ಕ್ರೈಸ್ಟ್ ಚರ್ಚ್: ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯ ಬುಧವಾರ ನಡೆಯಲಿದೆ. ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದರೂ ಬೌಲಿಂಗ್ನಲ್ಲಿ ವೈಫಲ್ಯ ಅನುಭವಿಸಿದ ಕಾರಣ ೭ ವಿಕೆಟ್ಗಳ ಅಂತರದ ಭಾರೀ ಸೋಲು ಅನುಭವಿಸಿತು.
ಆದರೆ ಎರಡನೇ ಪಂದ್ಯ ಮಳೆಗೆ ಆಹುತಿಯಾದ ಕಾರಣ ಪಂದ್ಯ ರದ್ದಾಗಿದೆ. ಹೀಗಾಗಿ ಅಂತಿಮ ಪಂದ್ಯದಲ್ಲಿ ಭಾರತಕ್ಕೆ ಸರಣಿಯನ್ನು ಸಮಬಲಗೊಳಿಸುವ ಅವಕಾಶ ಮಾತ್ರವೇ ಇದೆ. ಭಾರತ ತಂಡ ಈ ಯತ್ನದಲ್ಲಿ ಇದೆ.
ಈ ಸರಣಿಯಲ್ಲಿ ಭಾರತ ತಂಡ ಬ್ಯಾಟಿಂಗ್ ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡಿದೆ. ಆರಂಭಿಕರಾದ ಶುಭಮನ್ ಗಿಲ್, ಶಿಖರ್ ಧವನ್ ಶ್ರೇಯಸ್ ಐಯ್ಯರ್, ಸೂರ್ಯಕುಮಾರ್ ಯಾದವ್ ಮೊದಲಾದ ಆಟಗಾರರ ಬ್ಯಾಟಿಂಗ್ನಿಂದ ಉತ್ತಮವಾಗಿ ರನ್ಗಳು ಹರಿದುಬಂದಿದೆ. ಆದರೆ ಯುವ ಬೌಲಿಂಗ್ ವಿಭಾಗ ಮಾತ್ರ ಮಿಂಚುವಲ್ಲಿ ವಿಫಲವಾಗಿದೆ. ಆದರೆ ಪ್ರತಿಭಾನ್ವಿತ ಆಟಗಾರರ ಬಳಗವನ್ನು ಆತಿಥೇಯ ಕಿವೀಸ್ ಪಡೆ ನಿರ್ಲಕ್ಷಿಸುವಂತಿಲ್ಲ ಎಂಬುದು ನಿಜ.
ಪಿಚ್ ರಿಪೋರ್ಟ್
ಇಲ್ಲಿ ಕಳೆದ ಐದು ಏಕದಿನ ಪಂದ್ಯಗಳ ಅಂಕಿ-ಅಂಶವನ್ನು ನೋಡಿದಾಗ ಮೊದಲ ಇನ್ನಿಂಗ್ಸ್ನಲ್ಲಿ ಇಲ್ಲಿನ ಸರಾಸರಿ ಸ್ಕೋರ್ ೨೬೧ ಆಗಿದೆ. ಕಳೆದ ಐದು ಪಂದ್ಯಗಳಲ್ಲಿ ಇಲ್ಲಿ ವೇಗಿಗಳು ಶೇ.೭೧ರಷ್ಟು ವಿಕೆಟ್ ಪಡೆದುಕೊಂಡಿದ್ದಾರೆ,. ಹೀಗಾಗಿ ಇಲ್ಲಿ ವೇಗದ ಬೌಲಿಂಗ್ ಮಹತ್ವದ ಪಾತ್ರವನ್ನು ವಹಿಸುತ್ತದೆ. ಇನ್ನು ಈ ಪಂದ್ಯಕ್ಕೂ ಮಳೆ ಅಡ್ಡಿಯುಂಟು ಮಾಡುವ ನಿರೀಕ್ಷೆಯಿರುವ ಕಾರಣ ಇಲ್ಲಿ ರನ್ ಬೆನ್ನಟ್ಟುವುದು ಉತ್ತಮ ನಿರ್ಧಾರವಾಗಬಹುದು.
ಸಂಭಾವ್ಯ ತಂಡ
ಭಾರತ: ಶಿಖರ್ ಧವನ್ (ನಾುಂಕ), ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್/ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ದೀಪಕ್ ಚಹಾರ್, ಅರ್ಶ್ದೀಪ್ ಸಿಂಗ್, ಉವ್ರಾನ್ ಮಲಿಕ್ ಮತ್ತು ಕುಲದೀಪ್ ಯಾದವ್.
ನ್ಯೂಜಿಲೆಂಡ್: ಡೆವೊನ್ ಕಾನ್ವೇ, ಫಿನ್ ಅಲೆನ್, ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಡ್ಯಾರಿಲ್ ಮಿಚೆಲ್, ಮಿಚೆಲ್ ಸ್ಯಾಂಟ್ನರ್, ಮೈಕೆಲ್ ಬ್ರೇಸ್ವೆಲ್, ವ್ಯಾಟ್ ಹೆನ್ರಿ, ಟಿಮ್ ಸೌಥಿ ಮತ್ತು ಲಾಕಿ ಫರ್ಗುಸನ್.
ಸ್ಥಳ: ಕ್ರೈಸ್ಟ್ ಚರ್ಚ್ನ ಹೆಡಿಂಗ್ಲೆ ಓವಲ್
ಸಮಯ: ಮುಂಜಾನೆ ೭ ಗಂಟೆಗೆ ಆರಂಭ
ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…
ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…
ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್ ಅವರ ಈಗಿನ ಸಾಧನೆಯನ್ನು…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…