ಕ್ರೀಡೆ

U19 Asia Cup-2023: ಭಾರತದ ವಿರುದ್ಧ ಪಾಕ್‌ಗೆ ಭರ್ಜರಿ ಜಯ

ದುಬೈ : ಪಾಕ್‌ ಬ್ಯಾಟರ್‌ ಅಝಾನ್ ಅವೈಸ್ ಅವರ ಅಮೋಘ ಶತಕದ ಬಲದಿಂದ ಪಾಕಿಸ್ತಾನ ತಂಡ ಭಾರತ ವಿರುದ್ಧ ಜಯಭೇರಿ ಬಾರಿಸಿದೆ.

ಇಲ್ಲಿನ ಐಸಿಸಿ ಅಕಾಡೆಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಂಡರ್‌ 19 ಏಷ್ಯಾಕಪ್‌ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಭಾರತ ತಂಡದ ವಿರುದ್ಧ 8 ವಿಕೆಟ್‌ಗಳ ಜಯ ದಾಖಲಿಸಿತು.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಭಾರತ ತಂಡಕ್ಕೆ ಆದರ್ಶ್ ಸಿಂಗ್ (62) ಹಾಗೂ ಅರ್ಶಿನ್ ಕುಲ್ಕರ್ಣಿ (24) ಉತ್ತಮ ಆರಂಭ ಒದಗಿಸಿದ್ದರು. ಆ ಬಳಿಕ ಬಂದ ರುದ್ರ ಪಟೇಲ್ ಕೇವಲ 1 ರನ್​ಗಳಿಸಿ ಔಟಾದರು. ನಾಯಕ ಉದಯ್ ಸಹರಾನ್ 98 ಎಸೆತಗಳಲ್ಲಿ 5 ಫೋರ್​ಗಳೊಂದಿಗೆ 60 ರನ್ ಬಾರಿಸಿದರು. ಇನ್ನು ಕೆಳ ಕ್ರಮಾಂಕದಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಸಚಿನ್ ದಾಸ್ 42 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ 58 ರನ್ ಕಲೆಹಾಕಿದರು. ಈ ಮೂಲಕ ಭಾರತ ತಂಡವು 50 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 259 ರನ್‌ಗಳ ಸಾಧಾರಣ ಗುರಿ ನೀಡಿತು.

260 ರನ್​ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡಕ್ಕೆ ಆರಂಭಿಕ ಆಘಾತವಾಯಿತು. ಶಾಮಿಲ್ ಹುಸೇನ್ ಕೇವಲ 8 ರನ್​ಗೆ ಔಟಾದರು. ಆದರೆ 2ನೇ ವಿಕೆಟ್​ಗೆ ಜೊತೆಯಾದ ಶಹಝೈಬ್ ಖಾನ್ ಹಾಗೂ ಅಝಾನ್ ಅವೈಸ್ 110 ರನ್​ಗಳ ಭರ್ಜರಿ ಜೊತೆಯಾಟವಾಡಿದರು. ಶಹಝೈಬ್ 63 ರನ್ ಗಳಿಸಿ ನಿರ್ಗಮಿಸಿದರು. ಮತ್ತೊಂದೆಡೆ ಜವಾಬ್ದಾರಿಯುತ ಬ್ಯಾಟಿಂಗ್ ಮುಂದುವರೆಸಿದ ಅಝಾನ್ ಅವೈಸ್ 130 ಎಸೆತಗಳಲ್ಲಿ 10 ಫೋರ್​ಗಳೊಂದಿಗೆ ಅಜೇಯ 105 ರನ್ ಬಾರಿಸಿದರು. ಅಲ್ಲದೆ ನಾಯಕ ಸಾದ್ ಬೇಗ್ (68) ಜೊತೆಗೂಡಿ 47 ಓವರ್​ಗಳಲ್ಲಿ ತಂಡವನ್ನು ಗುರಿಮುಟ್ಟಿಸಿದರು.

ಪಾಕಿಸ್ತಾನ್ ತಂಡವು ಟೀಮ್ ಇಂಡಿಯಾ ವಿರುದ್ಧ 8 ವಿಕೆಟ್​ಗಳ ಜಯ ಸಾಧಿಸುವ ಮೂಲಕ ಗ್ರೂಪ್‌ ಎ ನಲ್ಲಿ ಅಗ್ರಸ್ಥಾನಕ್ಕೇರಿತು.

andolanait

Recent Posts

ನಕ್ಕುಂದಿ ಗ್ರಾಮದಲ್ಲಿ ಕುಡಿಯುವ ನೀರಿಗೆ ತತ್ವಾರ

ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…

4 mins ago

ಶಿಕ್ಷಕರಿಗೆ ಪಠ್ಯಪುಸ್ತಕ ಸಾಗಣೆ ಹೊರೆ?

ಬೋಧಿಸಬೇಕೆಂದರೆ  ಪುಸ್ತಕ ಕೊಂಡೊಯ್ಯುವ ಅನಿವಾರ್ಯತೆ ಮೈಸೂರು: ರಾಜ್ಯದ ಸರ್ಕಾರಿ ಶಾಲೆಗಳ ಆರಂಭದಿಂದಲೇ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸಲಾಗುತ್ತಿದೆ. ಪ್ರತಿವರ್ಷ ಸಾಮಾನ್ಯವಾಗಿ…

8 mins ago

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

12 hours ago

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…

14 hours ago

ಗಾಣಾಳು ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…

14 hours ago