ಕ್ರೀಡೆ

TNPL 2023 ಹೀನಾಯ ದಾಖಲೆ| ಒಂದೇ ಎಸೆತದಲ್ಲಿ 18 ರನ್: ಕ್ರಿಕೆಟ್ ಜಗತ್ತಿನ ದುಬಾರಿ ಬೌಲರ್

ಚೆನ್ನೈ: ತಮಿಳುನಾಡು ಪ್ರೀಮಿಯರ್ ಲೀಗ್ ನಲ್ಲಿ ಕ್ರಿಕೆಟ್ ಜಗತ್ತಿನ ದುಬಾರಿ ಎಸೆತವೊಂದು ದಾಖಲಾಗಿದ್ದು, ಬೌಲರ್ ಓರ್ವ ಒಂದೇ ಎಸೆತದಲ್ಲಿ ಬರೊಬ್ಬರಿ 18 ರನ್ ನೀಡಿರುವ ಘಟನೆ ನಡೆದಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಆರಂಭವಾಗಿರುವ ತಮಿಳುನಾಡು ಪ್ರೀಮಿಯರ್ ಲೀಗ್ ನ ಎರಡನೇ ಪಂದ್ಯವೇ ಕ್ರಿಕೆಟ್ ಜಗತ್ತಿನಲ್ಲಿ ಭಾರಿ ಸದ್ದು ಮಾಡಿದೆ. ಮಂಗಳವಾರ ನಡೆದ ಪಂದ್ಯದಲ್ಲಿ ಬೌಲರ್ ಒಬ್ಬರು ಒಂದು ಎಸೆತದಲ್ಲಿ 18 ರನ್ ಬಿಟ್ಟುಕೊಟ್ಟು ಕ್ರಿಕೆಟ್ ಜಗತ್ತಿನ ದುಬಾರಿ ಎಸೆತವನ್ನು ಎಸೆದಿದ್ದಾರೆ.

ಸೇಲಂ ಸ್ಪಾರ್ಟನ್ಸ್ ಮತ್ತು ಚೆಪಾಕ್ ಸೂಪರ್ ಗಿಲ್ಲಿಸ್ ತಂಡದ ನಡುವಿನ ಪಂದ್ಯದಲ್ಲಿ ಈ ಘಟನೆ ನಡೆದಿದ್ದು, ಸೇಲಂ ಸ್ಪಾರ್ಟನ್ಸ್ ನಾಯಕ ಮತ್ತು ವೇಗದ ಬೌಲರ್ ಅಭಿಷೇಕ್ ತನ್ವಾರ್ ಈ ಕೆಟ್ಟ ದಾಖಲೆಗೆ ಪಾತ್ರರಾಗಿದ್ದಾರೆ

ಚೆಪಾಕ್ ತಂಡದ ಬ್ಯಾಟಿಂಗ್ ನ ಕೊನೆಯ ಎಸೆತವಾಗಿತ್ತು. 20ನೇ ಓವರ್ ನ ಕೊನೆಯ ಎಸೆತವನ್ನು ಅಭಿಷೇಕ್ ಯಾರ್ಕರ್ ಎಸೆದಿದ್ದರು. ಬ್ಯಾಟರ್ ಬೌಲ್ಡ್ ಆಗಿದ್ದರು. ಆದರೆ ಅದು ನೋ ಬಾಲ್ ಆಗಿತ್ತು. ಮುಂದಿನ ಎಸೆತದಲ್ಲಿ ಬ್ಯಾಟರ್ ಸಂಜಯ್ ಯಾದವ್ ಸಿಕ್ಸರ್ ಬಾರಿಸಿದರು. ಆದರೆ ಅದು ಕೂಡಾ ನೋ ಬಾಲ್ ಆಗಿತ್ತು.. ತನ್ವಾರ್ ಮತ್ತೊಂದು ಚೆಂಡೆಸೆದರು.

ಸಂಜಯ್ ಯಾದವ್ ಎರಡು ರನ್ ಓಡಿದರು. ಆದರೆ ಆ ಎಸೆತವೂ ನೋ ಬಾಲ್. ಮುಂದಿನ ಎಸೆತ ವೈಡ್ ಬಾಲ್. ಕೊನೆಗೆ ತನ್ವಾರ್ ಸರಿಯಾದ ಎಸೆತ ಹಾಕಿದರು. ಆದರೆ ಆ ಎಸೆತವನ್ನು ಸಂಜಯ್ ಯಾದವ್ ಸಿಕ್ಸರ್ ಗೆ ಬಾರಿಸಿದ್ದರು. ಆ ಮೂಲಕ ಅಭಿಷೇಕ್ ತನ್ವಾರ್ ಒಂದೇ ಎಸೆತದಲ್ಲಿ ಬರೊಬ್ಬರಿ 18 ರನ್ ನೀಡಿದಂತಾಯಿತು.

ಒಟ್ಟಾರೆ ಆ ಓವರ್ ನಲ್ಲಿ ಅಭಿಷೇಕ್ ತನ್ವಾರ್ ಒಟ್ಟು 25 ರನ್ ಗಳನ್ನು ನೀಡಿದ್ದರು. ಅಭಿಷೇಕ್ ತನ್ವಾರ್ ಅವರ ಕೊನೆಯ ಓವರ್ ಹೀಗಿತ್ತು: 1 4 0 1 N 1 N N6 N2 Wd 6

ಇನ್ನು ಮೊದಲು ಬ್ಯಾಟಿಂಗ್ ಮಾಡಿದ ಚೆಪಾಕ್ ಸೂಪರ್ ಗಿಲ್ಲಿಸ್ 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 217 ರನ್ ಮಾಡಿದರೆ, ಸೇಲಂ ಸ್ಪಾರ್ಟನ್ಸ್ ತಂಡವು 165 ರನ್ ಮಾತ್ರ ಗಳಿಸಲು ಶಕ್ತವಾಯಿತು. ಆ ಮೂಲಕ 52 ರನ್ ಗಳ  ಹೀನಾಯ ಸೋಲು ಕಂಡಿತು.

andolanait

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

8 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

10 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

11 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

12 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

14 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

14 hours ago