ನವದೆಹಲಿ : ಸಂಪೂರ್ಣ ಫಿಟ್ ಆಗಿರುವ ಜಸ್ಪ್ರೀತ್ ಬುಮ್ರಾ ಆಗಸ್ಟ್ನಲ್ಲಿ ಐರ್ಲ್ಯಾಂಡ್ ವಿರುದ್ದದ ಟ್ವೆಂಟಿ-20 ತಂಡದಲ್ಲಿ ನಾಯಕನ ಪಾತ್ರದಲ್ಲಿ ಟೀಮ್ ಇಂಡಿಯಾಕ್ಕೆ ವಾಪಸಾಗಲಿದ್ದಾರೆ.
ಡಬ್ಲಿನ್ನಲ್ಲಿ ನಡೆಯುವ 3 ಪಂದ್ಯಗಳ ಸರಣಿಗೆ ಕರ್ನಾಟಕದ ವೇಗಿ ಪ್ರಸಿದ್ಧ ಕೃಷ್ಣ ಕೂಡ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ಜಿ. ಕಸ್ತೂರಿರಂಗನ್ ಸ್ಮಾರಕ ಟ್ರೋಫಿಗಾಗಿ ನಡೆದ ಕೆಎಸ್ಸಿಎ ಟಿ-20 ಟೂರ್ನಮೆಂಟ್ನಲ್ಲಿ 4 ವಿಕೆಟ್ಗಳನ್ನು(4-36) ಕಬಳಿಸಿದ ಕೃಷ್ಣ ಸ್ಪರ್ಧಾತ್ಮಕ ಕ್ರಿಕೆಟಿಗೆ ವಾಪಸಾಗಿದ್ದಾರೆ. 11 ಏಕದಿನ ಪಂದ್ಯಗಳನ್ನು ಆಡಿರುವ ಕೃಷ್ಣ 2022ರ ಆಗಸ್ಟ್ನಲ್ಲಿ ಝಿಂಬಾಬ್ವೆ ವಿರುದ್ಧ ಕೊನೆಯ ಪಂದ್ಯ ಆಡಿದ್ದು ಆ ನಂತರ ಗಾಯಗೊಂಡಿದ್ದರು.
ಕಳೆದ ಸೆಪ್ಟಂಬರ್ನಲ್ಲಿ ಆಸ್ಟ್ರೇಲಿಯ ವಿರುದ್ಧ ಸ್ವದೇಶದಲ್ಲಿ ಟಿ-20 ಸರಣಿಯನ್ನು ಆಡಿದ ನಂತರ ಬುಮ್ರಾ ಸಕ್ರಿಯ ಕ್ರಿಕೆಟ್ನಿಂದ ದೂರವೇ ಉಳಿದಿದ್ದರು. ಕಳೆದ 2 ತಿಂಗಳುಗಳಿಂದ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡಮಿಯಲ್ಲಿದ್ದ(ಎನ್ಸಿಎ)ಬುಮ್ರಾ ನಿಧಾನವಾಗಿ ತನ್ನ ಬೌಲಿಂಗ್ ವರ್ಕ್ಲೋಡ್ ಹೆಚ್ಚಿಸಿಕೊಂಡಿದ್ದಾರೆ. ಬುಮ್ರಾ ನ್ಯೂಝಿಲ್ಯಾಂಡ್ನಲ್ಲಿ ಬೆನ್ನಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.
ಬುಮ್ರಾ ಕಳೆದ ವರ್ಷ ಇಂಗ್ಲೆಂಡ್ ವಿರುದ್ಧ ಬರ್ಮಿಂಗ್ಹ್ಯಾಮ್ನಲ್ಲಿ ನಡೆದಿದ್ದ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವನ್ನು ನಾಯಕನಾಗಿ ಮುನ್ನಡೆಸಿದ್ದರು.
ಐರ್ಲ್ಯಾಂಡ್ ಪ್ರವಾಸಕ್ಕೆ ಭಾರತದ ಟಿ-20 ತಂಡ : ಜಸ್ಪ್ರೀತ್ ಬುಮ್ರಾ(ನಾಯಕ), ಋತುರಾಜ್ ಗಾಯಕ್ವಾಡ್(ಉಪ ನಾಯಕ), ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್(ವಿಕೆಟ್ಕೀಪರ್), ಜಿತೇಶ್ ಶರ್ಮಾ(ವಿಕೆಟ್ಕೀಪರ್), ಶಿವಂ ದುಬೆ, ವಾಶಿಂಗ್ಟನ್ ಸುಂದರ್, ಶಹಬಾಝ್ ಅಹ್ಮದ್, ರವಿ ಬಿಷ್ಣೋಯ್, ಪ್ರಸಿದ್ಧ ಕೃಷ್ಣ, ಅರ್ಷದೀಪ್ ಸಿಂಗ್, ಮುಕೇಶ್ ಕುಮಾರ್, ಅವೇಶ್ ಖಾನ್.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…