ಕ್ರೀಡೆ

TNPL 2023 ಹೀನಾಯ ದಾಖಲೆ| ಒಂದೇ ಎಸೆತದಲ್ಲಿ 18 ರನ್: ಕ್ರಿಕೆಟ್ ಜಗತ್ತಿನ ದುಬಾರಿ ಬೌಲರ್

ಚೆನ್ನೈ: ತಮಿಳುನಾಡು ಪ್ರೀಮಿಯರ್ ಲೀಗ್ ನಲ್ಲಿ ಕ್ರಿಕೆಟ್ ಜಗತ್ತಿನ ದುಬಾರಿ ಎಸೆತವೊಂದು ದಾಖಲಾಗಿದ್ದು, ಬೌಲರ್ ಓರ್ವ ಒಂದೇ ಎಸೆತದಲ್ಲಿ ಬರೊಬ್ಬರಿ 18 ರನ್ ನೀಡಿರುವ ಘಟನೆ ನಡೆದಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಆರಂಭವಾಗಿರುವ ತಮಿಳುನಾಡು ಪ್ರೀಮಿಯರ್ ಲೀಗ್ ನ ಎರಡನೇ ಪಂದ್ಯವೇ ಕ್ರಿಕೆಟ್ ಜಗತ್ತಿನಲ್ಲಿ ಭಾರಿ ಸದ್ದು ಮಾಡಿದೆ. ಮಂಗಳವಾರ ನಡೆದ ಪಂದ್ಯದಲ್ಲಿ ಬೌಲರ್ ಒಬ್ಬರು ಒಂದು ಎಸೆತದಲ್ಲಿ 18 ರನ್ ಬಿಟ್ಟುಕೊಟ್ಟು ಕ್ರಿಕೆಟ್ ಜಗತ್ತಿನ ದುಬಾರಿ ಎಸೆತವನ್ನು ಎಸೆದಿದ್ದಾರೆ.

ಸೇಲಂ ಸ್ಪಾರ್ಟನ್ಸ್ ಮತ್ತು ಚೆಪಾಕ್ ಸೂಪರ್ ಗಿಲ್ಲಿಸ್ ತಂಡದ ನಡುವಿನ ಪಂದ್ಯದಲ್ಲಿ ಈ ಘಟನೆ ನಡೆದಿದ್ದು, ಸೇಲಂ ಸ್ಪಾರ್ಟನ್ಸ್ ನಾಯಕ ಮತ್ತು ವೇಗದ ಬೌಲರ್ ಅಭಿಷೇಕ್ ತನ್ವಾರ್ ಈ ಕೆಟ್ಟ ದಾಖಲೆಗೆ ಪಾತ್ರರಾಗಿದ್ದಾರೆ

ಚೆಪಾಕ್ ತಂಡದ ಬ್ಯಾಟಿಂಗ್ ನ ಕೊನೆಯ ಎಸೆತವಾಗಿತ್ತು. 20ನೇ ಓವರ್ ನ ಕೊನೆಯ ಎಸೆತವನ್ನು ಅಭಿಷೇಕ್ ಯಾರ್ಕರ್ ಎಸೆದಿದ್ದರು. ಬ್ಯಾಟರ್ ಬೌಲ್ಡ್ ಆಗಿದ್ದರು. ಆದರೆ ಅದು ನೋ ಬಾಲ್ ಆಗಿತ್ತು. ಮುಂದಿನ ಎಸೆತದಲ್ಲಿ ಬ್ಯಾಟರ್ ಸಂಜಯ್ ಯಾದವ್ ಸಿಕ್ಸರ್ ಬಾರಿಸಿದರು. ಆದರೆ ಅದು ಕೂಡಾ ನೋ ಬಾಲ್ ಆಗಿತ್ತು.. ತನ್ವಾರ್ ಮತ್ತೊಂದು ಚೆಂಡೆಸೆದರು.

ಸಂಜಯ್ ಯಾದವ್ ಎರಡು ರನ್ ಓಡಿದರು. ಆದರೆ ಆ ಎಸೆತವೂ ನೋ ಬಾಲ್. ಮುಂದಿನ ಎಸೆತ ವೈಡ್ ಬಾಲ್. ಕೊನೆಗೆ ತನ್ವಾರ್ ಸರಿಯಾದ ಎಸೆತ ಹಾಕಿದರು. ಆದರೆ ಆ ಎಸೆತವನ್ನು ಸಂಜಯ್ ಯಾದವ್ ಸಿಕ್ಸರ್ ಗೆ ಬಾರಿಸಿದ್ದರು. ಆ ಮೂಲಕ ಅಭಿಷೇಕ್ ತನ್ವಾರ್ ಒಂದೇ ಎಸೆತದಲ್ಲಿ ಬರೊಬ್ಬರಿ 18 ರನ್ ನೀಡಿದಂತಾಯಿತು.

ಒಟ್ಟಾರೆ ಆ ಓವರ್ ನಲ್ಲಿ ಅಭಿಷೇಕ್ ತನ್ವಾರ್ ಒಟ್ಟು 25 ರನ್ ಗಳನ್ನು ನೀಡಿದ್ದರು. ಅಭಿಷೇಕ್ ತನ್ವಾರ್ ಅವರ ಕೊನೆಯ ಓವರ್ ಹೀಗಿತ್ತು: 1 4 0 1 N 1 N N6 N2 Wd 6

ಇನ್ನು ಮೊದಲು ಬ್ಯಾಟಿಂಗ್ ಮಾಡಿದ ಚೆಪಾಕ್ ಸೂಪರ್ ಗಿಲ್ಲಿಸ್ 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 217 ರನ್ ಮಾಡಿದರೆ, ಸೇಲಂ ಸ್ಪಾರ್ಟನ್ಸ್ ತಂಡವು 165 ರನ್ ಮಾತ್ರ ಗಳಿಸಲು ಶಕ್ತವಾಯಿತು. ಆ ಮೂಲಕ 52 ರನ್ ಗಳ  ಹೀನಾಯ ಸೋಲು ಕಂಡಿತು.

andolanait

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

42 mins ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

6 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

13 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

13 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

13 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

13 hours ago