ಕ್ರೀಡೆ

IPL ಹರಾಜಿಗೂ ಮುಂಚೆ ಟ್ವಿಸ್ಟ್‌: ಆರ್‌ಸಿಬಿಗೆ ಗ್ರೀನ್‌, ಮುಂಬೈಗೆ ಪಾಂಡ್ಯ

ಬೆಂಗಳೂರು : ಡಿಸೆಂಬರ್‌ 19 ರಂದು ನಡೆಯುವ ಐಪಿಎಲ್‌ ಮಿನಿ ಹರಾಜಿಗೂ ಮುನ್ನಾ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ರೀಟೆನ್‌ ಹಾಗೂ ರಿಲೀಸ್‌ ನಿರ್ಧಾರ ಬೆನ್ನಲ್ಲೇ ಇಂದು (ಸೋಮವಾರ) ಮತ್ತೊಂದು ಬದಲಾವಣೆ ನಡೆದಿದೆ.

ಸದ್ದಿಲ್ಲದೇ ಮುಂಬೈ ನಡೆಸಿದ ಟ್ರೇಡ್‌ ಎಲ್ಲರ ಅಚ್ಚರಿಗೆ ಕಾರಣವಾಗಿದೆ. ಗುಜರಾತ್‌ ಪ್ರಾಂಚೈಸಿ ಹಾರ್ದಿಕ್‌ ಅವರನ್ನು ಉಳಿಸಿಕೊಳ್ಳಲಿದೆ ಎಂದು ನೆನ್ನೆ ಅಧಿಕೃತವಾಗಿ ಹೇಳಿದ್ದರು. ಆದರೆ ಇಂದು ಟ್ರೇಡ್‌ ಮೂಲಕ ಹಾರ್ದಿಕ್‌ ಮುಂಬೈ ಪಾಲಾಗಿದ್ದಾರೆ. ಮತ್ತೊಂದೆಡೆ ಮುಂಬೈ ತಂಡದಲ್ಲಿದ್ದ ಆಸ್ಟ್ರೇಲಿಯಾ ಆಲ್‌ ರೌಂಡರ್‌ ಕ್ಯಾಮರೋನ್‌ ಗ್ರೀನ್‌ ಅವರನ್ನು ಆಸ್‌ಸಿಬಿ ಕೊಂಡುಕೊಂಡಿದೆ. ಇವೆರಡು ಸದ್ಯ ಕ್ರೀಡಾಭಿಮಾನಿಗಳ ಅಚ್ಚರಿಗೆ ಕಾರಣವಾಗಿದೆ.

ಆರ್‌ಸಿಬಿ ಗ್ರೀನ್‌ ಅವರನ್ನು ಬರೋಬ್ಬರಿ 17.5 ಕೋಟಿ ನೀಡಿ ಆಲ್‌ರೌಂಡರ್‌ ಆಟಗಾರನನ್ನು ಖರೀದಿಸಿದೆ. ರಿಲೀಸ್ ಹಾಗೂ ರಿಟೇನ್ ಬಳಿಕ ಆರ್‌ಸಿಬಿ ತಂಡದಲ್ಲಿ 40.75 ಕೋಟಿ ರೂಪಾಯಿ ಬಾಕಿ ಉಳಿದಿತ್ತು. ಈ ಮೊತ್ತದಲ್ಲಿ ಐಪಿಎಲ್ ಹರಾಜಿನಲ್ಲಿ ಪಾಲ್ಗೊಳ್ಳಲು ಸಜ್ಜಾಗಿತ್ತು. ಆದರೆ ದಿಢೀರ್ ಬೆಳವಣಿಗೆಯಲ್ಲಿ ಆರ್‌ಸಿಬಿ 17.5 ಕೋಟಿ ರೂಪಾಯಿಗೆ ಕ್ಯಾಮರೂನ್ ಗ್ರೀನ್ ಖರೀದಿಸಿದೆ. ಈ ಮೂಲಕ ಆರ್‌ಸಿಬಿ ಮತ್ತೊಬ್ಬ ಆಲ್ರೌಂಡರ್ ಆಟಗಾರನ ತಂಡಕ್ಕೇ ಸೇರಿಸಿಕೊಂಡಿದೆ.

ಈ ಬಗ್ಗೆ ಆರ್‌ಸಿಬಿ ತನ್ನ ಅಧಿಕೃತ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಆಸ್ಟ್ರೇಲಿಯಾ ಆಲ್‌ರೌಂಡರ್‌ ಕ್ಯಾಮರೋನ್‌ ಗ್ರೀನ್‌ ರೆಡ್‌ ಅಂಡ್‌ ಗೋಲ್ಡ್‌ ಪರವಾಗಿ ಐಪಿಎಲ್‌-2024 ರಲ್ಲಿ ಆಡಲಿದ್ದಾರೆ ಎಂದು ಬರೆದಿಕೊಂಡಿದ್ದಾರೆ. ಇತ್ತ ಮುಂಬೈಗೆ ವಾಪಾಸಾಗಿರುವ ಕುರಿತು, ನೀತಾ ಅಂಬಾನಿ ಹಾಗೂ ಆಕಾಶ್‌ ಅಂಬಾನಿ ಅವರು ಪಾಂಡ್ಯಗೆ ಸ್ವಾಗತ ಕೋರಿದ್ದಾರೆ.

ಯಾವ ತಂಡದ ಖಜಾನೆಯಲ್ಲಿ ಎಷ್ಟು ಹಣವಿದೆ: ಆರ್‌ಸಿಬಿ-23.25 ಕೋಟಿ, ಎಸ್‌ಆರ್‌ಎಚ್‌-34 ಕೋಟಿ, ಕೆಕೆಆರ್‌-32.7 ಕೋಟಿ, ಸಿಎಸ್‌ಕೆ-31.4 ಕೋಟಿ, ಪಂಜಾಬ್‌-29.1 ಕೋಟಿ, ಡಿಸಿ-28.95 ಕೋಟಿ, ಎಂಐ- 17.75 ಕೋಟಿ, ಅರ್‌ಅರ್‌-14.5 ಕೋಟಿ, ಎಲ್‌ಎಸ್‌ಜಿ- 13.15 ಕೋಟಿ, ಜಿಟಿ-38.15 ಕೋಟಿ ಹಣ ಪ್ರತಿ ತಂಡದಲ್ಲಿದೆ.

ಟ್ರೇಡ್‌ನಲ್ಲಿ ಆಟಗಾರರ ವಿನಿಮಯ:
ಟ್ರೇಡ್ ವಿಂಡೋ ನಿಯಮದಡಿಯಲ್ಲಿ ಆರ್‌ಸಿಬಿ ತಂಡದಲ್ಲಿದ್ದ ಶಹಬಾಜ್ ಅಹಮದ್ ಮತ್ತು ಸನ್‌ರೈಸರ್ಸ್ ತಂಡದಲ್ಲಿದ್ದ ಮಯಾಂಕ್ ಡಾಗ‌ರ್ ಅವರನ್ನು ಫ್ರಾಂಚೈಸಿಗಳು ಪರಸ್ಪರ ವಿನಿಮಯ ಮಾಡಿಕೊಂಡಿವೆ. ಮತ್ತು ಮುಂಬೈ ತಂಡದ ಆಲ್ರೌಂಡರ್‌ ಕ್ಯಾಮರೋನ್‌ ಗ್ರೀನ್‌ ಅವರನ್ನು 17.5 ಕೋಟಿ ನೀಡಿ ಆರ್‌ಸಿಬಿ ಖರೀದಿಸಿದೆ.

ಗುಜರಾತ್‌ ಟೈಟನ್ಸ್‌ ತಂಡದ ನಾಯಕ ಹಾರ್ದಿಕ್‌ ಅವರನ್ನು ಪಾಂಡ್ಯ ಟ್ರೇಡ್‌ ಮೂಲಕ ಮುಂಬೈ ಮತ್ತೆ ತನ್ನ ತಂಡಕ್ಕೆ ಬರಮಾಡಿಕೊಂಡಿದೆ.

ಲಖನೌ ತಂಡದಲ್ಲಿ ರೊಮಾರಿಯೋ ಶೆಫರ್ಡ್ ಮತ್ತು ಅವೇಶ್ ಖಾನ್ ಅವರನ್ನು ಬಿಡುಗಡೆ ಮಾಡಲಾಗಿದೆ. ಶೆಫರ್ಡ್ ಮುಂಬೈ ತಂಡವನ್ನು ಹಾಗೂ ಆವೇಶ್ ರಾಜಸ್ತಾನ ತಂಡವನ್ನು ಸೇರಿಕೊಳ್ಳಲಿದ್ದಾರೆ.

ರಾಜಸ್ತಾನ ತಂಡದಲ್ಲಿದ್ದ ಕರ್ನಾಟಕದ ದೇವದತ್ತ ಪಡಿಕ್ಕಲ್ ಅವರು ಲಖನೌ ಸೂಪರ್ ಜೈಂಟ್ಸ್ ತಂಡವನ್ನು ಪ್ರತಿನಿಧಿಸಲಿದ್ದಾರೆ.

andolanait

Recent Posts

ಡೀಮ್ಡ್‌ ಅರಣ್ಯ ಪ್ರದೇಶ ಗುರುತಿಸುವಿಕೆಗೆ ಸಮಿತಿ ರಚನೆ : ಈಶ್ವರ ಖಂಡ್ರೆ

ಬೆಳಗಾವಿ : ಸರ್ಕಾರ ರಾಜ್ಯದಲ್ಲಿ 2022ರಲ್ಲಿ ಒಟ್ಟು 3,30,000 ಹೆಕ್ಟೇರ್ ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶ ಇರುವುದಾಗಿ ಸರ್ವೋಚ್ಛ ನ್ಯಾಯಾಲಯಕ್ಕೆ…

19 mins ago

ಕೆಪಿಟಿಸಿಎಲ್ : 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ

ಬೆಂಗಳೂರು : ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಪಾರದರ್ಶಕವಾಗಿ ಕೌನ್ಸೆಲಿಂಗ್ ನಡೆಸಿ ಕರ್ನಾಟಕ ವಿದ್ಯುತ್ ಪ್ರಸರಣ…

22 mins ago

ಕ್ರೀಡಾ ನೇಮಕಾತಿ ಮೀಸಲಾತಿ ಅನುಷ್ಠಾನ : ಸಿಎಂ ಘೋಷಣೆ

ಬೆಳಗಾವಿ : ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ…

28 mins ago

ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ : ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

33 mins ago

ಹೊಸದಿಲ್ಲಿ : ಭಾರತೀಯ ಜಲಪ್ರದೇಶಕ್ಕೆ ಪ್ರವೇಶಿಸಿದ ಪಾಕಿಸ್ತಾನಿ ಬೋಟ್ ಒಂದನ್ನು ಇಂದು ಕೋಸ್ಟ್ ಗಾರ್ಡ್ ವಶಪಡಿಸಿಕೊಂಡಿದ್ದು ಹಡಗಿನಲ್ಲಿದ್ದ ೧೧ ಸಿಬ್ಬಂದಿಯನ್ನು ಬಂಧಿಸಲಾಗಿದೆ.

ಭಾರತೀಯ ಜಲಪ್ರದೇಶದಲ್ಲಿ ಅಕ್ರಮ ಮೀನುಗಾರಿಕೆಗಾಗಿ ಭಾರತೀಯ ಕೋಸ್ಟ್ ಗಾರ್ಡ್ ಪಾಕಿಸ್ತಾನಿ ದೋಣಿಯನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು…

36 mins ago

ಮೈಸೂರು | 21 ರಂದು ಪಲ್ಸ್ ಪೋಲಿಯೋ ಅಭಿಯಾನ

ಮೈಸೂರು : ಡಿಸೆಂಬರ್ 21 ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 5 ವರ್ಷದೊಳಗಿನ ಪ್ರತಿ ಮಗುವಿಗೆ…

1 hour ago