ಕ್ರೀಡೆ

ನಾಳೆ ಭಾರತ-ನ್ಯೂಜಿಲೆಂಡ್‌ನ ಅಂತಿಮ ಏಕದಿನ ಪಂದ್ಯ

ಸರಣಿ ಸಮಕ್ಕೆ ಟೀಂ ಇಂಡಿಯಾ ಯತ್ನ

ಕ್ರೈಸ್ಟ್ ಚರ್ಚ್: ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ  ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯ ಬುಧವಾರ ನಡೆಯಲಿದೆ. ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದರೂ ಬೌಲಿಂಗ್‌ನಲ್ಲಿ ವೈಫಲ್ಯ ಅನುಭವಿಸಿದ ಕಾರಣ ೭ ವಿಕೆಟ್‌ಗಳ ಅಂತರದ ಭಾರೀ ಸೋಲು ಅನುಭವಿಸಿತು.

ಆದರೆ ಎರಡನೇ ಪಂದ್ಯ ಮಳೆಗೆ ಆಹುತಿಯಾದ ಕಾರಣ ಪಂದ್ಯ ರದ್ದಾಗಿದೆ. ಹೀಗಾಗಿ ಅಂತಿಮ ಪಂದ್ಯದಲ್ಲಿ ಭಾರತಕ್ಕೆ ಸರಣಿಯನ್ನು ಸಮಬಲಗೊಳಿಸುವ ಅವಕಾಶ ಮಾತ್ರವೇ ಇದೆ. ಭಾರತ ತಂಡ ಈ ಯತ್ನದಲ್ಲಿ ಇದೆ.

ಈ ಸರಣಿಯಲ್ಲಿ ಭಾರತ ತಂಡ ಬ್ಯಾಟಿಂಗ್ ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡಿದೆ. ಆರಂಭಿಕರಾದ ಶುಭಮನ್ ಗಿಲ್, ಶಿಖರ್ ಧವನ್ ಶ್ರೇಯಸ್ ಐಯ್ಯರ್, ಸೂರ್ಯಕುಮಾರ್ ಯಾದವ್ ಮೊದಲಾದ ಆಟಗಾರರ ಬ್ಯಾಟಿಂಗ್‌ನಿಂದ ಉತ್ತಮವಾಗಿ ರನ್‌ಗಳು ಹರಿದುಬಂದಿದೆ. ಆದರೆ ಯುವ ಬೌಲಿಂಗ್ ವಿಭಾಗ ಮಾತ್ರ ಮಿಂಚುವಲ್ಲಿ ವಿಫಲವಾಗಿದೆ. ಆದರೆ ಪ್ರತಿಭಾನ್ವಿತ ಆಟಗಾರರ ಬಳಗವನ್ನು ಆತಿಥೇಯ ಕಿವೀಸ್ ಪಡೆ ನಿರ್ಲಕ್ಷಿಸುವಂತಿಲ್ಲ ಎಂಬುದು ನಿಜ.

ಪಿಚ್ ರಿಪೋರ್ಟ್

ಇಲ್ಲಿ ಕಳೆದ ಐದು ಏಕದಿನ ಪಂದ್ಯಗಳ ಅಂಕಿ-ಅಂಶವನ್ನು ನೋಡಿದಾಗ ಮೊದಲ ಇನ್ನಿಂಗ್ಸ್‌ನಲ್ಲಿ ಇಲ್ಲಿನ ಸರಾಸರಿ ಸ್ಕೋರ್ ೨೬೧ ಆಗಿದೆ. ಕಳೆದ ಐದು ಪಂದ್ಯಗಳಲ್ಲಿ ಇಲ್ಲಿ ವೇಗಿಗಳು ಶೇ.೭೧ರಷ್ಟು ವಿಕೆಟ್ ಪಡೆದುಕೊಂಡಿದ್ದಾರೆ,. ಹೀಗಾಗಿ ಇಲ್ಲಿ ವೇಗದ ಬೌಲಿಂಗ್ ಮಹತ್ವದ ಪಾತ್ರವನ್ನು ವಹಿಸುತ್ತದೆ. ಇನ್ನು ಈ ಪಂದ್ಯಕ್ಕೂ ಮಳೆ ಅಡ್ಡಿಯುಂಟು ಮಾಡುವ ನಿರೀಕ್ಷೆಯಿರುವ ಕಾರಣ ಇಲ್ಲಿ ರನ್ ಬೆನ್ನಟ್ಟುವುದು ಉತ್ತಮ ನಿರ್ಧಾರವಾಗಬಹುದು.

ಸಂಭಾವ್ಯ ತಂಡ

ಭಾರತ: ಶಿಖರ್ ಧವನ್ (ನಾುಂಕ), ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್/ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ದೀಪಕ್ ಚಹಾರ್, ಅರ್ಶ್‌ದೀಪ್ ಸಿಂಗ್, ಉವ್ರಾನ್ ಮಲಿಕ್ ಮತ್ತು ಕುಲದೀಪ್ ಯಾದವ್.

ನ್ಯೂಜಿಲೆಂಡ್: ಡೆವೊನ್ ಕಾನ್ವೇ, ಫಿನ್ ಅಲೆನ್, ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಡ್ಯಾರಿಲ್ ಮಿಚೆಲ್, ಮಿಚೆಲ್ ಸ್ಯಾಂಟ್ನರ್, ಮೈಕೆಲ್ ಬ್ರೇಸ್‌ವೆಲ್, ವ್ಯಾಟ್ ಹೆನ್ರಿ, ಟಿಮ್ ಸೌಥಿ ಮತ್ತು ಲಾಕಿ ಫರ್ಗುಸನ್.

ಸ್ಥಳ:  ಕ್ರೈಸ್ಟ್ ಚರ್ಚ್‌ನ ಹೆಡಿಂಗ್ಲೆ ಓವಲ್

ಸಮಯ: ಮುಂಜಾನೆ ೭ ಗಂಟೆಗೆ ಆರಂಭ

andolana

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

9 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

11 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

19 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

19 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

19 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

19 hours ago