ವೆಸ್ಟ್ ಇಂಡೀಸ್ ಹಾಗೂ ಅಮೇರಿಕಾ ಸಹಭಾಗಿತ್ವದಲ್ಲಿ ನಡೆಯುತ್ತಿರುವ 9ನೇ ಆವೃತ್ತಿಯ ಟಿ20 ವಿಶ್ವಕಪ್ನಲ್ಲಿ ಹೀನಾಯ ಪ್ರದರ್ಶನ ತೋರಿದ ನ್ಯೂಜಿಲೆಂಡ್ ತಂಡ ಟಿ20 ವಿಶ್ವಕಪ್ ಸೂಪರ್-8 ಹಂತಕ್ಕೆ ತಲುಪುವಲ್ಲಿ ವಿಫಲವಾಗಿದೆ.
ʼಸಿʼ ಗ್ರೂಪ್ನಲ್ಲಿ ತಾವಾಡಿರುವ ಮೂರು ಪಂದ್ಯಗಳಲ್ಲಿ ಎರಡು ಪಂದ್ಯಗಳಲ್ಲಿ ಸೋಲು ಕಾಣುವ ಮೂಲಕ ಟೂರ್ನಿಯಿಂದ ಹೊರ ಬಿದ್ದಿದೆ. ತನ್ನ ಗ್ರೂಪ್ನಲ್ಲಿ ವೆಸ್ಟ್ ಇಂಡೀಸ್, ಅಫ್ಘಾನಿಸ್ತಾನ್, ಪಪುವಾ ನ್ಯೂಗಿನಿ ಹಾಗೂ ಉಗಾಂಡ ತಂಡಗಳಿದ್ದರೂ ಸಹಾ ಈ ಬಾರಿಯ ಟಿ20 ವಿಶ್ವಕಪ್ಗೆ ಅರ್ಹತೆ ಪಡೆಯುವಲ್ಲಿ ಕಿವೀಸ್ ಸೋತಿದೆ.
ಇನ್ನು ಉಗಾಂಡ ವಿರುದ್ಧ ಪಂದ್ಯ ಗೆದ್ದ ನ್ಯೂಜಿಲೆಂಡ್ ತವರಿಗೆ ಮರಳುವ ಮುನ್ನವೇ ತಂಡಕ್ಕೆ ಆಘಾತವಾಗಿದೆ. ತಂಡದ ಎಡಗೈ ವೇಗಿ ಟ್ರೆಂಟ್ ಬೌಲ್ಟ್ ತಾವು ಮುಂಬರುವ ಟಿ20 ವಿಶ್ವಕಪ್ನಲ್ಲಿ ಆಡದಿರುವ ಬಗ್ಗೆ ತಿಳಿಸಿದ್ದಾರೆ.
ಉಗಾಂಡ ವಿರುದ್ಧದ ಪಂದ್ಯ ಮುಗಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಬೌಲ್ಟ್, ಇದು ನನ್ನ ಕೊನೆಯ ಟಿ20 ವಿಶ್ವಕಪ್ ಎಂದಷ್ಟೆ ಹೇಳಬಲ್ಲೇ ಎಂದು ಹೇಳಿದ್ದಾರೆ. ಆ ಮೂಲಕ ಮುಂಬರುವ 2026ರ ಟಿ20 ವಿಶ್ವಕಪ್ನಲ್ಲಿ ಆಡುವುದಿಲ್ಲ ಎಂಬುದನ್ನು ಸಾಭೀತುಪಡಿಸಿದ್ದಾರೆ.
2011ರ ಡಿಸೆಂಬರ್ನಲ್ಲಿ ನ್ಯೂಜಿಲೆಂಡ್ ಪರವಾಗಿ ಅಂತರಾಷ್ಟ್ರೀಯ ತಂಡಕ್ಕೆ ಪಾದಾರ್ಪಣೆ ಮಾಡಿದ ಇವರು ಈವರೆಗೆ 78 ಟೆಸ್ಟ್ ಪಂದ್ಯಗಳು, 114 ಏಕದಿನ ಪಂದ್ಯ ಹಾಗೂ 60 ಟಿ20 ಪಂದ್ಯಗಳಲ್ಲಿ ತಮ್ಮ ದೇಶವನ್ನು ಪ್ರತಿನಿಧಿಸಿ ಟೆಸ್ಟ್ನಲ್ಲಿ 317 ವಿಕೆಟ್, ಏಕದಿನದಲ್ಲಿ 211 ವಿಕೆಟ್ ಹಾಗೂ ಟಿ20 ಮಾದರಿಯಲ್ಲಿ 81 ವಿಕೆಟ್ ಕಬಳಿಸಿ ಕಿವೀಸ್ ತಂಡದ ಪ್ರಮುಖ ಬೌಲರ್ ಆಗಿ ಗುರುತಿಸಿಕೊಂಡಿದ್ದಾರೆ.
ಬೌಲ್ಟ್ ಅವರು ತಮ್ಮ ಅತರಾಷ್ಟ್ರೀಯ ತಂಡದ ಕೇಂದ್ರ ಒಪ್ಪಂದದಿಂದ ಹೊರಗುಳಿಯುವ ನಿರ್ಧಾರವನ್ನು 2022 ರಲ್ಲಿ ಸ್ವತಃ ಅವರೇ ಆಯ್ದುಕೊಂಡಿದ್ದರು. ಆದಾದ ಬಳಿಕ ಹಲವಾರು ಕೌಂಟಿ ಕ್ರಿಕೆಟ್ನಲ್ಲಿ ಆಡುವುದನ್ನು ಮುಂದುವರೆಸಿರುವ ಅವರು, ವಿಶ್ವದ ಅತಿದೊಡ್ಡ ಚುಟುಕು ಕ್ರಿಕೆಟ್ ಆದ ಐಪಿಎಲ್ನಲ್ಲಿ ರಾಜಸ್ಥಾನ್ ರಾಯಲ್ಸ್ ಪರವಾಗಿ ಆಡುತ್ತಿದ್ದಾರೆ.
ಇನ್ನು ಒಂಭತ್ತನೇ ಆವೃತ್ತಿಯ ಟಿ20 ವಿಶ್ವಕಪ್ನಲ್ಲಿ ಬೋಲ್ಟ್ ಮೂರು ಪಂದ್ಯಗಳಿಂದ 9.29ರ ಸರಾಸರಿಯಲ್ಲಿ 7 ವಿಕೆಟ್ ಕಬಳಿಸಿ ಗಮನ ಸೆಳೆದಿದ್ದಾರೆ.
ಇದೇ ಜೂನ್.17 ರಂದು ಲಾರಾ ಕ್ರೀಡಾಂಗಣದಲ್ಲಿ ಪಪುವಾ ನ್ಯೂಗಿನಿ ವಿರುದ್ಧ ನಡೆಯುವ ಪಂದ್ಯ ಬೌಲ್ಟ್ನ ಟಿ20 ವಿಶ್ವಕಪ್ನಲ್ಲಿನ ಕೊನೆಯ ಪಂದ್ಯವಾಗಲಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…