ದುಬೈ : ಪಾಕ್ ಬ್ಯಾಟರ್ ಅಝಾನ್ ಅವೈಸ್ ಅವರ ಅಮೋಘ ಶತಕದ ಬಲದಿಂದ ಪಾಕಿಸ್ತಾನ ತಂಡ ಭಾರತ ವಿರುದ್ಧ ಜಯಭೇರಿ ಬಾರಿಸಿದೆ.
ಇಲ್ಲಿನ ಐಸಿಸಿ ಅಕಾಡೆಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಂಡರ್ 19 ಏಷ್ಯಾಕಪ್ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಭಾರತ ತಂಡದ ವಿರುದ್ಧ 8 ವಿಕೆಟ್ಗಳ ಜಯ ದಾಖಲಿಸಿತು.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ ತಂಡಕ್ಕೆ ಆದರ್ಶ್ ಸಿಂಗ್ (62) ಹಾಗೂ ಅರ್ಶಿನ್ ಕುಲ್ಕರ್ಣಿ (24) ಉತ್ತಮ ಆರಂಭ ಒದಗಿಸಿದ್ದರು. ಆ ಬಳಿಕ ಬಂದ ರುದ್ರ ಪಟೇಲ್ ಕೇವಲ 1 ರನ್ಗಳಿಸಿ ಔಟಾದರು. ನಾಯಕ ಉದಯ್ ಸಹರಾನ್ 98 ಎಸೆತಗಳಲ್ಲಿ 5 ಫೋರ್ಗಳೊಂದಿಗೆ 60 ರನ್ ಬಾರಿಸಿದರು. ಇನ್ನು ಕೆಳ ಕ್ರಮಾಂಕದಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಸಚಿನ್ ದಾಸ್ 42 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ 58 ರನ್ ಕಲೆಹಾಕಿದರು. ಈ ಮೂಲಕ ಭಾರತ ತಂಡವು 50 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 259 ರನ್ಗಳ ಸಾಧಾರಣ ಗುರಿ ನೀಡಿತು.
260 ರನ್ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡಕ್ಕೆ ಆರಂಭಿಕ ಆಘಾತವಾಯಿತು. ಶಾಮಿಲ್ ಹುಸೇನ್ ಕೇವಲ 8 ರನ್ಗೆ ಔಟಾದರು. ಆದರೆ 2ನೇ ವಿಕೆಟ್ಗೆ ಜೊತೆಯಾದ ಶಹಝೈಬ್ ಖಾನ್ ಹಾಗೂ ಅಝಾನ್ ಅವೈಸ್ 110 ರನ್ಗಳ ಭರ್ಜರಿ ಜೊತೆಯಾಟವಾಡಿದರು. ಶಹಝೈಬ್ 63 ರನ್ ಗಳಿಸಿ ನಿರ್ಗಮಿಸಿದರು. ಮತ್ತೊಂದೆಡೆ ಜವಾಬ್ದಾರಿಯುತ ಬ್ಯಾಟಿಂಗ್ ಮುಂದುವರೆಸಿದ ಅಝಾನ್ ಅವೈಸ್ 130 ಎಸೆತಗಳಲ್ಲಿ 10 ಫೋರ್ಗಳೊಂದಿಗೆ ಅಜೇಯ 105 ರನ್ ಬಾರಿಸಿದರು. ಅಲ್ಲದೆ ನಾಯಕ ಸಾದ್ ಬೇಗ್ (68) ಜೊತೆಗೂಡಿ 47 ಓವರ್ಗಳಲ್ಲಿ ತಂಡವನ್ನು ಗುರಿಮುಟ್ಟಿಸಿದರು.
ಪಾಕಿಸ್ತಾನ್ ತಂಡವು ಟೀಮ್ ಇಂಡಿಯಾ ವಿರುದ್ಧ 8 ವಿಕೆಟ್ಗಳ ಜಯ ಸಾಧಿಸುವ ಮೂಲಕ ಗ್ರೂಪ್ ಎ ನಲ್ಲಿ ಅಗ್ರಸ್ಥಾನಕ್ಕೇರಿತು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…