ಕ್ರೀಡೆ

U19 Asia Cup-2023: ಭಾರತದ ವಿರುದ್ಧ ಪಾಕ್‌ಗೆ ಭರ್ಜರಿ ಜಯ

ದುಬೈ : ಪಾಕ್‌ ಬ್ಯಾಟರ್‌ ಅಝಾನ್ ಅವೈಸ್ ಅವರ ಅಮೋಘ ಶತಕದ ಬಲದಿಂದ ಪಾಕಿಸ್ತಾನ ತಂಡ ಭಾರತ ವಿರುದ್ಧ ಜಯಭೇರಿ ಬಾರಿಸಿದೆ.

ಇಲ್ಲಿನ ಐಸಿಸಿ ಅಕಾಡೆಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಂಡರ್‌ 19 ಏಷ್ಯಾಕಪ್‌ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಭಾರತ ತಂಡದ ವಿರುದ್ಧ 8 ವಿಕೆಟ್‌ಗಳ ಜಯ ದಾಖಲಿಸಿತು.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಭಾರತ ತಂಡಕ್ಕೆ ಆದರ್ಶ್ ಸಿಂಗ್ (62) ಹಾಗೂ ಅರ್ಶಿನ್ ಕುಲ್ಕರ್ಣಿ (24) ಉತ್ತಮ ಆರಂಭ ಒದಗಿಸಿದ್ದರು. ಆ ಬಳಿಕ ಬಂದ ರುದ್ರ ಪಟೇಲ್ ಕೇವಲ 1 ರನ್​ಗಳಿಸಿ ಔಟಾದರು. ನಾಯಕ ಉದಯ್ ಸಹರಾನ್ 98 ಎಸೆತಗಳಲ್ಲಿ 5 ಫೋರ್​ಗಳೊಂದಿಗೆ 60 ರನ್ ಬಾರಿಸಿದರು. ಇನ್ನು ಕೆಳ ಕ್ರಮಾಂಕದಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಸಚಿನ್ ದಾಸ್ 42 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ 58 ರನ್ ಕಲೆಹಾಕಿದರು. ಈ ಮೂಲಕ ಭಾರತ ತಂಡವು 50 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 259 ರನ್‌ಗಳ ಸಾಧಾರಣ ಗುರಿ ನೀಡಿತು.

260 ರನ್​ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡಕ್ಕೆ ಆರಂಭಿಕ ಆಘಾತವಾಯಿತು. ಶಾಮಿಲ್ ಹುಸೇನ್ ಕೇವಲ 8 ರನ್​ಗೆ ಔಟಾದರು. ಆದರೆ 2ನೇ ವಿಕೆಟ್​ಗೆ ಜೊತೆಯಾದ ಶಹಝೈಬ್ ಖಾನ್ ಹಾಗೂ ಅಝಾನ್ ಅವೈಸ್ 110 ರನ್​ಗಳ ಭರ್ಜರಿ ಜೊತೆಯಾಟವಾಡಿದರು. ಶಹಝೈಬ್ 63 ರನ್ ಗಳಿಸಿ ನಿರ್ಗಮಿಸಿದರು. ಮತ್ತೊಂದೆಡೆ ಜವಾಬ್ದಾರಿಯುತ ಬ್ಯಾಟಿಂಗ್ ಮುಂದುವರೆಸಿದ ಅಝಾನ್ ಅವೈಸ್ 130 ಎಸೆತಗಳಲ್ಲಿ 10 ಫೋರ್​ಗಳೊಂದಿಗೆ ಅಜೇಯ 105 ರನ್ ಬಾರಿಸಿದರು. ಅಲ್ಲದೆ ನಾಯಕ ಸಾದ್ ಬೇಗ್ (68) ಜೊತೆಗೂಡಿ 47 ಓವರ್​ಗಳಲ್ಲಿ ತಂಡವನ್ನು ಗುರಿಮುಟ್ಟಿಸಿದರು.

ಪಾಕಿಸ್ತಾನ್ ತಂಡವು ಟೀಮ್ ಇಂಡಿಯಾ ವಿರುದ್ಧ 8 ವಿಕೆಟ್​ಗಳ ಜಯ ಸಾಧಿಸುವ ಮೂಲಕ ಗ್ರೂಪ್‌ ಎ ನಲ್ಲಿ ಅಗ್ರಸ್ಥಾನಕ್ಕೇರಿತು.

andolanait

Recent Posts

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

9 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

11 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

12 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

12 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

12 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

12 hours ago