ಕ್ರೀಡೆ

ಐರ್‌ಲ್ಯಾಂಡ್ ವಿರುದ್ಧ ಟ್ವೆಂಟಿ-20 ಸರಣಿ: ಭಾರತ ತಂಡಕ್ಕೆ ಬುಮ್ರಾ ವಾಪಸ್

ನವದೆಹಲಿ :  ಸಂಪೂರ್ಣ ಫಿಟ್ ಆಗಿರುವ ಜಸ್‌ಪ್ರೀತ್ ಬುಮ್ರಾ ಆಗಸ್ಟ್‌ನಲ್ಲಿ ಐರ್‌ಲ್ಯಾಂಡ್ ವಿರುದ್ದದ ಟ್ವೆಂಟಿ-20 ತಂಡದಲ್ಲಿ ನಾಯಕನ ಪಾತ್ರದಲ್ಲಿ ಟೀಮ್ ಇಂಡಿಯಾಕ್ಕೆ ವಾಪಸಾಗಲಿದ್ದಾರೆ.

ಡಬ್ಲಿನ್‌ನಲ್ಲಿ ನಡೆಯುವ 3 ಪಂದ್ಯಗಳ ಸರಣಿಗೆ ಕರ್ನಾಟಕದ ವೇಗಿ ಪ್ರಸಿದ್ಧ ಕೃಷ್ಣ ಕೂಡ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ಜಿ. ಕಸ್ತೂರಿರಂಗನ್ ಸ್ಮಾರಕ ಟ್ರೋಫಿಗಾಗಿ ನಡೆದ ಕೆಎಸ್‌ಸಿಎ ಟಿ-20 ಟೂರ್ನಮೆಂಟ್‌ನಲ್ಲಿ 4 ವಿಕೆಟ್‌ಗಳನ್ನು(4-36) ಕಬಳಿಸಿದ ಕೃಷ್ಣ ಸ್ಪರ್ಧಾತ್ಮಕ ಕ್ರಿಕೆಟಿಗೆ ವಾಪಸಾಗಿದ್ದಾರೆ. 11 ಏಕದಿನ ಪಂದ್ಯಗಳನ್ನು ಆಡಿರುವ ಕೃಷ್ಣ 2022ರ ಆಗಸ್ಟ್‌ನಲ್ಲಿ ಝಿಂಬಾಬ್ವೆ ವಿರುದ್ಧ ಕೊನೆಯ ಪಂದ್ಯ ಆಡಿದ್ದು ಆ ನಂತರ ಗಾಯಗೊಂಡಿದ್ದರು.

ಕಳೆದ ಸೆಪ್ಟಂಬರ್‌ನಲ್ಲಿ ಆಸ್ಟ್ರೇಲಿಯ ವಿರುದ್ಧ ಸ್ವದೇಶದಲ್ಲಿ ಟಿ-20 ಸರಣಿಯನ್ನು ಆಡಿದ ನಂತರ ಬುಮ್ರಾ ಸಕ್ರಿಯ ಕ್ರಿಕೆಟ್‌ನಿಂದ ದೂರವೇ ಉಳಿದಿದ್ದರು. ಕಳೆದ 2 ತಿಂಗಳುಗಳಿಂದ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡಮಿಯಲ್ಲಿದ್ದ(ಎನ್‌ಸಿಎ)ಬುಮ್ರಾ ನಿಧಾನವಾಗಿ ತನ್ನ ಬೌಲಿಂಗ್ ವರ್ಕ್‌ಲೋಡ್ ಹೆಚ್ಚಿಸಿಕೊಂಡಿದ್ದಾರೆ. ಬುಮ್ರಾ ನ್ಯೂಝಿಲ್ಯಾಂಡ್‌ನಲ್ಲಿ ಬೆನ್ನಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಬುಮ್ರಾ ಕಳೆದ ವರ್ಷ ಇಂಗ್ಲೆಂಡ್ ವಿರುದ್ಧ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದಿದ್ದ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವನ್ನು ನಾಯಕನಾಗಿ ಮುನ್ನಡೆಸಿದ್ದರು.

ಐರ್‌ಲ್ಯಾಂಡ್ ಪ್ರವಾಸಕ್ಕೆ ಭಾರತದ ಟಿ-20 ತಂಡ : ಜಸ್‌ಪ್ರೀತ್ ಬುಮ್ರಾ(ನಾಯಕ), ಋತುರಾಜ್ ಗಾಯಕ್ವಾಡ್(ಉಪ ನಾಯಕ), ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್(ವಿಕೆಟ್‌ಕೀಪರ್), ಜಿತೇಶ್ ಶರ್ಮಾ(ವಿಕೆಟ್‌ಕೀಪರ್), ಶಿವಂ ದುಬೆ, ವಾಶಿಂಗ್ಟನ್ ಸುಂದರ್, ಶಹಬಾಝ್ ಅಹ್ಮದ್, ರವಿ ಬಿಷ್ಣೋಯ್, ಪ್ರಸಿದ್ಧ ಕೃಷ್ಣ, ಅರ್ಷದೀಪ್ ಸಿಂಗ್, ಮುಕೇಶ್ ಕುಮಾರ್, ಅವೇಶ್ ಖಾನ್.

andolanait

Recent Posts

IPL 2026 | ಕಂಗೆಟ್ಟ ಕ್ಯಾಪಿಟಲ್ಸ್‌ ; ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸುಲಭ ಜಯ

ನವದೆಹಲಿ : ಹ್ಯಾಜಲ್‌ವುಡ್‌, ಭುವನೇಶ್ವರ್ ಬೌಲಿಂಗ್‌ ಅಬ್ಬರ, ಸಂಘಟಿತ ಫೀಲ್ಡಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

4 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಮೈಸೂರು : ಕೆ-ಸೆಟ್‌ ಮತ್ತು ಯುಜಿಸಿ-ನೆಟ್‌, ಜೆಆರ್‌ಎಫ್‌ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…

6 hours ago

ಹಾಸನ | ಮೆದುಳಿನಲ್ಲಿ ತೀವ್ರ ರಕ್ತಸ್ರಾವ ; 25 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ ಯುವತಿ ಸಾವು

ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…

6 hours ago

ಚೆಲುವಾಂಬ ಆಸ್ಪತ್ರೆ | 15 ತಿಂಗಳಲ್ಲಿ 421 ಶಿಶು ಮರಣ ; ದಾಖಲೆ ಬಿಡುಗಡೆ ಮಾಡಿದ ಮಾಜಿ ಶಾಸಕ ನಾಗೇಂದ್ರ

ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…

6 hours ago

ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ : ಏ.29ರಂದು ಮತದಾನ ; ಭಾರೀ ಬಿಗಿ ಭದ್ರತೆ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…

7 hours ago

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…

7 hours ago