ಕ್ರೀಡೆ

ನಾಳೆ ಭಾರತ-ನ್ಯೂಜಿಲೆಂಡ್‌ನ ಅಂತಿಮ ಏಕದಿನ ಪಂದ್ಯ

ಸರಣಿ ಸಮಕ್ಕೆ ಟೀಂ ಇಂಡಿಯಾ ಯತ್ನ

ಕ್ರೈಸ್ಟ್ ಚರ್ಚ್: ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ  ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯ ಬುಧವಾರ ನಡೆಯಲಿದೆ. ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದರೂ ಬೌಲಿಂಗ್‌ನಲ್ಲಿ ವೈಫಲ್ಯ ಅನುಭವಿಸಿದ ಕಾರಣ ೭ ವಿಕೆಟ್‌ಗಳ ಅಂತರದ ಭಾರೀ ಸೋಲು ಅನುಭವಿಸಿತು.

ಆದರೆ ಎರಡನೇ ಪಂದ್ಯ ಮಳೆಗೆ ಆಹುತಿಯಾದ ಕಾರಣ ಪಂದ್ಯ ರದ್ದಾಗಿದೆ. ಹೀಗಾಗಿ ಅಂತಿಮ ಪಂದ್ಯದಲ್ಲಿ ಭಾರತಕ್ಕೆ ಸರಣಿಯನ್ನು ಸಮಬಲಗೊಳಿಸುವ ಅವಕಾಶ ಮಾತ್ರವೇ ಇದೆ. ಭಾರತ ತಂಡ ಈ ಯತ್ನದಲ್ಲಿ ಇದೆ.

ಈ ಸರಣಿಯಲ್ಲಿ ಭಾರತ ತಂಡ ಬ್ಯಾಟಿಂಗ್ ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡಿದೆ. ಆರಂಭಿಕರಾದ ಶುಭಮನ್ ಗಿಲ್, ಶಿಖರ್ ಧವನ್ ಶ್ರೇಯಸ್ ಐಯ್ಯರ್, ಸೂರ್ಯಕುಮಾರ್ ಯಾದವ್ ಮೊದಲಾದ ಆಟಗಾರರ ಬ್ಯಾಟಿಂಗ್‌ನಿಂದ ಉತ್ತಮವಾಗಿ ರನ್‌ಗಳು ಹರಿದುಬಂದಿದೆ. ಆದರೆ ಯುವ ಬೌಲಿಂಗ್ ವಿಭಾಗ ಮಾತ್ರ ಮಿಂಚುವಲ್ಲಿ ವಿಫಲವಾಗಿದೆ. ಆದರೆ ಪ್ರತಿಭಾನ್ವಿತ ಆಟಗಾರರ ಬಳಗವನ್ನು ಆತಿಥೇಯ ಕಿವೀಸ್ ಪಡೆ ನಿರ್ಲಕ್ಷಿಸುವಂತಿಲ್ಲ ಎಂಬುದು ನಿಜ.

ಪಿಚ್ ರಿಪೋರ್ಟ್

ಇಲ್ಲಿ ಕಳೆದ ಐದು ಏಕದಿನ ಪಂದ್ಯಗಳ ಅಂಕಿ-ಅಂಶವನ್ನು ನೋಡಿದಾಗ ಮೊದಲ ಇನ್ನಿಂಗ್ಸ್‌ನಲ್ಲಿ ಇಲ್ಲಿನ ಸರಾಸರಿ ಸ್ಕೋರ್ ೨೬೧ ಆಗಿದೆ. ಕಳೆದ ಐದು ಪಂದ್ಯಗಳಲ್ಲಿ ಇಲ್ಲಿ ವೇಗಿಗಳು ಶೇ.೭೧ರಷ್ಟು ವಿಕೆಟ್ ಪಡೆದುಕೊಂಡಿದ್ದಾರೆ,. ಹೀಗಾಗಿ ಇಲ್ಲಿ ವೇಗದ ಬೌಲಿಂಗ್ ಮಹತ್ವದ ಪಾತ್ರವನ್ನು ವಹಿಸುತ್ತದೆ. ಇನ್ನು ಈ ಪಂದ್ಯಕ್ಕೂ ಮಳೆ ಅಡ್ಡಿಯುಂಟು ಮಾಡುವ ನಿರೀಕ್ಷೆಯಿರುವ ಕಾರಣ ಇಲ್ಲಿ ರನ್ ಬೆನ್ನಟ್ಟುವುದು ಉತ್ತಮ ನಿರ್ಧಾರವಾಗಬಹುದು.

ಸಂಭಾವ್ಯ ತಂಡ

ಭಾರತ: ಶಿಖರ್ ಧವನ್ (ನಾುಂಕ), ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್/ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ದೀಪಕ್ ಚಹಾರ್, ಅರ್ಶ್‌ದೀಪ್ ಸಿಂಗ್, ಉವ್ರಾನ್ ಮಲಿಕ್ ಮತ್ತು ಕುಲದೀಪ್ ಯಾದವ್.

ನ್ಯೂಜಿಲೆಂಡ್: ಡೆವೊನ್ ಕಾನ್ವೇ, ಫಿನ್ ಅಲೆನ್, ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಡ್ಯಾರಿಲ್ ಮಿಚೆಲ್, ಮಿಚೆಲ್ ಸ್ಯಾಂಟ್ನರ್, ಮೈಕೆಲ್ ಬ್ರೇಸ್‌ವೆಲ್, ವ್ಯಾಟ್ ಹೆನ್ರಿ, ಟಿಮ್ ಸೌಥಿ ಮತ್ತು ಲಾಕಿ ಫರ್ಗುಸನ್.

ಸ್ಥಳ:  ಕ್ರೈಸ್ಟ್ ಚರ್ಚ್‌ನ ಹೆಡಿಂಗ್ಲೆ ಓವಲ್

ಸಮಯ: ಮುಂಜಾನೆ ೭ ಗಂಟೆಗೆ ಆರಂಭ

andolana

Recent Posts

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

6 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

6 hours ago

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…

6 hours ago

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ…

6 hours ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

9 hours ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

9 hours ago