ಕ್ರೀಡೆ

U19 Asia Cup-2023: ಭಾರತದ ವಿರುದ್ಧ ಪಾಕ್‌ಗೆ ಭರ್ಜರಿ ಜಯ

ದುಬೈ : ಪಾಕ್‌ ಬ್ಯಾಟರ್‌ ಅಝಾನ್ ಅವೈಸ್ ಅವರ ಅಮೋಘ ಶತಕದ ಬಲದಿಂದ ಪಾಕಿಸ್ತಾನ ತಂಡ ಭಾರತ ವಿರುದ್ಧ ಜಯಭೇರಿ ಬಾರಿಸಿದೆ.

ಇಲ್ಲಿನ ಐಸಿಸಿ ಅಕಾಡೆಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಂಡರ್‌ 19 ಏಷ್ಯಾಕಪ್‌ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಭಾರತ ತಂಡದ ವಿರುದ್ಧ 8 ವಿಕೆಟ್‌ಗಳ ಜಯ ದಾಖಲಿಸಿತು.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಭಾರತ ತಂಡಕ್ಕೆ ಆದರ್ಶ್ ಸಿಂಗ್ (62) ಹಾಗೂ ಅರ್ಶಿನ್ ಕುಲ್ಕರ್ಣಿ (24) ಉತ್ತಮ ಆರಂಭ ಒದಗಿಸಿದ್ದರು. ಆ ಬಳಿಕ ಬಂದ ರುದ್ರ ಪಟೇಲ್ ಕೇವಲ 1 ರನ್​ಗಳಿಸಿ ಔಟಾದರು. ನಾಯಕ ಉದಯ್ ಸಹರಾನ್ 98 ಎಸೆತಗಳಲ್ಲಿ 5 ಫೋರ್​ಗಳೊಂದಿಗೆ 60 ರನ್ ಬಾರಿಸಿದರು. ಇನ್ನು ಕೆಳ ಕ್ರಮಾಂಕದಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಸಚಿನ್ ದಾಸ್ 42 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ 58 ರನ್ ಕಲೆಹಾಕಿದರು. ಈ ಮೂಲಕ ಭಾರತ ತಂಡವು 50 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 259 ರನ್‌ಗಳ ಸಾಧಾರಣ ಗುರಿ ನೀಡಿತು.

260 ರನ್​ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡಕ್ಕೆ ಆರಂಭಿಕ ಆಘಾತವಾಯಿತು. ಶಾಮಿಲ್ ಹುಸೇನ್ ಕೇವಲ 8 ರನ್​ಗೆ ಔಟಾದರು. ಆದರೆ 2ನೇ ವಿಕೆಟ್​ಗೆ ಜೊತೆಯಾದ ಶಹಝೈಬ್ ಖಾನ್ ಹಾಗೂ ಅಝಾನ್ ಅವೈಸ್ 110 ರನ್​ಗಳ ಭರ್ಜರಿ ಜೊತೆಯಾಟವಾಡಿದರು. ಶಹಝೈಬ್ 63 ರನ್ ಗಳಿಸಿ ನಿರ್ಗಮಿಸಿದರು. ಮತ್ತೊಂದೆಡೆ ಜವಾಬ್ದಾರಿಯುತ ಬ್ಯಾಟಿಂಗ್ ಮುಂದುವರೆಸಿದ ಅಝಾನ್ ಅವೈಸ್ 130 ಎಸೆತಗಳಲ್ಲಿ 10 ಫೋರ್​ಗಳೊಂದಿಗೆ ಅಜೇಯ 105 ರನ್ ಬಾರಿಸಿದರು. ಅಲ್ಲದೆ ನಾಯಕ ಸಾದ್ ಬೇಗ್ (68) ಜೊತೆಗೂಡಿ 47 ಓವರ್​ಗಳಲ್ಲಿ ತಂಡವನ್ನು ಗುರಿಮುಟ್ಟಿಸಿದರು.

ಪಾಕಿಸ್ತಾನ್ ತಂಡವು ಟೀಮ್ ಇಂಡಿಯಾ ವಿರುದ್ಧ 8 ವಿಕೆಟ್​ಗಳ ಜಯ ಸಾಧಿಸುವ ಮೂಲಕ ಗ್ರೂಪ್‌ ಎ ನಲ್ಲಿ ಅಗ್ರಸ್ಥಾನಕ್ಕೇರಿತು.

andolanait

Recent Posts

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…

38 mins ago

ಟಿವಿಕೆಗೆ ಎಡಪಕ್ಷಗಳ ಬೆಂಬಲ : ಬಹುಮತದ ಸೀಟಿ ಊದಿಯೇ ಬಿಟ್ಟ ದಳಪತಿ ವಿಜಯ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…

58 mins ago

ತಮಿಳುನಾಡಿನಲ್ಲಿ ವಿಜಯ್‌ ಸಾಧನೆ ಎಲ್ಲರಿಗೂ ಅಚ್ಚರಿ ತಂದಿದೆ : ಕೇಂದ್ರ ಸಚಿವ ಎಚ್‌ಡಿಕೆ

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು…

2 hours ago

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

5 hours ago

ವೈಭವದ ವಸಂತ ಮಹಲ್‌ಗೆ ಬೇಕಿದೆ ಕಾಯಕಲ್ಪ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…

7 hours ago