ಕ್ರೀಡೆ

ಟಿ20 ವಿಶ್ವಕಪ್‌ಗೆ ವಿದಾಯ ಹೇಳಿದ ಕಿವೀಸ್‌ ಬೌಲರ್‌ ಟ್ರೆಂಟ್‌ ಬೌಲ್ಟ್‌

ವೆಸ್ಟ್‌ ಇಂಡೀಸ್‌ ಹಾಗೂ ಅಮೇರಿಕಾ ಸಹಭಾಗಿತ್ವದಲ್ಲಿ ನಡೆಯುತ್ತಿರುವ 9ನೇ ಆವೃತ್ತಿಯ ಟಿ20 ವಿಶ್ವಕಪ್‌ನಲ್ಲಿ ಹೀನಾಯ ಪ್ರದರ್ಶನ ತೋರಿದ ನ್ಯೂಜಿಲೆಂಡ್‌ ತಂಡ ಟಿ20 ವಿಶ್ವಕಪ್‌ ಸೂಪರ್‌-8 ಹಂತಕ್ಕೆ ತಲುಪುವಲ್ಲಿ ವಿಫಲವಾಗಿದೆ.

ʼಸಿʼ ಗ್ರೂಪ್‌ನಲ್ಲಿ ತಾವಾಡಿರುವ ಮೂರು ಪಂದ್ಯಗಳಲ್ಲಿ ಎರಡು ಪಂದ್ಯಗಳಲ್ಲಿ ಸೋಲು ಕಾಣುವ ಮೂಲಕ ಟೂರ್ನಿಯಿಂದ ಹೊರ ಬಿದ್ದಿದೆ. ತನ್ನ ಗ್ರೂಪ್‌ನಲ್ಲಿ ವೆಸ್ಟ್‌ ಇಂಡೀಸ್‌, ಅಫ್ಘಾನಿಸ್ತಾನ್‌, ಪಪುವಾ ನ್ಯೂಗಿನಿ ಹಾಗೂ ಉಗಾಂಡ ತಂಡಗಳಿದ್ದರೂ ಸಹಾ ಈ ಬಾರಿಯ ಟಿ20 ವಿಶ್ವಕಪ್‌ಗೆ ಅರ್ಹತೆ ಪಡೆಯುವಲ್ಲಿ ಕಿವೀಸ್‌ ಸೋತಿದೆ.

ಇನ್ನು ಉಗಾಂಡ ವಿರುದ್ಧ ಪಂದ್ಯ ಗೆದ್ದ ನ್ಯೂಜಿಲೆಂಡ್‌ ತವರಿಗೆ ಮರಳುವ ಮುನ್ನವೇ ತಂಡಕ್ಕೆ ಆಘಾತವಾಗಿದೆ. ತಂಡದ ಎಡಗೈ ವೇಗಿ ಟ್ರೆಂಟ್‌ ಬೌಲ್ಟ್‌ ತಾವು ಮುಂಬರುವ ಟಿ20 ವಿಶ್ವಕಪ್‌ನಲ್ಲಿ ಆಡದಿರುವ ಬಗ್ಗೆ ತಿಳಿಸಿದ್ದಾರೆ.

ಉಗಾಂಡ ವಿರುದ್ಧದ ಪಂದ್ಯ ಮುಗಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಬೌಲ್ಟ್, ಇದು ನನ್ನ ಕೊನೆಯ ಟಿ20 ವಿಶ್ವಕಪ್‌ ಎಂದಷ್ಟೆ ಹೇಳಬಲ್ಲೇ ಎಂದು ಹೇಳಿದ್ದಾರೆ. ಆ ಮೂಲಕ ಮುಂಬರುವ 2026ರ ಟಿ20 ವಿಶ್ವಕಪ್‌ನಲ್ಲಿ ಆಡುವುದಿಲ್ಲ ಎಂಬುದನ್ನು ಸಾಭೀತುಪಡಿಸಿದ್ದಾರೆ.

2011ರ ಡಿಸೆಂಬರ್‌ನಲ್ಲಿ ನ್ಯೂಜಿಲೆಂಡ್‌ ಪರವಾಗಿ ಅಂತರಾಷ್ಟ್ರೀಯ ತಂಡಕ್ಕೆ ಪಾದಾರ್ಪಣೆ ಮಾಡಿದ ಇವರು ಈವರೆಗೆ 78 ಟೆಸ್ಟ್‌ ಪಂದ್ಯಗಳು, 114 ಏಕದಿನ ಪಂದ್ಯ ಹಾಗೂ 60 ಟಿ20 ಪಂದ್ಯಗಳಲ್ಲಿ ತಮ್ಮ ದೇಶವನ್ನು ಪ್ರತಿನಿಧಿಸಿ ಟೆಸ್ಟ್‌ನಲ್ಲಿ 317 ವಿಕೆಟ್‌, ಏಕದಿನದಲ್ಲಿ 211 ವಿಕೆಟ್‌ ಹಾಗೂ ಟಿ20 ಮಾದರಿಯಲ್ಲಿ 81 ವಿಕೆಟ್‌ ಕಬಳಿಸಿ ಕಿವೀಸ್‌ ತಂಡದ ಪ್ರಮುಖ ಬೌಲರ್‌ ಆಗಿ ಗುರುತಿಸಿಕೊಂಡಿದ್ದಾರೆ.

ಬೌಲ್ಟ್‌ ಅವರು ತಮ್ಮ ಅತರಾಷ್ಟ್ರೀಯ ತಂಡದ ಕೇಂದ್ರ ಒಪ್ಪಂದದಿಂದ ಹೊರಗುಳಿಯುವ ನಿರ್ಧಾರವನ್ನು 2022 ರಲ್ಲಿ ಸ್ವತಃ ಅವರೇ ಆಯ್ದುಕೊಂಡಿದ್ದರು. ಆದಾದ ಬಳಿಕ ಹಲವಾರು ಕೌಂಟಿ ಕ್ರಿಕೆಟ್‌ನಲ್ಲಿ ಆಡುವುದನ್ನು ಮುಂದುವರೆಸಿರುವ ಅವರು, ವಿಶ್ವದ ಅತಿದೊಡ್ಡ ಚುಟುಕು ಕ್ರಿಕೆಟ್‌ ಆದ ಐಪಿಎಲ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ ಪರವಾಗಿ ಆಡುತ್ತಿದ್ದಾರೆ.

ಇನ್ನು ಒಂಭತ್ತನೇ ಆವೃತ್ತಿಯ ಟಿ20 ವಿಶ್ವಕಪ್‌ನಲ್ಲಿ ಬೋಲ್ಟ್‌ ಮೂರು ಪಂದ್ಯಗಳಿಂದ 9.29ರ ಸರಾಸರಿಯಲ್ಲಿ 7 ವಿಕೆಟ್‌ ಕಬಳಿಸಿ ಗಮನ ಸೆಳೆದಿದ್ದಾರೆ.

ಇದೇ ಜೂನ್‌.17 ರಂದು ಲಾರಾ ಕ್ರೀಡಾಂಗಣದಲ್ಲಿ ಪಪುವಾ ನ್ಯೂಗಿನಿ ವಿರುದ್ಧ ನಡೆಯುವ ಪಂದ್ಯ ಬೌಲ್ಟ್‌ನ ಟಿ20 ವಿಶ್ವಕಪ್‌ನಲ್ಲಿನ ಕೊನೆಯ ಪಂದ್ಯವಾಗಲಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

6 hours ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

6 hours ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

7 hours ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

7 hours ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

7 hours ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

7 hours ago