ಕ್ರೀಡೆ

ಟಿ20 ವಿಶ್ವಕಪ್‌ಗೆ ವಿದಾಯ ಹೇಳಿದ ಕಿವೀಸ್‌ ಬೌಲರ್‌ ಟ್ರೆಂಟ್‌ ಬೌಲ್ಟ್‌

ವೆಸ್ಟ್‌ ಇಂಡೀಸ್‌ ಹಾಗೂ ಅಮೇರಿಕಾ ಸಹಭಾಗಿತ್ವದಲ್ಲಿ ನಡೆಯುತ್ತಿರುವ 9ನೇ ಆವೃತ್ತಿಯ ಟಿ20 ವಿಶ್ವಕಪ್‌ನಲ್ಲಿ ಹೀನಾಯ ಪ್ರದರ್ಶನ ತೋರಿದ ನ್ಯೂಜಿಲೆಂಡ್‌ ತಂಡ ಟಿ20 ವಿಶ್ವಕಪ್‌ ಸೂಪರ್‌-8 ಹಂತಕ್ಕೆ ತಲುಪುವಲ್ಲಿ ವಿಫಲವಾಗಿದೆ.

ʼಸಿʼ ಗ್ರೂಪ್‌ನಲ್ಲಿ ತಾವಾಡಿರುವ ಮೂರು ಪಂದ್ಯಗಳಲ್ಲಿ ಎರಡು ಪಂದ್ಯಗಳಲ್ಲಿ ಸೋಲು ಕಾಣುವ ಮೂಲಕ ಟೂರ್ನಿಯಿಂದ ಹೊರ ಬಿದ್ದಿದೆ. ತನ್ನ ಗ್ರೂಪ್‌ನಲ್ಲಿ ವೆಸ್ಟ್‌ ಇಂಡೀಸ್‌, ಅಫ್ಘಾನಿಸ್ತಾನ್‌, ಪಪುವಾ ನ್ಯೂಗಿನಿ ಹಾಗೂ ಉಗಾಂಡ ತಂಡಗಳಿದ್ದರೂ ಸಹಾ ಈ ಬಾರಿಯ ಟಿ20 ವಿಶ್ವಕಪ್‌ಗೆ ಅರ್ಹತೆ ಪಡೆಯುವಲ್ಲಿ ಕಿವೀಸ್‌ ಸೋತಿದೆ.

ಇನ್ನು ಉಗಾಂಡ ವಿರುದ್ಧ ಪಂದ್ಯ ಗೆದ್ದ ನ್ಯೂಜಿಲೆಂಡ್‌ ತವರಿಗೆ ಮರಳುವ ಮುನ್ನವೇ ತಂಡಕ್ಕೆ ಆಘಾತವಾಗಿದೆ. ತಂಡದ ಎಡಗೈ ವೇಗಿ ಟ್ರೆಂಟ್‌ ಬೌಲ್ಟ್‌ ತಾವು ಮುಂಬರುವ ಟಿ20 ವಿಶ್ವಕಪ್‌ನಲ್ಲಿ ಆಡದಿರುವ ಬಗ್ಗೆ ತಿಳಿಸಿದ್ದಾರೆ.

ಉಗಾಂಡ ವಿರುದ್ಧದ ಪಂದ್ಯ ಮುಗಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಬೌಲ್ಟ್, ಇದು ನನ್ನ ಕೊನೆಯ ಟಿ20 ವಿಶ್ವಕಪ್‌ ಎಂದಷ್ಟೆ ಹೇಳಬಲ್ಲೇ ಎಂದು ಹೇಳಿದ್ದಾರೆ. ಆ ಮೂಲಕ ಮುಂಬರುವ 2026ರ ಟಿ20 ವಿಶ್ವಕಪ್‌ನಲ್ಲಿ ಆಡುವುದಿಲ್ಲ ಎಂಬುದನ್ನು ಸಾಭೀತುಪಡಿಸಿದ್ದಾರೆ.

2011ರ ಡಿಸೆಂಬರ್‌ನಲ್ಲಿ ನ್ಯೂಜಿಲೆಂಡ್‌ ಪರವಾಗಿ ಅಂತರಾಷ್ಟ್ರೀಯ ತಂಡಕ್ಕೆ ಪಾದಾರ್ಪಣೆ ಮಾಡಿದ ಇವರು ಈವರೆಗೆ 78 ಟೆಸ್ಟ್‌ ಪಂದ್ಯಗಳು, 114 ಏಕದಿನ ಪಂದ್ಯ ಹಾಗೂ 60 ಟಿ20 ಪಂದ್ಯಗಳಲ್ಲಿ ತಮ್ಮ ದೇಶವನ್ನು ಪ್ರತಿನಿಧಿಸಿ ಟೆಸ್ಟ್‌ನಲ್ಲಿ 317 ವಿಕೆಟ್‌, ಏಕದಿನದಲ್ಲಿ 211 ವಿಕೆಟ್‌ ಹಾಗೂ ಟಿ20 ಮಾದರಿಯಲ್ಲಿ 81 ವಿಕೆಟ್‌ ಕಬಳಿಸಿ ಕಿವೀಸ್‌ ತಂಡದ ಪ್ರಮುಖ ಬೌಲರ್‌ ಆಗಿ ಗುರುತಿಸಿಕೊಂಡಿದ್ದಾರೆ.

ಬೌಲ್ಟ್‌ ಅವರು ತಮ್ಮ ಅತರಾಷ್ಟ್ರೀಯ ತಂಡದ ಕೇಂದ್ರ ಒಪ್ಪಂದದಿಂದ ಹೊರಗುಳಿಯುವ ನಿರ್ಧಾರವನ್ನು 2022 ರಲ್ಲಿ ಸ್ವತಃ ಅವರೇ ಆಯ್ದುಕೊಂಡಿದ್ದರು. ಆದಾದ ಬಳಿಕ ಹಲವಾರು ಕೌಂಟಿ ಕ್ರಿಕೆಟ್‌ನಲ್ಲಿ ಆಡುವುದನ್ನು ಮುಂದುವರೆಸಿರುವ ಅವರು, ವಿಶ್ವದ ಅತಿದೊಡ್ಡ ಚುಟುಕು ಕ್ರಿಕೆಟ್‌ ಆದ ಐಪಿಎಲ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ ಪರವಾಗಿ ಆಡುತ್ತಿದ್ದಾರೆ.

ಇನ್ನು ಒಂಭತ್ತನೇ ಆವೃತ್ತಿಯ ಟಿ20 ವಿಶ್ವಕಪ್‌ನಲ್ಲಿ ಬೋಲ್ಟ್‌ ಮೂರು ಪಂದ್ಯಗಳಿಂದ 9.29ರ ಸರಾಸರಿಯಲ್ಲಿ 7 ವಿಕೆಟ್‌ ಕಬಳಿಸಿ ಗಮನ ಸೆಳೆದಿದ್ದಾರೆ.

ಇದೇ ಜೂನ್‌.17 ರಂದು ಲಾರಾ ಕ್ರೀಡಾಂಗಣದಲ್ಲಿ ಪಪುವಾ ನ್ಯೂಗಿನಿ ವಿರುದ್ಧ ನಡೆಯುವ ಪಂದ್ಯ ಬೌಲ್ಟ್‌ನ ಟಿ20 ವಿಶ್ವಕಪ್‌ನಲ್ಲಿನ ಕೊನೆಯ ಪಂದ್ಯವಾಗಲಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

6 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

7 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

7 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

9 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

9 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

9 hours ago