ಕ್ರೀಡೆ

ಇಂದು ಭಾರತ-ಪಾಕ್ ಮತ್ತೆ ಮುಖಾಮುಖಿ

ದುಬೈ: ಶುಕ್ರವಾರ ನಡೆದ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಹಾಂಗ್‌ಕಾಂಗ್ ವಿರುದ್ಧ ಪಾಕಿಸ್ತಾನ ದಾಖಲೆಯ ೧೫೫ ರನ್ ಅಂತರದ ಗೆಲುವು ದಾಖಲಿಸಿತು. ಇದರೊಂದಿಗೆ ಭಾನುವಾರ ನಡೆಯಲಿರುವ ಸೂಪರ್ ೪ ಹಂತದ ಪಂದ್ಯದಲ್ಲಿ ಭಾರತ ತಂಡವನ್ನು ಪಾಕಿಸ್ತಾನ ಎದುರಿಸಲಿದೆ. ಸೂಪರ್ ೪ ಹಂತದ ಮೊದಲ ಪಂದ್ಯ ಶಾರ್ಜಾದಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ ರಾತ್ರಿ ೭.೩೦ಕ್ಕೆ ಪಂದ್ಯ ಆರಂಭವಾಗಲಿದೆ.
ಎ ಗುಂಪಿನಲ್ಲಿ ಆಡಿರುವ ಎರಡೂ ಪಂದ್ಯಗಳಲ್ಲಿ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ, ಗುಂಪಿನ ಅಗ್ರಸ್ಥಾನಿಯಾಗಿ ಸೂಪರ್ ೪ ಹಂತಕ್ಕೆ ಲಗ್ಗೆಯಿಟ್ಟಿದೆ. ಹಾಂಗ್‌ಕಾಂಗ್ ಎರಡು ಪಂದ್ಯಗಳಲ್ಲಿ ಸೋತು ಟೂರ್ನಿಯಿಂದ ನಿರ್ಗಮಿಸಿದೆ.
ಸೂಪರ್ ೪ ಹಂತದಲ್ಲಿ ಮೊದಲೆರಡು ಸ್ಥಾನ ಪಡೆದ ತಂಡಗಳು ಫೈನಲ್‌ಗೆ ತೇರ್ಗಡೆ ಪಡೆಯಲಿವೆ. ಹೀಗಾಗಿ ಫೈನಲ್‌ನಲ್ಲೂ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮತ್ತೆ ಮುಖಾಮುಖಿಯಾಗುವ ಸಾಧ್ಯತೆಗಳಿವೆ.
ಬಿ ಗುಂಪಿನಲ್ಲಿ ಅಫ್ಘಾನಿಸ್ತಾನ ಹಾಗೂ ಶ್ರೀಲಂಕಾ ತಂಡಗಳು ಸೂಪರ್ ೪ ಹಂತಕ್ಕೆ ತೇರ್ಗಡೆ ಹೊಂದಿವೆ. ಅಫ್ಘಾನಿಸ್ತಾನ ಎರಡೂ ಪಂದ್ಯಗಳನ್ನು ಗೆದ್ದರೆ ಲಂಕಾ ಅಫ್ಗಾನ್ ವಿರುದ್ಧ ಸೋಲು ಅನುಭವಿಸಿತ್ತು.

ಏಷ್ಯಾಕಪ್‌ನಲ್ಲಿ ೧೬ ಬಾರಿ ಮಖಾಮುಖಿಯಾಗಿದ್ದು, ೯ ಬಾರಿ ಭಾರತಕ್ಕೆ ಗೆಲುವು ಸಾಧಿಸಿದೆ. ೫ ಬಾರಿ ಪಾಕಿಸ್ತಾನಕ್ಕೆ ಜಯ ಹಾಗೂ ೨ ಪಂದ್ಯಗಳಲ್ಲಿ ಫಲಿತಾಂಶವಿಲ್ಲವಾಗಿದೆ.

ಭಾರತದ ಹಾದಿ…
ಸೂಪರ್ ೪ ಹಂತದಲ್ಲಿ ಭಾರತ ತನ್ನ ಮೊದಲ ಪಂದ್ಯದಲ್ಲಿ ಭಾನುವಾರ ಪಾಕಿಸ್ತಾನ ತಂಡದ ಸವಾಲನ್ನು ಎದುರಿಸಲಿದೆ. ಬಳಿಕ ಕ್ರಮವಾಗಿ ಮಂಗಳವಾರ ಶ್ರೀಲಂಕಾ ಮತ್ತು ಗುರುವಾರದಂದು ಅಫ್ಘಾನಿಸ್ತಾನ ವಿರುದ್ಧ ಸೆಣಸಲಿದೆ.

ಸೂಪರ್ ೪ ವೇಳಾಪಟ್ಟಿ:

ಸೆ.೦೪, ಭಾನುವಾರ: ಭಾರತ-ಪಾಕಿಸ್ತಾನ
ಸೆ.೦೬, ಮಂಗಳವಾರ: ಭಾರತ-ಶ್ರೀಲಂಕಾ
ಸೆ.೦೭, ಬುಧವಾರ: ಪಾಕಿಸ್ತಾನ-ಅಫ್ಘಾನಿಸ್ತಾನ
ಸೆ.೦೮, ಗುರುವಾರ: ಭಾರತ-ಅಫ್ಘಾನಿಸ್ತಾನ
ಸೆ.೦೯, ಶುಕ್ರವಾರ: ಶ್ರೀಲಂಕಾ-ಪಾಕಿಸ್ತಾನ

ಫೈನಲ್: ಸೆ.೧೧ ಭಾನುವಾರ, ದುಬೈ ನಲ್ಲಿ ನಡೆಯಲಿದೆ.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

1 hour ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

3 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

4 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

6 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

7 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

7 hours ago