ಕ್ರೀಡೆ

IPL ಹರಾಜಿಗೂ ಮುಂಚೆ ಟ್ವಿಸ್ಟ್‌: ಆರ್‌ಸಿಬಿಗೆ ಗ್ರೀನ್‌, ಮುಂಬೈಗೆ ಪಾಂಡ್ಯ

ಬೆಂಗಳೂರು : ಡಿಸೆಂಬರ್‌ 19 ರಂದು ನಡೆಯುವ ಐಪಿಎಲ್‌ ಮಿನಿ ಹರಾಜಿಗೂ ಮುನ್ನಾ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ರೀಟೆನ್‌ ಹಾಗೂ ರಿಲೀಸ್‌ ನಿರ್ಧಾರ ಬೆನ್ನಲ್ಲೇ ಇಂದು (ಸೋಮವಾರ) ಮತ್ತೊಂದು ಬದಲಾವಣೆ ನಡೆದಿದೆ.

ಸದ್ದಿಲ್ಲದೇ ಮುಂಬೈ ನಡೆಸಿದ ಟ್ರೇಡ್‌ ಎಲ್ಲರ ಅಚ್ಚರಿಗೆ ಕಾರಣವಾಗಿದೆ. ಗುಜರಾತ್‌ ಪ್ರಾಂಚೈಸಿ ಹಾರ್ದಿಕ್‌ ಅವರನ್ನು ಉಳಿಸಿಕೊಳ್ಳಲಿದೆ ಎಂದು ನೆನ್ನೆ ಅಧಿಕೃತವಾಗಿ ಹೇಳಿದ್ದರು. ಆದರೆ ಇಂದು ಟ್ರೇಡ್‌ ಮೂಲಕ ಹಾರ್ದಿಕ್‌ ಮುಂಬೈ ಪಾಲಾಗಿದ್ದಾರೆ. ಮತ್ತೊಂದೆಡೆ ಮುಂಬೈ ತಂಡದಲ್ಲಿದ್ದ ಆಸ್ಟ್ರೇಲಿಯಾ ಆಲ್‌ ರೌಂಡರ್‌ ಕ್ಯಾಮರೋನ್‌ ಗ್ರೀನ್‌ ಅವರನ್ನು ಆಸ್‌ಸಿಬಿ ಕೊಂಡುಕೊಂಡಿದೆ. ಇವೆರಡು ಸದ್ಯ ಕ್ರೀಡಾಭಿಮಾನಿಗಳ ಅಚ್ಚರಿಗೆ ಕಾರಣವಾಗಿದೆ.

ಆರ್‌ಸಿಬಿ ಗ್ರೀನ್‌ ಅವರನ್ನು ಬರೋಬ್ಬರಿ 17.5 ಕೋಟಿ ನೀಡಿ ಆಲ್‌ರೌಂಡರ್‌ ಆಟಗಾರನನ್ನು ಖರೀದಿಸಿದೆ. ರಿಲೀಸ್ ಹಾಗೂ ರಿಟೇನ್ ಬಳಿಕ ಆರ್‌ಸಿಬಿ ತಂಡದಲ್ಲಿ 40.75 ಕೋಟಿ ರೂಪಾಯಿ ಬಾಕಿ ಉಳಿದಿತ್ತು. ಈ ಮೊತ್ತದಲ್ಲಿ ಐಪಿಎಲ್ ಹರಾಜಿನಲ್ಲಿ ಪಾಲ್ಗೊಳ್ಳಲು ಸಜ್ಜಾಗಿತ್ತು. ಆದರೆ ದಿಢೀರ್ ಬೆಳವಣಿಗೆಯಲ್ಲಿ ಆರ್‌ಸಿಬಿ 17.5 ಕೋಟಿ ರೂಪಾಯಿಗೆ ಕ್ಯಾಮರೂನ್ ಗ್ರೀನ್ ಖರೀದಿಸಿದೆ. ಈ ಮೂಲಕ ಆರ್‌ಸಿಬಿ ಮತ್ತೊಬ್ಬ ಆಲ್ರೌಂಡರ್ ಆಟಗಾರನ ತಂಡಕ್ಕೇ ಸೇರಿಸಿಕೊಂಡಿದೆ.

ಈ ಬಗ್ಗೆ ಆರ್‌ಸಿಬಿ ತನ್ನ ಅಧಿಕೃತ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಆಸ್ಟ್ರೇಲಿಯಾ ಆಲ್‌ರೌಂಡರ್‌ ಕ್ಯಾಮರೋನ್‌ ಗ್ರೀನ್‌ ರೆಡ್‌ ಅಂಡ್‌ ಗೋಲ್ಡ್‌ ಪರವಾಗಿ ಐಪಿಎಲ್‌-2024 ರಲ್ಲಿ ಆಡಲಿದ್ದಾರೆ ಎಂದು ಬರೆದಿಕೊಂಡಿದ್ದಾರೆ. ಇತ್ತ ಮುಂಬೈಗೆ ವಾಪಾಸಾಗಿರುವ ಕುರಿತು, ನೀತಾ ಅಂಬಾನಿ ಹಾಗೂ ಆಕಾಶ್‌ ಅಂಬಾನಿ ಅವರು ಪಾಂಡ್ಯಗೆ ಸ್ವಾಗತ ಕೋರಿದ್ದಾರೆ.

ಯಾವ ತಂಡದ ಖಜಾನೆಯಲ್ಲಿ ಎಷ್ಟು ಹಣವಿದೆ: ಆರ್‌ಸಿಬಿ-23.25 ಕೋಟಿ, ಎಸ್‌ಆರ್‌ಎಚ್‌-34 ಕೋಟಿ, ಕೆಕೆಆರ್‌-32.7 ಕೋಟಿ, ಸಿಎಸ್‌ಕೆ-31.4 ಕೋಟಿ, ಪಂಜಾಬ್‌-29.1 ಕೋಟಿ, ಡಿಸಿ-28.95 ಕೋಟಿ, ಎಂಐ- 17.75 ಕೋಟಿ, ಅರ್‌ಅರ್‌-14.5 ಕೋಟಿ, ಎಲ್‌ಎಸ್‌ಜಿ- 13.15 ಕೋಟಿ, ಜಿಟಿ-38.15 ಕೋಟಿ ಹಣ ಪ್ರತಿ ತಂಡದಲ್ಲಿದೆ.

ಟ್ರೇಡ್‌ನಲ್ಲಿ ಆಟಗಾರರ ವಿನಿಮಯ:
ಟ್ರೇಡ್ ವಿಂಡೋ ನಿಯಮದಡಿಯಲ್ಲಿ ಆರ್‌ಸಿಬಿ ತಂಡದಲ್ಲಿದ್ದ ಶಹಬಾಜ್ ಅಹಮದ್ ಮತ್ತು ಸನ್‌ರೈಸರ್ಸ್ ತಂಡದಲ್ಲಿದ್ದ ಮಯಾಂಕ್ ಡಾಗ‌ರ್ ಅವರನ್ನು ಫ್ರಾಂಚೈಸಿಗಳು ಪರಸ್ಪರ ವಿನಿಮಯ ಮಾಡಿಕೊಂಡಿವೆ. ಮತ್ತು ಮುಂಬೈ ತಂಡದ ಆಲ್ರೌಂಡರ್‌ ಕ್ಯಾಮರೋನ್‌ ಗ್ರೀನ್‌ ಅವರನ್ನು 17.5 ಕೋಟಿ ನೀಡಿ ಆರ್‌ಸಿಬಿ ಖರೀದಿಸಿದೆ.

ಗುಜರಾತ್‌ ಟೈಟನ್ಸ್‌ ತಂಡದ ನಾಯಕ ಹಾರ್ದಿಕ್‌ ಅವರನ್ನು ಪಾಂಡ್ಯ ಟ್ರೇಡ್‌ ಮೂಲಕ ಮುಂಬೈ ಮತ್ತೆ ತನ್ನ ತಂಡಕ್ಕೆ ಬರಮಾಡಿಕೊಂಡಿದೆ.

ಲಖನೌ ತಂಡದಲ್ಲಿ ರೊಮಾರಿಯೋ ಶೆಫರ್ಡ್ ಮತ್ತು ಅವೇಶ್ ಖಾನ್ ಅವರನ್ನು ಬಿಡುಗಡೆ ಮಾಡಲಾಗಿದೆ. ಶೆಫರ್ಡ್ ಮುಂಬೈ ತಂಡವನ್ನು ಹಾಗೂ ಆವೇಶ್ ರಾಜಸ್ತಾನ ತಂಡವನ್ನು ಸೇರಿಕೊಳ್ಳಲಿದ್ದಾರೆ.

ರಾಜಸ್ತಾನ ತಂಡದಲ್ಲಿದ್ದ ಕರ್ನಾಟಕದ ದೇವದತ್ತ ಪಡಿಕ್ಕಲ್ ಅವರು ಲಖನೌ ಸೂಪರ್ ಜೈಂಟ್ಸ್ ತಂಡವನ್ನು ಪ್ರತಿನಿಧಿಸಲಿದ್ದಾರೆ.

andolanait

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

16 mins ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

1 hour ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

1 hour ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

2 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

3 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

3 hours ago