ಕ್ರೀಡೆ

ಟಿ20 ವಿಶ್ವಕಪ್‌ಗೆ ವಿದಾಯ ಹೇಳಿದ ಕಿವೀಸ್‌ ಬೌಲರ್‌ ಟ್ರೆಂಟ್‌ ಬೌಲ್ಟ್‌

ವೆಸ್ಟ್‌ ಇಂಡೀಸ್‌ ಹಾಗೂ ಅಮೇರಿಕಾ ಸಹಭಾಗಿತ್ವದಲ್ಲಿ ನಡೆಯುತ್ತಿರುವ 9ನೇ ಆವೃತ್ತಿಯ ಟಿ20 ವಿಶ್ವಕಪ್‌ನಲ್ಲಿ ಹೀನಾಯ ಪ್ರದರ್ಶನ ತೋರಿದ ನ್ಯೂಜಿಲೆಂಡ್‌ ತಂಡ ಟಿ20 ವಿಶ್ವಕಪ್‌ ಸೂಪರ್‌-8 ಹಂತಕ್ಕೆ ತಲುಪುವಲ್ಲಿ ವಿಫಲವಾಗಿದೆ.

ʼಸಿʼ ಗ್ರೂಪ್‌ನಲ್ಲಿ ತಾವಾಡಿರುವ ಮೂರು ಪಂದ್ಯಗಳಲ್ಲಿ ಎರಡು ಪಂದ್ಯಗಳಲ್ಲಿ ಸೋಲು ಕಾಣುವ ಮೂಲಕ ಟೂರ್ನಿಯಿಂದ ಹೊರ ಬಿದ್ದಿದೆ. ತನ್ನ ಗ್ರೂಪ್‌ನಲ್ಲಿ ವೆಸ್ಟ್‌ ಇಂಡೀಸ್‌, ಅಫ್ಘಾನಿಸ್ತಾನ್‌, ಪಪುವಾ ನ್ಯೂಗಿನಿ ಹಾಗೂ ಉಗಾಂಡ ತಂಡಗಳಿದ್ದರೂ ಸಹಾ ಈ ಬಾರಿಯ ಟಿ20 ವಿಶ್ವಕಪ್‌ಗೆ ಅರ್ಹತೆ ಪಡೆಯುವಲ್ಲಿ ಕಿವೀಸ್‌ ಸೋತಿದೆ.

ಇನ್ನು ಉಗಾಂಡ ವಿರುದ್ಧ ಪಂದ್ಯ ಗೆದ್ದ ನ್ಯೂಜಿಲೆಂಡ್‌ ತವರಿಗೆ ಮರಳುವ ಮುನ್ನವೇ ತಂಡಕ್ಕೆ ಆಘಾತವಾಗಿದೆ. ತಂಡದ ಎಡಗೈ ವೇಗಿ ಟ್ರೆಂಟ್‌ ಬೌಲ್ಟ್‌ ತಾವು ಮುಂಬರುವ ಟಿ20 ವಿಶ್ವಕಪ್‌ನಲ್ಲಿ ಆಡದಿರುವ ಬಗ್ಗೆ ತಿಳಿಸಿದ್ದಾರೆ.

ಉಗಾಂಡ ವಿರುದ್ಧದ ಪಂದ್ಯ ಮುಗಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಬೌಲ್ಟ್, ಇದು ನನ್ನ ಕೊನೆಯ ಟಿ20 ವಿಶ್ವಕಪ್‌ ಎಂದಷ್ಟೆ ಹೇಳಬಲ್ಲೇ ಎಂದು ಹೇಳಿದ್ದಾರೆ. ಆ ಮೂಲಕ ಮುಂಬರುವ 2026ರ ಟಿ20 ವಿಶ್ವಕಪ್‌ನಲ್ಲಿ ಆಡುವುದಿಲ್ಲ ಎಂಬುದನ್ನು ಸಾಭೀತುಪಡಿಸಿದ್ದಾರೆ.

2011ರ ಡಿಸೆಂಬರ್‌ನಲ್ಲಿ ನ್ಯೂಜಿಲೆಂಡ್‌ ಪರವಾಗಿ ಅಂತರಾಷ್ಟ್ರೀಯ ತಂಡಕ್ಕೆ ಪಾದಾರ್ಪಣೆ ಮಾಡಿದ ಇವರು ಈವರೆಗೆ 78 ಟೆಸ್ಟ್‌ ಪಂದ್ಯಗಳು, 114 ಏಕದಿನ ಪಂದ್ಯ ಹಾಗೂ 60 ಟಿ20 ಪಂದ್ಯಗಳಲ್ಲಿ ತಮ್ಮ ದೇಶವನ್ನು ಪ್ರತಿನಿಧಿಸಿ ಟೆಸ್ಟ್‌ನಲ್ಲಿ 317 ವಿಕೆಟ್‌, ಏಕದಿನದಲ್ಲಿ 211 ವಿಕೆಟ್‌ ಹಾಗೂ ಟಿ20 ಮಾದರಿಯಲ್ಲಿ 81 ವಿಕೆಟ್‌ ಕಬಳಿಸಿ ಕಿವೀಸ್‌ ತಂಡದ ಪ್ರಮುಖ ಬೌಲರ್‌ ಆಗಿ ಗುರುತಿಸಿಕೊಂಡಿದ್ದಾರೆ.

ಬೌಲ್ಟ್‌ ಅವರು ತಮ್ಮ ಅತರಾಷ್ಟ್ರೀಯ ತಂಡದ ಕೇಂದ್ರ ಒಪ್ಪಂದದಿಂದ ಹೊರಗುಳಿಯುವ ನಿರ್ಧಾರವನ್ನು 2022 ರಲ್ಲಿ ಸ್ವತಃ ಅವರೇ ಆಯ್ದುಕೊಂಡಿದ್ದರು. ಆದಾದ ಬಳಿಕ ಹಲವಾರು ಕೌಂಟಿ ಕ್ರಿಕೆಟ್‌ನಲ್ಲಿ ಆಡುವುದನ್ನು ಮುಂದುವರೆಸಿರುವ ಅವರು, ವಿಶ್ವದ ಅತಿದೊಡ್ಡ ಚುಟುಕು ಕ್ರಿಕೆಟ್‌ ಆದ ಐಪಿಎಲ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ ಪರವಾಗಿ ಆಡುತ್ತಿದ್ದಾರೆ.

ಇನ್ನು ಒಂಭತ್ತನೇ ಆವೃತ್ತಿಯ ಟಿ20 ವಿಶ್ವಕಪ್‌ನಲ್ಲಿ ಬೋಲ್ಟ್‌ ಮೂರು ಪಂದ್ಯಗಳಿಂದ 9.29ರ ಸರಾಸರಿಯಲ್ಲಿ 7 ವಿಕೆಟ್‌ ಕಬಳಿಸಿ ಗಮನ ಸೆಳೆದಿದ್ದಾರೆ.

ಇದೇ ಜೂನ್‌.17 ರಂದು ಲಾರಾ ಕ್ರೀಡಾಂಗಣದಲ್ಲಿ ಪಪುವಾ ನ್ಯೂಗಿನಿ ವಿರುದ್ಧ ನಡೆಯುವ ಪಂದ್ಯ ಬೌಲ್ಟ್‌ನ ಟಿ20 ವಿಶ್ವಕಪ್‌ನಲ್ಲಿನ ಕೊನೆಯ ಪಂದ್ಯವಾಗಲಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

4 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

6 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

12 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

12 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

17 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

17 hours ago