು ಚೆಂಡೆಸೆದರು.
ಸಂಜಯ್ ಯಾದವ್ ಎರಡು ರನ್ ಓಡಿದರು. ಆದರೆ ಆ ಎಸೆತವೂ ನೋ ಬಾಲ್. ಮುಂದಿನ ಎಸೆತ ವೈಡ್ ಬಾಲ್. ಕೊನೆಗೆ ತನ್ವಾರ್ ಸರಿಯಾದ ಎಸೆತ ಹಾಕಿದರು. ಆದರೆ ಆ ಎಸೆತವನ್ನು ಸಂಜಯ್ ಯಾದವ್ ಸಿಕ್ಸರ್ ಗೆ ಬಾರಿಸಿದ್ದರು. ಆ ಮೂಲಕ ಅಭಿಷೇಕ್ ತನ್ವಾರ್ ಒಂದೇ ಎಸೆತದಲ್ಲಿ ಬರೊಬ್ಬರಿ 18 ರನ್ ನೀಡಿದಂತಾಯಿತು.
ಒಟ್ಟಾರೆ ಆ ಓವರ್ ನಲ್ಲಿ ಅಭಿಷೇಕ್ ತನ್ವಾರ್ ಒಟ್ಟು 25 ರನ್ ಗಳನ್ನು ನೀಡಿದ್ದರು. ಅಭಿಷೇಕ್ ತನ್ವಾರ್ ಅವರ ಕೊನೆಯ ಓವರ್ ಹೀಗಿತ್ತು: 1 4 0 1 N 1 N N6 N2 Wd 6
ಇನ್ನು ಮೊದಲು ಬ್ಯಾಟಿಂಗ್ ಮಾಡಿದ ಚೆಪಾಕ್ ಸೂಪರ್ ಗಿಲ್ಲಿಸ್ 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 217 ರನ್ ಮಾಡಿದರೆ, ಸೇಲಂ ಸ್ಪಾರ್ಟನ್ಸ್ ತಂಡವು 165 ರನ್ ಮಾತ್ರ ಗಳಿಸಲು ಶಕ್ತವಾಯಿತು. ಆ ಮೂಲಕ 52 ರನ್ ಗಳ ಹೀನಾಯ ಸೋಲು ಕಂಡಿತು.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…