ಕ್ರೀಡೆ

ಇಂದು ಭಾರತ-ಪಾಕ್ ಮತ್ತೆ ಮುಖಾಮುಖಿ

ದುಬೈ: ಶುಕ್ರವಾರ ನಡೆದ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಹಾಂಗ್‌ಕಾಂಗ್ ವಿರುದ್ಧ ಪಾಕಿಸ್ತಾನ ದಾಖಲೆಯ ೧೫೫ ರನ್ ಅಂತರದ ಗೆಲುವು ದಾಖಲಿಸಿತು. ಇದರೊಂದಿಗೆ ಭಾನುವಾರ ನಡೆಯಲಿರುವ ಸೂಪರ್ ೪ ಹಂತದ ಪಂದ್ಯದಲ್ಲಿ ಭಾರತ ತಂಡವನ್ನು ಪಾಕಿಸ್ತಾನ ಎದುರಿಸಲಿದೆ. ಸೂಪರ್ ೪ ಹಂತದ ಮೊದಲ ಪಂದ್ಯ ಶಾರ್ಜಾದಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ ರಾತ್ರಿ ೭.೩೦ಕ್ಕೆ ಪಂದ್ಯ ಆರಂಭವಾಗಲಿದೆ.
ಎ ಗುಂಪಿನಲ್ಲಿ ಆಡಿರುವ ಎರಡೂ ಪಂದ್ಯಗಳಲ್ಲಿ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ, ಗುಂಪಿನ ಅಗ್ರಸ್ಥಾನಿಯಾಗಿ ಸೂಪರ್ ೪ ಹಂತಕ್ಕೆ ಲಗ್ಗೆಯಿಟ್ಟಿದೆ. ಹಾಂಗ್‌ಕಾಂಗ್ ಎರಡು ಪಂದ್ಯಗಳಲ್ಲಿ ಸೋತು ಟೂರ್ನಿಯಿಂದ ನಿರ್ಗಮಿಸಿದೆ.
ಸೂಪರ್ ೪ ಹಂತದಲ್ಲಿ ಮೊದಲೆರಡು ಸ್ಥಾನ ಪಡೆದ ತಂಡಗಳು ಫೈನಲ್‌ಗೆ ತೇರ್ಗಡೆ ಪಡೆಯಲಿವೆ. ಹೀಗಾಗಿ ಫೈನಲ್‌ನಲ್ಲೂ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮತ್ತೆ ಮುಖಾಮುಖಿಯಾಗುವ ಸಾಧ್ಯತೆಗಳಿವೆ.
ಬಿ ಗುಂಪಿನಲ್ಲಿ ಅಫ್ಘಾನಿಸ್ತಾನ ಹಾಗೂ ಶ್ರೀಲಂಕಾ ತಂಡಗಳು ಸೂಪರ್ ೪ ಹಂತಕ್ಕೆ ತೇರ್ಗಡೆ ಹೊಂದಿವೆ. ಅಫ್ಘಾನಿಸ್ತಾನ ಎರಡೂ ಪಂದ್ಯಗಳನ್ನು ಗೆದ್ದರೆ ಲಂಕಾ ಅಫ್ಗಾನ್ ವಿರುದ್ಧ ಸೋಲು ಅನುಭವಿಸಿತ್ತು.

ಏಷ್ಯಾಕಪ್‌ನಲ್ಲಿ ೧೬ ಬಾರಿ ಮಖಾಮುಖಿಯಾಗಿದ್ದು, ೯ ಬಾರಿ ಭಾರತಕ್ಕೆ ಗೆಲುವು ಸಾಧಿಸಿದೆ. ೫ ಬಾರಿ ಪಾಕಿಸ್ತಾನಕ್ಕೆ ಜಯ ಹಾಗೂ ೨ ಪಂದ್ಯಗಳಲ್ಲಿ ಫಲಿತಾಂಶವಿಲ್ಲವಾಗಿದೆ.

ಭಾರತದ ಹಾದಿ…
ಸೂಪರ್ ೪ ಹಂತದಲ್ಲಿ ಭಾರತ ತನ್ನ ಮೊದಲ ಪಂದ್ಯದಲ್ಲಿ ಭಾನುವಾರ ಪಾಕಿಸ್ತಾನ ತಂಡದ ಸವಾಲನ್ನು ಎದುರಿಸಲಿದೆ. ಬಳಿಕ ಕ್ರಮವಾಗಿ ಮಂಗಳವಾರ ಶ್ರೀಲಂಕಾ ಮತ್ತು ಗುರುವಾರದಂದು ಅಫ್ಘಾನಿಸ್ತಾನ ವಿರುದ್ಧ ಸೆಣಸಲಿದೆ.

ಸೂಪರ್ ೪ ವೇಳಾಪಟ್ಟಿ:

ಸೆ.೦೪, ಭಾನುವಾರ: ಭಾರತ-ಪಾಕಿಸ್ತಾನ
ಸೆ.೦೬, ಮಂಗಳವಾರ: ಭಾರತ-ಶ್ರೀಲಂಕಾ
ಸೆ.೦೭, ಬುಧವಾರ: ಪಾಕಿಸ್ತಾನ-ಅಫ್ಘಾನಿಸ್ತಾನ
ಸೆ.೦೮, ಗುರುವಾರ: ಭಾರತ-ಅಫ್ಘಾನಿಸ್ತಾನ
ಸೆ.೦೯, ಶುಕ್ರವಾರ: ಶ್ರೀಲಂಕಾ-ಪಾಕಿಸ್ತಾನ

ಫೈನಲ್: ಸೆ.೧೧ ಭಾನುವಾರ, ದುಬೈ ನಲ್ಲಿ ನಡೆಯಲಿದೆ.

andolanait

Recent Posts

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ-CBC ಕಚೇರಿ ಸ್ಥಗಿತ ಬೇಡ : ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಸಚಿವ ಎಚ್‌ಡಿಕೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…

10 hours ago

ಉನ್ನಾವೋ ಅತ್ಯಾಚಾರ ಪ್ರಕರಣ : ರಾಹುಲ್‌ಗಾಂಧಿ ಭೇಟಿಯಾದ ಸಂತ್ರಸ್ತೆ ಕುಟುಂಬ

ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…

10 hours ago

ಉನ್ನಾವೊ ಪ್ರಕರಣ : ಸೆಂಗರ್‌ ಶಿಕ್ಷೆ ಅಮಾನತು ; ಸಂತ್ರಸ್ತೆ ತಾಯಿ ಹೇಳಿದಿಷ್ಟು?

ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…

10 hours ago

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…

11 hours ago

ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…

11 hours ago

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನೇಮಕಾತಿ ; ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…

11 hours ago