ಕ್ರೀಡೆ

U19 Asia Cup-2023: ಭಾರತದ ವಿರುದ್ಧ ಪಾಕ್‌ಗೆ ಭರ್ಜರಿ ಜಯ

ದುಬೈ : ಪಾಕ್‌ ಬ್ಯಾಟರ್‌ ಅಝಾನ್ ಅವೈಸ್ ಅವರ ಅಮೋಘ ಶತಕದ ಬಲದಿಂದ ಪಾಕಿಸ್ತಾನ ತಂಡ ಭಾರತ ವಿರುದ್ಧ ಜಯಭೇರಿ ಬಾರಿಸಿದೆ.

ಇಲ್ಲಿನ ಐಸಿಸಿ ಅಕಾಡೆಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಂಡರ್‌ 19 ಏಷ್ಯಾಕಪ್‌ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಭಾರತ ತಂಡದ ವಿರುದ್ಧ 8 ವಿಕೆಟ್‌ಗಳ ಜಯ ದಾಖಲಿಸಿತು.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಭಾರತ ತಂಡಕ್ಕೆ ಆದರ್ಶ್ ಸಿಂಗ್ (62) ಹಾಗೂ ಅರ್ಶಿನ್ ಕುಲ್ಕರ್ಣಿ (24) ಉತ್ತಮ ಆರಂಭ ಒದಗಿಸಿದ್ದರು. ಆ ಬಳಿಕ ಬಂದ ರುದ್ರ ಪಟೇಲ್ ಕೇವಲ 1 ರನ್​ಗಳಿಸಿ ಔಟಾದರು. ನಾಯಕ ಉದಯ್ ಸಹರಾನ್ 98 ಎಸೆತಗಳಲ್ಲಿ 5 ಫೋರ್​ಗಳೊಂದಿಗೆ 60 ರನ್ ಬಾರಿಸಿದರು. ಇನ್ನು ಕೆಳ ಕ್ರಮಾಂಕದಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಸಚಿನ್ ದಾಸ್ 42 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ 58 ರನ್ ಕಲೆಹಾಕಿದರು. ಈ ಮೂಲಕ ಭಾರತ ತಂಡವು 50 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 259 ರನ್‌ಗಳ ಸಾಧಾರಣ ಗುರಿ ನೀಡಿತು.

260 ರನ್​ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡಕ್ಕೆ ಆರಂಭಿಕ ಆಘಾತವಾಯಿತು. ಶಾಮಿಲ್ ಹುಸೇನ್ ಕೇವಲ 8 ರನ್​ಗೆ ಔಟಾದರು. ಆದರೆ 2ನೇ ವಿಕೆಟ್​ಗೆ ಜೊತೆಯಾದ ಶಹಝೈಬ್ ಖಾನ್ ಹಾಗೂ ಅಝಾನ್ ಅವೈಸ್ 110 ರನ್​ಗಳ ಭರ್ಜರಿ ಜೊತೆಯಾಟವಾಡಿದರು. ಶಹಝೈಬ್ 63 ರನ್ ಗಳಿಸಿ ನಿರ್ಗಮಿಸಿದರು. ಮತ್ತೊಂದೆಡೆ ಜವಾಬ್ದಾರಿಯುತ ಬ್ಯಾಟಿಂಗ್ ಮುಂದುವರೆಸಿದ ಅಝಾನ್ ಅವೈಸ್ 130 ಎಸೆತಗಳಲ್ಲಿ 10 ಫೋರ್​ಗಳೊಂದಿಗೆ ಅಜೇಯ 105 ರನ್ ಬಾರಿಸಿದರು. ಅಲ್ಲದೆ ನಾಯಕ ಸಾದ್ ಬೇಗ್ (68) ಜೊತೆಗೂಡಿ 47 ಓವರ್​ಗಳಲ್ಲಿ ತಂಡವನ್ನು ಗುರಿಮುಟ್ಟಿಸಿದರು.

ಪಾಕಿಸ್ತಾನ್ ತಂಡವು ಟೀಮ್ ಇಂಡಿಯಾ ವಿರುದ್ಧ 8 ವಿಕೆಟ್​ಗಳ ಜಯ ಸಾಧಿಸುವ ಮೂಲಕ ಗ್ರೂಪ್‌ ಎ ನಲ್ಲಿ ಅಗ್ರಸ್ಥಾನಕ್ಕೇರಿತು.

andolanait

Recent Posts

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

1 hour ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

2 hours ago

ಸಕಾಲಕ್ಕೆ ಸಿಗದ ಆಂಬುಲೆನ್ಸ್‌ ; ಡೋಲಿಯಲ್ಲಿ ವೃದ್ಧೆಯನ್ನು ಆಸ್ಪತ್ರೆಗೆ ಕರೆದೊಯ್ದ ಗ್ರಾಮಸ್ಥರು

ಹನೂರು : ಮೂರ್ಛೆ ತಪ್ಪಿದ್ದ ವೃದ್ದೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆಂಬುಲೆನ್ಸ್ ಸಿಗದೆ ಡೋಲಿ ಮುಖಾಂತರ ಕರೆದುಕೊಂಡು ಬಂದಿರುವ ಘಟನೆ…

3 hours ago

ಮಾತು ಕೊಟ್ಟಂತೆ ನಡೆದಿದ್ದೇವೆ : ಸಿಎಂ

2.5 ವರ್ಷದಲ್ಲಿ 592 ಭರವಸೆಗಳಲ್ಲಿ 243 ಭರವಸೆ ಈಡೇರಿಕೆ ಹಾವೇರಿ : ಏನು ಮಾತು ಕೊಟ್ಟಿದ್ದೆವೋ ಅದರಂತೆ ನಡೆದಿದ್ದೇವೆ. ಸಾವಿರ…

3 hours ago

4 ಕೆ.ಜಿಗೂ ಹೆಚ್ಚು ಹೆರಾಯಿನ್‌ ವಶ : ಪಾಕ್‌ ಕಳ್ಳ ಸಾಗಣಿಕೆ ಪ್ರಯತ್ನ ವಿಫಲ

ಜಮ್ಮು : ನೆರೆಯ ಪಾಕಿಸ್ತಾನದಿಂದ ಡ್ರೋನ್ ಮೂಲಕ ಬಂದ ನಾಲ್ಕು ಕೆಜಿಗೂ ಹೆಚ್ಚು ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಗಡಿಯಲ್ಲಿ…

3 hours ago

ಮದ್ದೂರು ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮ : ಸಚಿವ ಚಲುವರಾಯಸ್ವಾಮಿ ಭರವಸೆ

ಮದ್ದೂರು : ಮದ್ದೂರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ಸಲುವಾಗಿ ನಗರಸಭೆಗೆ ಗ್ರಾ.ಪಂ‌.ಗಳ ಸೇರ್ಪಡೆ ಸಂಬಂಧ ಸರ್ಕಾರದ ಹಂತದಲ್ಲಿ ಮಾತನಾಡಿ ಕ್ರಮ…

3 hours ago