ಕ್ರೀಡೆ

ನಾಳೆ ಭಾರತ-ನ್ಯೂಜಿಲೆಂಡ್‌ನ ಅಂತಿಮ ಏಕದಿನ ಪಂದ್ಯ

ಸರಣಿ ಸಮಕ್ಕೆ ಟೀಂ ಇಂಡಿಯಾ ಯತ್ನ

ಕ್ರೈಸ್ಟ್ ಚರ್ಚ್: ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ  ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯ ಬುಧವಾರ ನಡೆಯಲಿದೆ. ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದರೂ ಬೌಲಿಂಗ್‌ನಲ್ಲಿ ವೈಫಲ್ಯ ಅನುಭವಿಸಿದ ಕಾರಣ ೭ ವಿಕೆಟ್‌ಗಳ ಅಂತರದ ಭಾರೀ ಸೋಲು ಅನುಭವಿಸಿತು.

ಆದರೆ ಎರಡನೇ ಪಂದ್ಯ ಮಳೆಗೆ ಆಹುತಿಯಾದ ಕಾರಣ ಪಂದ್ಯ ರದ್ದಾಗಿದೆ. ಹೀಗಾಗಿ ಅಂತಿಮ ಪಂದ್ಯದಲ್ಲಿ ಭಾರತಕ್ಕೆ ಸರಣಿಯನ್ನು ಸಮಬಲಗೊಳಿಸುವ ಅವಕಾಶ ಮಾತ್ರವೇ ಇದೆ. ಭಾರತ ತಂಡ ಈ ಯತ್ನದಲ್ಲಿ ಇದೆ.

ಈ ಸರಣಿಯಲ್ಲಿ ಭಾರತ ತಂಡ ಬ್ಯಾಟಿಂಗ್ ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡಿದೆ. ಆರಂಭಿಕರಾದ ಶುಭಮನ್ ಗಿಲ್, ಶಿಖರ್ ಧವನ್ ಶ್ರೇಯಸ್ ಐಯ್ಯರ್, ಸೂರ್ಯಕುಮಾರ್ ಯಾದವ್ ಮೊದಲಾದ ಆಟಗಾರರ ಬ್ಯಾಟಿಂಗ್‌ನಿಂದ ಉತ್ತಮವಾಗಿ ರನ್‌ಗಳು ಹರಿದುಬಂದಿದೆ. ಆದರೆ ಯುವ ಬೌಲಿಂಗ್ ವಿಭಾಗ ಮಾತ್ರ ಮಿಂಚುವಲ್ಲಿ ವಿಫಲವಾಗಿದೆ. ಆದರೆ ಪ್ರತಿಭಾನ್ವಿತ ಆಟಗಾರರ ಬಳಗವನ್ನು ಆತಿಥೇಯ ಕಿವೀಸ್ ಪಡೆ ನಿರ್ಲಕ್ಷಿಸುವಂತಿಲ್ಲ ಎಂಬುದು ನಿಜ.

ಪಿಚ್ ರಿಪೋರ್ಟ್

ಇಲ್ಲಿ ಕಳೆದ ಐದು ಏಕದಿನ ಪಂದ್ಯಗಳ ಅಂಕಿ-ಅಂಶವನ್ನು ನೋಡಿದಾಗ ಮೊದಲ ಇನ್ನಿಂಗ್ಸ್‌ನಲ್ಲಿ ಇಲ್ಲಿನ ಸರಾಸರಿ ಸ್ಕೋರ್ ೨೬೧ ಆಗಿದೆ. ಕಳೆದ ಐದು ಪಂದ್ಯಗಳಲ್ಲಿ ಇಲ್ಲಿ ವೇಗಿಗಳು ಶೇ.೭೧ರಷ್ಟು ವಿಕೆಟ್ ಪಡೆದುಕೊಂಡಿದ್ದಾರೆ,. ಹೀಗಾಗಿ ಇಲ್ಲಿ ವೇಗದ ಬೌಲಿಂಗ್ ಮಹತ್ವದ ಪಾತ್ರವನ್ನು ವಹಿಸುತ್ತದೆ. ಇನ್ನು ಈ ಪಂದ್ಯಕ್ಕೂ ಮಳೆ ಅಡ್ಡಿಯುಂಟು ಮಾಡುವ ನಿರೀಕ್ಷೆಯಿರುವ ಕಾರಣ ಇಲ್ಲಿ ರನ್ ಬೆನ್ನಟ್ಟುವುದು ಉತ್ತಮ ನಿರ್ಧಾರವಾಗಬಹುದು.

ಸಂಭಾವ್ಯ ತಂಡ

ಭಾರತ: ಶಿಖರ್ ಧವನ್ (ನಾುಂಕ), ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್/ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ದೀಪಕ್ ಚಹಾರ್, ಅರ್ಶ್‌ದೀಪ್ ಸಿಂಗ್, ಉವ್ರಾನ್ ಮಲಿಕ್ ಮತ್ತು ಕುಲದೀಪ್ ಯಾದವ್.

ನ್ಯೂಜಿಲೆಂಡ್: ಡೆವೊನ್ ಕಾನ್ವೇ, ಫಿನ್ ಅಲೆನ್, ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಡ್ಯಾರಿಲ್ ಮಿಚೆಲ್, ಮಿಚೆಲ್ ಸ್ಯಾಂಟ್ನರ್, ಮೈಕೆಲ್ ಬ್ರೇಸ್‌ವೆಲ್, ವ್ಯಾಟ್ ಹೆನ್ರಿ, ಟಿಮ್ ಸೌಥಿ ಮತ್ತು ಲಾಕಿ ಫರ್ಗುಸನ್.

ಸ್ಥಳ:  ಕ್ರೈಸ್ಟ್ ಚರ್ಚ್‌ನ ಹೆಡಿಂಗ್ಲೆ ಓವಲ್

ಸಮಯ: ಮುಂಜಾನೆ ೭ ಗಂಟೆಗೆ ಆರಂಭ

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago