ಕ್ರೀಡೆ

ಇಂದು ಭಾರತ-ಪಾಕ್ ಮತ್ತೆ ಮುಖಾಮುಖಿ

ದುಬೈ: ಶುಕ್ರವಾರ ನಡೆದ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಹಾಂಗ್‌ಕಾಂಗ್ ವಿರುದ್ಧ ಪಾಕಿಸ್ತಾನ ದಾಖಲೆಯ ೧೫೫ ರನ್ ಅಂತರದ ಗೆಲುವು ದಾಖಲಿಸಿತು. ಇದರೊಂದಿಗೆ ಭಾನುವಾರ ನಡೆಯಲಿರುವ ಸೂಪರ್ ೪ ಹಂತದ ಪಂದ್ಯದಲ್ಲಿ ಭಾರತ ತಂಡವನ್ನು ಪಾಕಿಸ್ತಾನ ಎದುರಿಸಲಿದೆ. ಸೂಪರ್ ೪ ಹಂತದ ಮೊದಲ ಪಂದ್ಯ ಶಾರ್ಜಾದಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ ರಾತ್ರಿ ೭.೩೦ಕ್ಕೆ ಪಂದ್ಯ ಆರಂಭವಾಗಲಿದೆ.
ಎ ಗುಂಪಿನಲ್ಲಿ ಆಡಿರುವ ಎರಡೂ ಪಂದ್ಯಗಳಲ್ಲಿ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ, ಗುಂಪಿನ ಅಗ್ರಸ್ಥಾನಿಯಾಗಿ ಸೂಪರ್ ೪ ಹಂತಕ್ಕೆ ಲಗ್ಗೆಯಿಟ್ಟಿದೆ. ಹಾಂಗ್‌ಕಾಂಗ್ ಎರಡು ಪಂದ್ಯಗಳಲ್ಲಿ ಸೋತು ಟೂರ್ನಿಯಿಂದ ನಿರ್ಗಮಿಸಿದೆ.
ಸೂಪರ್ ೪ ಹಂತದಲ್ಲಿ ಮೊದಲೆರಡು ಸ್ಥಾನ ಪಡೆದ ತಂಡಗಳು ಫೈನಲ್‌ಗೆ ತೇರ್ಗಡೆ ಪಡೆಯಲಿವೆ. ಹೀಗಾಗಿ ಫೈನಲ್‌ನಲ್ಲೂ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮತ್ತೆ ಮುಖಾಮುಖಿಯಾಗುವ ಸಾಧ್ಯತೆಗಳಿವೆ.
ಬಿ ಗುಂಪಿನಲ್ಲಿ ಅಫ್ಘಾನಿಸ್ತಾನ ಹಾಗೂ ಶ್ರೀಲಂಕಾ ತಂಡಗಳು ಸೂಪರ್ ೪ ಹಂತಕ್ಕೆ ತೇರ್ಗಡೆ ಹೊಂದಿವೆ. ಅಫ್ಘಾನಿಸ್ತಾನ ಎರಡೂ ಪಂದ್ಯಗಳನ್ನು ಗೆದ್ದರೆ ಲಂಕಾ ಅಫ್ಗಾನ್ ವಿರುದ್ಧ ಸೋಲು ಅನುಭವಿಸಿತ್ತು.

ಏಷ್ಯಾಕಪ್‌ನಲ್ಲಿ ೧೬ ಬಾರಿ ಮಖಾಮುಖಿಯಾಗಿದ್ದು, ೯ ಬಾರಿ ಭಾರತಕ್ಕೆ ಗೆಲುವು ಸಾಧಿಸಿದೆ. ೫ ಬಾರಿ ಪಾಕಿಸ್ತಾನಕ್ಕೆ ಜಯ ಹಾಗೂ ೨ ಪಂದ್ಯಗಳಲ್ಲಿ ಫಲಿತಾಂಶವಿಲ್ಲವಾಗಿದೆ.

ಭಾರತದ ಹಾದಿ…
ಸೂಪರ್ ೪ ಹಂತದಲ್ಲಿ ಭಾರತ ತನ್ನ ಮೊದಲ ಪಂದ್ಯದಲ್ಲಿ ಭಾನುವಾರ ಪಾಕಿಸ್ತಾನ ತಂಡದ ಸವಾಲನ್ನು ಎದುರಿಸಲಿದೆ. ಬಳಿಕ ಕ್ರಮವಾಗಿ ಮಂಗಳವಾರ ಶ್ರೀಲಂಕಾ ಮತ್ತು ಗುರುವಾರದಂದು ಅಫ್ಘಾನಿಸ್ತಾನ ವಿರುದ್ಧ ಸೆಣಸಲಿದೆ.

ಸೂಪರ್ ೪ ವೇಳಾಪಟ್ಟಿ:

ಸೆ.೦೪, ಭಾನುವಾರ: ಭಾರತ-ಪಾಕಿಸ್ತಾನ
ಸೆ.೦೬, ಮಂಗಳವಾರ: ಭಾರತ-ಶ್ರೀಲಂಕಾ
ಸೆ.೦೭, ಬುಧವಾರ: ಪಾಕಿಸ್ತಾನ-ಅಫ್ಘಾನಿಸ್ತಾನ
ಸೆ.೦೮, ಗುರುವಾರ: ಭಾರತ-ಅಫ್ಘಾನಿಸ್ತಾನ
ಸೆ.೦೯, ಶುಕ್ರವಾರ: ಶ್ರೀಲಂಕಾ-ಪಾಕಿಸ್ತಾನ

ಫೈನಲ್: ಸೆ.೧೧ ಭಾನುವಾರ, ದುಬೈ ನಲ್ಲಿ ನಡೆಯಲಿದೆ.

andolanait

Recent Posts

ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…

7 hours ago

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

10 hours ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

11 hours ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

13 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

14 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

15 hours ago