ಕ್ರೀಡೆ

ಇಂದು ಭಾರತ-ಪಾಕ್ ಮತ್ತೆ ಮುಖಾಮುಖಿ

ದುಬೈ: ಶುಕ್ರವಾರ ನಡೆದ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಹಾಂಗ್‌ಕಾಂಗ್ ವಿರುದ್ಧ ಪಾಕಿಸ್ತಾನ ದಾಖಲೆಯ ೧೫೫ ರನ್ ಅಂತರದ ಗೆಲುವು ದಾಖಲಿಸಿತು. ಇದರೊಂದಿಗೆ ಭಾನುವಾರ ನಡೆಯಲಿರುವ ಸೂಪರ್ ೪ ಹಂತದ ಪಂದ್ಯದಲ್ಲಿ ಭಾರತ ತಂಡವನ್ನು ಪಾಕಿಸ್ತಾನ ಎದುರಿಸಲಿದೆ. ಸೂಪರ್ ೪ ಹಂತದ ಮೊದಲ ಪಂದ್ಯ ಶಾರ್ಜಾದಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ ರಾತ್ರಿ ೭.೩೦ಕ್ಕೆ ಪಂದ್ಯ ಆರಂಭವಾಗಲಿದೆ.
ಎ ಗುಂಪಿನಲ್ಲಿ ಆಡಿರುವ ಎರಡೂ ಪಂದ್ಯಗಳಲ್ಲಿ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ, ಗುಂಪಿನ ಅಗ್ರಸ್ಥಾನಿಯಾಗಿ ಸೂಪರ್ ೪ ಹಂತಕ್ಕೆ ಲಗ್ಗೆಯಿಟ್ಟಿದೆ. ಹಾಂಗ್‌ಕಾಂಗ್ ಎರಡು ಪಂದ್ಯಗಳಲ್ಲಿ ಸೋತು ಟೂರ್ನಿಯಿಂದ ನಿರ್ಗಮಿಸಿದೆ.
ಸೂಪರ್ ೪ ಹಂತದಲ್ಲಿ ಮೊದಲೆರಡು ಸ್ಥಾನ ಪಡೆದ ತಂಡಗಳು ಫೈನಲ್‌ಗೆ ತೇರ್ಗಡೆ ಪಡೆಯಲಿವೆ. ಹೀಗಾಗಿ ಫೈನಲ್‌ನಲ್ಲೂ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮತ್ತೆ ಮುಖಾಮುಖಿಯಾಗುವ ಸಾಧ್ಯತೆಗಳಿವೆ.
ಬಿ ಗುಂಪಿನಲ್ಲಿ ಅಫ್ಘಾನಿಸ್ತಾನ ಹಾಗೂ ಶ್ರೀಲಂಕಾ ತಂಡಗಳು ಸೂಪರ್ ೪ ಹಂತಕ್ಕೆ ತೇರ್ಗಡೆ ಹೊಂದಿವೆ. ಅಫ್ಘಾನಿಸ್ತಾನ ಎರಡೂ ಪಂದ್ಯಗಳನ್ನು ಗೆದ್ದರೆ ಲಂಕಾ ಅಫ್ಗಾನ್ ವಿರುದ್ಧ ಸೋಲು ಅನುಭವಿಸಿತ್ತು.

ಏಷ್ಯಾಕಪ್‌ನಲ್ಲಿ ೧೬ ಬಾರಿ ಮಖಾಮುಖಿಯಾಗಿದ್ದು, ೯ ಬಾರಿ ಭಾರತಕ್ಕೆ ಗೆಲುವು ಸಾಧಿಸಿದೆ. ೫ ಬಾರಿ ಪಾಕಿಸ್ತಾನಕ್ಕೆ ಜಯ ಹಾಗೂ ೨ ಪಂದ್ಯಗಳಲ್ಲಿ ಫಲಿತಾಂಶವಿಲ್ಲವಾಗಿದೆ.

ಭಾರತದ ಹಾದಿ…
ಸೂಪರ್ ೪ ಹಂತದಲ್ಲಿ ಭಾರತ ತನ್ನ ಮೊದಲ ಪಂದ್ಯದಲ್ಲಿ ಭಾನುವಾರ ಪಾಕಿಸ್ತಾನ ತಂಡದ ಸವಾಲನ್ನು ಎದುರಿಸಲಿದೆ. ಬಳಿಕ ಕ್ರಮವಾಗಿ ಮಂಗಳವಾರ ಶ್ರೀಲಂಕಾ ಮತ್ತು ಗುರುವಾರದಂದು ಅಫ್ಘಾನಿಸ್ತಾನ ವಿರುದ್ಧ ಸೆಣಸಲಿದೆ.

ಸೂಪರ್ ೪ ವೇಳಾಪಟ್ಟಿ:

ಸೆ.೦೪, ಭಾನುವಾರ: ಭಾರತ-ಪಾಕಿಸ್ತಾನ
ಸೆ.೦೬, ಮಂಗಳವಾರ: ಭಾರತ-ಶ್ರೀಲಂಕಾ
ಸೆ.೦೭, ಬುಧವಾರ: ಪಾಕಿಸ್ತಾನ-ಅಫ್ಘಾನಿಸ್ತಾನ
ಸೆ.೦೮, ಗುರುವಾರ: ಭಾರತ-ಅಫ್ಘಾನಿಸ್ತಾನ
ಸೆ.೦೯, ಶುಕ್ರವಾರ: ಶ್ರೀಲಂಕಾ-ಪಾಕಿಸ್ತಾನ

ಫೈನಲ್: ಸೆ.೧೧ ಭಾನುವಾರ, ದುಬೈ ನಲ್ಲಿ ನಡೆಯಲಿದೆ.

andolanait

Recent Posts

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…

3 hours ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

5 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

5 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

5 hours ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

5 hours ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

5 hours ago