ಕ್ರೀಡೆ

ನಾಳೆ ಭಾರತ-ನ್ಯೂಜಿಲೆಂಡ್‌ನ ಅಂತಿಮ ಏಕದಿನ ಪಂದ್ಯ

ಸರಣಿ ಸಮಕ್ಕೆ ಟೀಂ ಇಂಡಿಯಾ ಯತ್ನ

ಕ್ರೈಸ್ಟ್ ಚರ್ಚ್: ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ  ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯ ಬುಧವಾರ ನಡೆಯಲಿದೆ. ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದರೂ ಬೌಲಿಂಗ್‌ನಲ್ಲಿ ವೈಫಲ್ಯ ಅನುಭವಿಸಿದ ಕಾರಣ ೭ ವಿಕೆಟ್‌ಗಳ ಅಂತರದ ಭಾರೀ ಸೋಲು ಅನುಭವಿಸಿತು.

ಆದರೆ ಎರಡನೇ ಪಂದ್ಯ ಮಳೆಗೆ ಆಹುತಿಯಾದ ಕಾರಣ ಪಂದ್ಯ ರದ್ದಾಗಿದೆ. ಹೀಗಾಗಿ ಅಂತಿಮ ಪಂದ್ಯದಲ್ಲಿ ಭಾರತಕ್ಕೆ ಸರಣಿಯನ್ನು ಸಮಬಲಗೊಳಿಸುವ ಅವಕಾಶ ಮಾತ್ರವೇ ಇದೆ. ಭಾರತ ತಂಡ ಈ ಯತ್ನದಲ್ಲಿ ಇದೆ.

ಈ ಸರಣಿಯಲ್ಲಿ ಭಾರತ ತಂಡ ಬ್ಯಾಟಿಂಗ್ ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡಿದೆ. ಆರಂಭಿಕರಾದ ಶುಭಮನ್ ಗಿಲ್, ಶಿಖರ್ ಧವನ್ ಶ್ರೇಯಸ್ ಐಯ್ಯರ್, ಸೂರ್ಯಕುಮಾರ್ ಯಾದವ್ ಮೊದಲಾದ ಆಟಗಾರರ ಬ್ಯಾಟಿಂಗ್‌ನಿಂದ ಉತ್ತಮವಾಗಿ ರನ್‌ಗಳು ಹರಿದುಬಂದಿದೆ. ಆದರೆ ಯುವ ಬೌಲಿಂಗ್ ವಿಭಾಗ ಮಾತ್ರ ಮಿಂಚುವಲ್ಲಿ ವಿಫಲವಾಗಿದೆ. ಆದರೆ ಪ್ರತಿಭಾನ್ವಿತ ಆಟಗಾರರ ಬಳಗವನ್ನು ಆತಿಥೇಯ ಕಿವೀಸ್ ಪಡೆ ನಿರ್ಲಕ್ಷಿಸುವಂತಿಲ್ಲ ಎಂಬುದು ನಿಜ.

ಪಿಚ್ ರಿಪೋರ್ಟ್

ಇಲ್ಲಿ ಕಳೆದ ಐದು ಏಕದಿನ ಪಂದ್ಯಗಳ ಅಂಕಿ-ಅಂಶವನ್ನು ನೋಡಿದಾಗ ಮೊದಲ ಇನ್ನಿಂಗ್ಸ್‌ನಲ್ಲಿ ಇಲ್ಲಿನ ಸರಾಸರಿ ಸ್ಕೋರ್ ೨೬೧ ಆಗಿದೆ. ಕಳೆದ ಐದು ಪಂದ್ಯಗಳಲ್ಲಿ ಇಲ್ಲಿ ವೇಗಿಗಳು ಶೇ.೭೧ರಷ್ಟು ವಿಕೆಟ್ ಪಡೆದುಕೊಂಡಿದ್ದಾರೆ,. ಹೀಗಾಗಿ ಇಲ್ಲಿ ವೇಗದ ಬೌಲಿಂಗ್ ಮಹತ್ವದ ಪಾತ್ರವನ್ನು ವಹಿಸುತ್ತದೆ. ಇನ್ನು ಈ ಪಂದ್ಯಕ್ಕೂ ಮಳೆ ಅಡ್ಡಿಯುಂಟು ಮಾಡುವ ನಿರೀಕ್ಷೆಯಿರುವ ಕಾರಣ ಇಲ್ಲಿ ರನ್ ಬೆನ್ನಟ್ಟುವುದು ಉತ್ತಮ ನಿರ್ಧಾರವಾಗಬಹುದು.

ಸಂಭಾವ್ಯ ತಂಡ

ಭಾರತ: ಶಿಖರ್ ಧವನ್ (ನಾುಂಕ), ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್/ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ದೀಪಕ್ ಚಹಾರ್, ಅರ್ಶ್‌ದೀಪ್ ಸಿಂಗ್, ಉವ್ರಾನ್ ಮಲಿಕ್ ಮತ್ತು ಕುಲದೀಪ್ ಯಾದವ್.

ನ್ಯೂಜಿಲೆಂಡ್: ಡೆವೊನ್ ಕಾನ್ವೇ, ಫಿನ್ ಅಲೆನ್, ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಡ್ಯಾರಿಲ್ ಮಿಚೆಲ್, ಮಿಚೆಲ್ ಸ್ಯಾಂಟ್ನರ್, ಮೈಕೆಲ್ ಬ್ರೇಸ್‌ವೆಲ್, ವ್ಯಾಟ್ ಹೆನ್ರಿ, ಟಿಮ್ ಸೌಥಿ ಮತ್ತು ಲಾಕಿ ಫರ್ಗುಸನ್.

ಸ್ಥಳ:  ಕ್ರೈಸ್ಟ್ ಚರ್ಚ್‌ನ ಹೆಡಿಂಗ್ಲೆ ಓವಲ್

ಸಮಯ: ಮುಂಜಾನೆ ೭ ಗಂಟೆಗೆ ಆರಂಭ

andolana

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

12 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

12 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

15 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

17 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

17 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago