ಚೆನ್ನೈ: ತಮಿಳುನಾಡು ಪ್ರೀಮಿಯರ್ ಲೀಗ್ ನಲ್ಲಿ ಕ್ರಿಕೆಟ್ ಜಗತ್ತಿನ ದುಬಾರಿ ಎಸೆತವೊಂದು ದಾಖಲಾಗಿದ್ದು, ಬೌಲರ್ ಓರ್ವ ಒಂದೇ ಎಸೆತದಲ್ಲಿ ಬರೊಬ್ಬರಿ 18 ರನ್ ನೀಡಿರುವ ಘಟನೆ ನಡೆದಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಆರಂಭವಾಗಿರುವ ತಮಿಳುನಾಡು ಪ್ರೀಮಿಯರ್ ಲೀಗ್ ನ ಎರಡನೇ ಪಂದ್ಯವೇ ಕ್ರಿಕೆಟ್ ಜಗತ್ತಿನಲ್ಲಿ ಭಾರಿ ಸದ್ದು ಮಾಡಿದೆ. ಮಂಗಳವಾರ ನಡೆದ ಪಂದ್ಯದಲ್ಲಿ ಬೌಲರ್ ಒಬ್ಬರು ಒಂದು ಎಸೆತದಲ್ಲಿ 18 ರನ್ ಬಿಟ್ಟುಕೊಟ್ಟು ಕ್ರಿಕೆಟ್ ಜಗತ್ತಿನ ದುಬಾರಿ ಎಸೆತವನ್ನು ಎಸೆದಿದ್ದಾರೆ.
ಸೇಲಂ ಸ್ಪಾರ್ಟನ್ಸ್ ಮತ್ತು ಚೆಪಾಕ್ ಸೂಪರ್ ಗಿಲ್ಲಿಸ್ ತಂಡದ ನಡುವಿನ ಪಂದ್ಯದಲ್ಲಿ ಈ ಘಟನೆ ನಡೆದಿದ್ದು, ಸೇಲಂ ಸ್ಪಾರ್ಟನ್ಸ್ ನಾಯಕ ಮತ್ತು ವೇಗದ ಬೌಲರ್ ಅಭಿಷೇಕ್ ತನ್ವಾರ್ ಈ ಕೆಟ್ಟ ದಾಖಲೆಗೆ ಪಾತ್ರರಾಗಿದ್ದಾರೆ
ಚೆಪಾಕ್ ತಂಡದ ಬ್ಯಾಟಿಂಗ್ ನ ಕೊನೆಯ ಎಸೆತವಾಗಿತ್ತು. 20ನೇ ಓವರ್ ನ ಕೊನೆಯ ಎಸೆತವನ್ನು ಅಭಿಷೇಕ್ ಯಾರ್ಕರ್ ಎಸೆದಿದ್ದರು. ಬ್ಯಾಟರ್ ಬೌಲ್ಡ್ ಆಗಿದ್ದರು. ಆದರೆ ಅದು ನೋ ಬಾಲ್ ಆಗಿತ್ತು. ಮುಂದಿನ ಎಸೆತದಲ್ಲಿ ಬ್ಯಾಟರ್ ಸಂಜಯ್ ಯಾದವ್ ಸಿಕ್ಸರ್ ಬಾರಿಸಿದರು. ಆದರೆ ಅದು ಕೂಡಾ ನೋ ಬಾಲ್ ಆಗಿತ್ತು.. ತನ್ವಾರ್ ಮತ್ತೊಂದು ಚೆಂಡೆಸೆದರು.
ಸಂಜಯ್ ಯಾದವ್ ಎರಡು ರನ್ ಓಡಿದರು. ಆದರೆ ಆ ಎಸೆತವೂ ನೋ ಬಾಲ್. ಮುಂದಿನ ಎಸೆತ ವೈಡ್ ಬಾಲ್. ಕೊನೆಗೆ ತನ್ವಾರ್ ಸರಿಯಾದ ಎಸೆತ ಹಾಕಿದರು. ಆದರೆ ಆ ಎಸೆತವನ್ನು ಸಂಜಯ್ ಯಾದವ್ ಸಿಕ್ಸರ್ ಗೆ ಬಾರಿಸಿದ್ದರು. ಆ ಮೂಲಕ ಅಭಿಷೇಕ್ ತನ್ವಾರ್ ಒಂದೇ ಎಸೆತದಲ್ಲಿ ಬರೊಬ್ಬರಿ 18 ರನ್ ನೀಡಿದಂತಾಯಿತು.
ಒಟ್ಟಾರೆ ಆ ಓವರ್ ನಲ್ಲಿ ಅಭಿಷೇಕ್ ತನ್ವಾರ್ ಒಟ್ಟು 25 ರನ್ ಗಳನ್ನು ನೀಡಿದ್ದರು. ಅಭಿಷೇಕ್ ತನ್ವಾರ್ ಅವರ ಕೊನೆಯ ಓವರ್ ಹೀಗಿತ್ತು: 1 4 0 1 N 1 N N6 N2 Wd 6
ಇನ್ನು ಮೊದಲು ಬ್ಯಾಟಿಂಗ್ ಮಾಡಿದ ಚೆಪಾಕ್ ಸೂಪರ್ ಗಿಲ್ಲಿಸ್ 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 217 ರನ್ ಮಾಡಿದರೆ, ಸೇಲಂ ಸ್ಪಾರ್ಟನ್ಸ್ ತಂಡವು 165 ರನ್ ಮಾತ್ರ ಗಳಿಸಲು ಶಕ್ತವಾಯಿತು. ಆ ಮೂಲಕ 52 ರನ್ ಗಳ ಹೀನಾಯ ಸೋಲು ಕಂಡಿತು.
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…
ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.28ರವರೆಗೂ ಕರ್ನಾಟಕದಲ್ಲಿ ಮಳೆ…
ನವದೆಹಲಿ: ನೀಟ್ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್ ಹಾಗೂ…