ನವದೆಹಲಿ: ಒಂದೇ ಒಲಿಂಪಿಕ್ಸ್ನಲ್ಲಿ ಎರಡು ಪದಕ ಗೆದ್ದ ಮೊದಲ ಅಥ್ಲೀಟ್ ಎನ್ನುವ ಹೆಗ್ಗಳಿಕೆಗೆ ಪಾತ್ರವಾದ ಮನು ಭಾಕರ್ ಅವರಿಂದು ಭಾರತಕ್ಕೆ ಬಂದಿಳಿದಿದ್ದಾರೆ.
ಪ್ಯಾರಿಸ್ನಿಂದ ಹೊರಟ ಏರ್ ಇಂಡಿಯಾ ವಿಮಾನವು ಇಂದು ಬೆಳಿಗ್ಗೆ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಲ್ಯಾಂಡ್ ಆಗಿದೆ.
ಈ ವಿಮಾನದಲ್ಲಿ ಮನು ಭಾಕರ್ ಅವರು ದೆಹಲಿಗೆ ಬಂದಿಳಿದಿದ್ದು, ಸೋನೆ ಮಳೆಯ ನಡುವೆಯೂ ನೂರಾರು ಮಂದಿ ಮನು ಭಾಕರ್ಗೆ ಅದ್ಧೂರಿ ಸ್ವಾಗತ ಕೋರಿದ್ದಾರೆ.
ಮನು ಭಾಕರ್ ಅವರ ತವರು ರಾಜ್ಯವಾದ ಉತ್ತರಾಖಂಡ್ ಅಧಿಕಾರಿಗಳು, ಕ್ರೀಡಾ ಪ್ರೇಮಿಗಳು ಸೇರಿದಂತೆ ಅನೇಕರು ಮನು ಭಾಕರ್ ಅವರನ್ನು ಏರ್ಪೋರ್ಟ್ನಲ್ಲಿ ಬರಮಾಡಿಕೊಂಡರು.
ಹಾಡು, ನೃತ್ಯ ಹಾಗೂ ತಮಟೆ ಬಾರಿಸುವ ಮೂಲಕ ಭಾಕರ್ ಆಗಮನವನ್ನು ಏರ್ಪೋರ್ಟ್ನಲ್ಲಿ ಸಂಭ್ರಮಿಸಿದರು.
ಶನಿವಾರ ಮತ್ತೆ ಪ್ಯಾರಿಸ್ಗೆ ತೆರಳಲಿರುವ ಭಾಕರ್ ಅವರು, ಭಾನುವಾರ ನಡೆಯಲಿರುವ ಒಲಿಂಪಿಕ್ಸ್ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…