ಕ್ರೈಸ್ಟ್ ಚರ್ಚ್: ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯ ಬುಧವಾರ ನಡೆಯಲಿದೆ. ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದರೂ ಬೌಲಿಂಗ್ನಲ್ಲಿ ವೈಫಲ್ಯ ಅನುಭವಿಸಿದ ಕಾರಣ ೭ ವಿಕೆಟ್ಗಳ ಅಂತರದ ಭಾರೀ ಸೋಲು ಅನುಭವಿಸಿತು.
ಆದರೆ ಎರಡನೇ ಪಂದ್ಯ ಮಳೆಗೆ ಆಹುತಿಯಾದ ಕಾರಣ ಪಂದ್ಯ ರದ್ದಾಗಿದೆ. ಹೀಗಾಗಿ ಅಂತಿಮ ಪಂದ್ಯದಲ್ಲಿ ಭಾರತಕ್ಕೆ ಸರಣಿಯನ್ನು ಸಮಬಲಗೊಳಿಸುವ ಅವಕಾಶ ಮಾತ್ರವೇ ಇದೆ. ಭಾರತ ತಂಡ ಈ ಯತ್ನದಲ್ಲಿ ಇದೆ.
ಈ ಸರಣಿಯಲ್ಲಿ ಭಾರತ ತಂಡ ಬ್ಯಾಟಿಂಗ್ ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡಿದೆ. ಆರಂಭಿಕರಾದ ಶುಭಮನ್ ಗಿಲ್, ಶಿಖರ್ ಧವನ್ ಶ್ರೇಯಸ್ ಐಯ್ಯರ್, ಸೂರ್ಯಕುಮಾರ್ ಯಾದವ್ ಮೊದಲಾದ ಆಟಗಾರರ ಬ್ಯಾಟಿಂಗ್ನಿಂದ ಉತ್ತಮವಾಗಿ ರನ್ಗಳು ಹರಿದುಬಂದಿದೆ. ಆದರೆ ಯುವ ಬೌಲಿಂಗ್ ವಿಭಾಗ ಮಾತ್ರ ಮಿಂಚುವಲ್ಲಿ ವಿಫಲವಾಗಿದೆ. ಆದರೆ ಪ್ರತಿಭಾನ್ವಿತ ಆಟಗಾರರ ಬಳಗವನ್ನು ಆತಿಥೇಯ ಕಿವೀಸ್ ಪಡೆ ನಿರ್ಲಕ್ಷಿಸುವಂತಿಲ್ಲ ಎಂಬುದು ನಿಜ.
ಪಿಚ್ ರಿಪೋರ್ಟ್
ಇಲ್ಲಿ ಕಳೆದ ಐದು ಏಕದಿನ ಪಂದ್ಯಗಳ ಅಂಕಿ-ಅಂಶವನ್ನು ನೋಡಿದಾಗ ಮೊದಲ ಇನ್ನಿಂಗ್ಸ್ನಲ್ಲಿ ಇಲ್ಲಿನ ಸರಾಸರಿ ಸ್ಕೋರ್ ೨೬೧ ಆಗಿದೆ. ಕಳೆದ ಐದು ಪಂದ್ಯಗಳಲ್ಲಿ ಇಲ್ಲಿ ವೇಗಿಗಳು ಶೇ.೭೧ರಷ್ಟು ವಿಕೆಟ್ ಪಡೆದುಕೊಂಡಿದ್ದಾರೆ,. ಹೀಗಾಗಿ ಇಲ್ಲಿ ವೇಗದ ಬೌಲಿಂಗ್ ಮಹತ್ವದ ಪಾತ್ರವನ್ನು ವಹಿಸುತ್ತದೆ. ಇನ್ನು ಈ ಪಂದ್ಯಕ್ಕೂ ಮಳೆ ಅಡ್ಡಿಯುಂಟು ಮಾಡುವ ನಿರೀಕ್ಷೆಯಿರುವ ಕಾರಣ ಇಲ್ಲಿ ರನ್ ಬೆನ್ನಟ್ಟುವುದು ಉತ್ತಮ ನಿರ್ಧಾರವಾಗಬಹುದು.
ಸಂಭಾವ್ಯ ತಂಡ
ಭಾರತ: ಶಿಖರ್ ಧವನ್ (ನಾುಂಕ), ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್/ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ದೀಪಕ್ ಚಹಾರ್, ಅರ್ಶ್ದೀಪ್ ಸಿಂಗ್, ಉವ್ರಾನ್ ಮಲಿಕ್ ಮತ್ತು ಕುಲದೀಪ್ ಯಾದವ್.
ನ್ಯೂಜಿಲೆಂಡ್: ಡೆವೊನ್ ಕಾನ್ವೇ, ಫಿನ್ ಅಲೆನ್, ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಡ್ಯಾರಿಲ್ ಮಿಚೆಲ್, ಮಿಚೆಲ್ ಸ್ಯಾಂಟ್ನರ್, ಮೈಕೆಲ್ ಬ್ರೇಸ್ವೆಲ್, ವ್ಯಾಟ್ ಹೆನ್ರಿ, ಟಿಮ್ ಸೌಥಿ ಮತ್ತು ಲಾಕಿ ಫರ್ಗುಸನ್.
ಸ್ಥಳ: ಕ್ರೈಸ್ಟ್ ಚರ್ಚ್ನ ಹೆಡಿಂಗ್ಲೆ ಓವಲ್
ಸಮಯ: ಮುಂಜಾನೆ ೭ ಗಂಟೆಗೆ ಆರಂಭ
ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಬಚಾವ್ ಆಗಿದ್ದ ಮಾಜಿ ಸಚಿವ ಹಾಗೂ ಶಾಸಕ…
ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ…
ಬೆಂಗಳೂರು: ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್ ಸೀಜ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯು ಕರ್ನಾಟಕ ರಾಜ್ಯದ ಅತ್ಯಂತ ಶ್ರೀಮಂತ ದೇವಸ್ಥಾನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಮುಖವಾಗಿ ಪ್ರಸಿದ್ಧ…
ಟಿ.ನರಸೀಪುರ: ಹೊಸ ವರ್ಷದ ಸಂಭ್ರಮಾಚರಣೆ ಆಚರಿಸಲು ಐತಿಹಾಸಿಕ ಪಂಚಲಿಂಗಗಳ ಪುಣ್ಯಕ್ಷೇತ್ರ ತಲಕಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಕಳೆದ ಮೂರು…
ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್ಗಳ ತೆರವು ಪ್ರಕರಣವನ್ನು ಖಂಡಿಸಿ ಟ್ವೀಟ್ ಮಾಡಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್ ವಿರುದ್ಧ…