ಚೆನ್ನೈ: ತಮಿಳುನಾಡು ಪ್ರೀಮಿಯರ್ ಲೀಗ್ ನಲ್ಲಿ ಕ್ರಿಕೆಟ್ ಜಗತ್ತಿನ ದುಬಾರಿ ಎಸೆತವೊಂದು ದಾಖಲಾಗಿದ್ದು, ಬೌಲರ್ ಓರ್ವ ಒಂದೇ ಎಸೆತದಲ್ಲಿ ಬರೊಬ್ಬರಿ 18 ರನ್ ನೀಡಿರುವ ಘಟನೆ ನಡೆದಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಆರಂಭವಾಗಿರುವ ತಮಿಳುನಾಡು ಪ್ರೀಮಿಯರ್ ಲೀಗ್ ನ ಎರಡನೇ ಪಂದ್ಯವೇ ಕ್ರಿಕೆಟ್ ಜಗತ್ತಿನಲ್ಲಿ ಭಾರಿ ಸದ್ದು ಮಾಡಿದೆ. ಮಂಗಳವಾರ ನಡೆದ ಪಂದ್ಯದಲ್ಲಿ ಬೌಲರ್ ಒಬ್ಬರು ಒಂದು ಎಸೆತದಲ್ಲಿ 18 ರನ್ ಬಿಟ್ಟುಕೊಟ್ಟು ಕ್ರಿಕೆಟ್ ಜಗತ್ತಿನ ದುಬಾರಿ ಎಸೆತವನ್ನು ಎಸೆದಿದ್ದಾರೆ.
ಸೇಲಂ ಸ್ಪಾರ್ಟನ್ಸ್ ಮತ್ತು ಚೆಪಾಕ್ ಸೂಪರ್ ಗಿಲ್ಲಿಸ್ ತಂಡದ ನಡುವಿನ ಪಂದ್ಯದಲ್ಲಿ ಈ ಘಟನೆ ನಡೆದಿದ್ದು, ಸೇಲಂ ಸ್ಪಾರ್ಟನ್ಸ್ ನಾಯಕ ಮತ್ತು ವೇಗದ ಬೌಲರ್ ಅಭಿಷೇಕ್ ತನ್ವಾರ್ ಈ ಕೆಟ್ಟ ದಾಖಲೆಗೆ ಪಾತ್ರರಾಗಿದ್ದಾರೆ
ಚೆಪಾಕ್ ತಂಡದ ಬ್ಯಾಟಿಂಗ್ ನ ಕೊನೆಯ ಎಸೆತವಾಗಿತ್ತು. 20ನೇ ಓವರ್ ನ ಕೊನೆಯ ಎಸೆತವನ್ನು ಅಭಿಷೇಕ್ ಯಾರ್ಕರ್ ಎಸೆದಿದ್ದರು. ಬ್ಯಾಟರ್ ಬೌಲ್ಡ್ ಆಗಿದ್ದರು. ಆದರೆ ಅದು ನೋ ಬಾಲ್ ಆಗಿತ್ತು. ಮುಂದಿನ ಎಸೆತದಲ್ಲಿ ಬ್ಯಾಟರ್ ಸಂಜಯ್ ಯಾದವ್ ಸಿಕ್ಸರ್ ಬಾರಿಸಿದರು. ಆದರೆ ಅದು ಕೂಡಾ ನೋ ಬಾಲ್ ಆಗಿತ್ತು.. ತನ್ವಾರ್ ಮತ್ತೊಂದು ಚೆಂಡೆಸೆದರು.
ಸಂಜಯ್ ಯಾದವ್ ಎರಡು ರನ್ ಓಡಿದರು. ಆದರೆ ಆ ಎಸೆತವೂ ನೋ ಬಾಲ್. ಮುಂದಿನ ಎಸೆತ ವೈಡ್ ಬಾಲ್. ಕೊನೆಗೆ ತನ್ವಾರ್ ಸರಿಯಾದ ಎಸೆತ ಹಾಕಿದರು. ಆದರೆ ಆ ಎಸೆತವನ್ನು ಸಂಜಯ್ ಯಾದವ್ ಸಿಕ್ಸರ್ ಗೆ ಬಾರಿಸಿದ್ದರು. ಆ ಮೂಲಕ ಅಭಿಷೇಕ್ ತನ್ವಾರ್ ಒಂದೇ ಎಸೆತದಲ್ಲಿ ಬರೊಬ್ಬರಿ 18 ರನ್ ನೀಡಿದಂತಾಯಿತು.
ಒಟ್ಟಾರೆ ಆ ಓವರ್ ನಲ್ಲಿ ಅಭಿಷೇಕ್ ತನ್ವಾರ್ ಒಟ್ಟು 25 ರನ್ ಗಳನ್ನು ನೀಡಿದ್ದರು. ಅಭಿಷೇಕ್ ತನ್ವಾರ್ ಅವರ ಕೊನೆಯ ಓವರ್ ಹೀಗಿತ್ತು: 1 4 0 1 N 1 N N6 N2 Wd 6
ಇನ್ನು ಮೊದಲು ಬ್ಯಾಟಿಂಗ್ ಮಾಡಿದ ಚೆಪಾಕ್ ಸೂಪರ್ ಗಿಲ್ಲಿಸ್ 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 217 ರನ್ ಮಾಡಿದರೆ, ಸೇಲಂ ಸ್ಪಾರ್ಟನ್ಸ್ ತಂಡವು 165 ರನ್ ಮಾತ್ರ ಗಳಿಸಲು ಶಕ್ತವಾಯಿತು. ಆ ಮೂಲಕ 52 ರನ್ ಗಳ ಹೀನಾಯ ಸೋಲು ಕಂಡಿತು.
ನೆಲಮಂಗಲ: ಕೆನಡಾ ದೇಶದಲ್ಲಿ ಕನ್ನಡಿಗನನ್ನು ಗುಂಡಿಟ್ಟು ಹತ್ಯೆ ಮಾಡಿದ ಪ್ರಕರಣದಲ್ಲಿ ಕೊಲೆ ಮಾಡಿರುವ ಆರೋಪಿ ಭಾವಚಿತ್ರವನ್ನು ಕೆನಡಾದ ಟೊರಂಟೊ ಪೊಲೀಸರು…
ಕೊಡಗು: ಸಂಸದ ಯದುವೀರ್ ಕೃಷ್ಣದತತ ಚಾಮರಾಜ ಒಡೆಯರ್ ಅವರ ಪರಿಶ್ರಮದ ಫಲವಾಗಿ ಕೊಡಗಿನಲ್ಲಿ ಪಾಸ್ಪೋರ್ಟ್ ಮೇಳ ಆಯೋಜಿಸಲು ಬೆಂಗಳೂರು ವಿಭಾಗೀಯ…
ಟೆಹರಾನ್: ಇರಾನ್ ಸರ್ವೋಚ್ಛ ನಾಯಕರಾಗಿದ್ದ ಅಯತೊಲ್ಲಾ ಅಲಿ ಖಮೇನಿಯವರು ಮಗ ಉತ್ತರಾಧಿಕಾಗಲು ಪ್ರಮುಖ ಆಯ್ಕೆಯಾಗಿ ಹೊರಹೊಮ್ಮಿದ್ದಾರೆ. ಇರಾನ್ನ ಮುಂದಿನ ಸರ್ವೋಚ್ಛ…
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಿಗ್ ಬಜೆಟ್ ಸಿನಿಮಾ ಟಾಕ್ಸಿಕ್ ಇರಾನ್- ಇಸ್ರೇಲ್ ಯುದ್ಧದ ಕಾರಣದಿಂದಾಗಿ ಮುಂದೂಡಲ್ಪಟ್ಟಿದೆ. ಮಾರ್ಚ್.19ರಂದು ಬಿಡುಗಡೆಯಾಗಬೇಕಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮದ ಚಂಗಡಿ ಗ್ರಾಮದ ಸಮೀಪ ಪ್ರತಿನಿತ್ಯ…