ದುಬೈ : ಪಾಕ್ ಬ್ಯಾಟರ್ ಅಝಾನ್ ಅವೈಸ್ ಅವರ ಅಮೋಘ ಶತಕದ ಬಲದಿಂದ ಪಾಕಿಸ್ತಾನ ತಂಡ ಭಾರತ ವಿರುದ್ಧ ಜಯಭೇರಿ ಬಾರಿಸಿದೆ.
ಇಲ್ಲಿನ ಐಸಿಸಿ ಅಕಾಡೆಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಂಡರ್ 19 ಏಷ್ಯಾಕಪ್ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಭಾರತ ತಂಡದ ವಿರುದ್ಧ 8 ವಿಕೆಟ್ಗಳ ಜಯ ದಾಖಲಿಸಿತು.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ ತಂಡಕ್ಕೆ ಆದರ್ಶ್ ಸಿಂಗ್ (62) ಹಾಗೂ ಅರ್ಶಿನ್ ಕುಲ್ಕರ್ಣಿ (24) ಉತ್ತಮ ಆರಂಭ ಒದಗಿಸಿದ್ದರು. ಆ ಬಳಿಕ ಬಂದ ರುದ್ರ ಪಟೇಲ್ ಕೇವಲ 1 ರನ್ಗಳಿಸಿ ಔಟಾದರು. ನಾಯಕ ಉದಯ್ ಸಹರಾನ್ 98 ಎಸೆತಗಳಲ್ಲಿ 5 ಫೋರ್ಗಳೊಂದಿಗೆ 60 ರನ್ ಬಾರಿಸಿದರು. ಇನ್ನು ಕೆಳ ಕ್ರಮಾಂಕದಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಸಚಿನ್ ದಾಸ್ 42 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ 58 ರನ್ ಕಲೆಹಾಕಿದರು. ಈ ಮೂಲಕ ಭಾರತ ತಂಡವು 50 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 259 ರನ್ಗಳ ಸಾಧಾರಣ ಗುರಿ ನೀಡಿತು.
260 ರನ್ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡಕ್ಕೆ ಆರಂಭಿಕ ಆಘಾತವಾಯಿತು. ಶಾಮಿಲ್ ಹುಸೇನ್ ಕೇವಲ 8 ರನ್ಗೆ ಔಟಾದರು. ಆದರೆ 2ನೇ ವಿಕೆಟ್ಗೆ ಜೊತೆಯಾದ ಶಹಝೈಬ್ ಖಾನ್ ಹಾಗೂ ಅಝಾನ್ ಅವೈಸ್ 110 ರನ್ಗಳ ಭರ್ಜರಿ ಜೊತೆಯಾಟವಾಡಿದರು. ಶಹಝೈಬ್ 63 ರನ್ ಗಳಿಸಿ ನಿರ್ಗಮಿಸಿದರು. ಮತ್ತೊಂದೆಡೆ ಜವಾಬ್ದಾರಿಯುತ ಬ್ಯಾಟಿಂಗ್ ಮುಂದುವರೆಸಿದ ಅಝಾನ್ ಅವೈಸ್ 130 ಎಸೆತಗಳಲ್ಲಿ 10 ಫೋರ್ಗಳೊಂದಿಗೆ ಅಜೇಯ 105 ರನ್ ಬಾರಿಸಿದರು. ಅಲ್ಲದೆ ನಾಯಕ ಸಾದ್ ಬೇಗ್ (68) ಜೊತೆಗೂಡಿ 47 ಓವರ್ಗಳಲ್ಲಿ ತಂಡವನ್ನು ಗುರಿಮುಟ್ಟಿಸಿದರು.
ಪಾಕಿಸ್ತಾನ್ ತಂಡವು ಟೀಮ್ ಇಂಡಿಯಾ ವಿರುದ್ಧ 8 ವಿಕೆಟ್ಗಳ ಜಯ ಸಾಧಿಸುವ ಮೂಲಕ ಗ್ರೂಪ್ ಎ ನಲ್ಲಿ ಅಗ್ರಸ್ಥಾನಕ್ಕೇರಿತು.
ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…
ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್ ಅವರ ಈಗಿನ ಸಾಧನೆಯನ್ನು…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…