ಕ್ರೀಡೆ

U19 World Cup 2024: ಪರಿಷ್ಕೃತ ಹೊಸ​ ವೇಳಾಪಟ್ಟಿ ಪ್ರಕಟ

ಐಸಿಸಿ (ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್) ಅಂಡರ್-19 ಪುರುಷರ ಏಕದಿನ ಕ್ರಿಕೆಟ್ ವಿಶ್ವಕಪ್​ನ ಪರಿಷ್ಕೃತ ವೇಳಾಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ.

ಜನವರಿ 19 ರಿಂದ ಫ್ರೆಬ್ರವರಿ 11 ರವರೆಗೆ ಸೌಥ್‌ ಆಫ್ರಿಕಾದಲ್ಲಿ ಈ ಟೂರ್ನಿ ನಡೆಯಲಿದೆ. ಈ ಟೂರ್ನಿ ಆಯೋಜಕತ್ವವನ್ನು ಈ ಹಿಂದೆ ಶ್ರೀಲಂಕಾ ಪಡೆದಿತ್ತು. ಆದರೆ, ನವೆಂಬರ್‌ ನಲ್ಲಿ ಐಸಿಸಿ ಶ್ರೀಲಂಕಾ ಬೋರ್ಡ್‌ನ್ನು ಅಮಾನತುಗೊಳಿಸಿದ ಹಿನ್ನಲೆ 15ನೇ ಆವೃತ್ತಿಯ ಅಂಡರ್-19 ವಿಶ್ವಕಪ್‌ನ್ನು ದಕ್ಷಿಣ ಆಫ್ರಿಕಾಗೆ ಸ್ಥಳಾಂತರಿಸಲಾಗಿದೆ.

ಆತಿಥೇಯ ಸೌತ್ ಆಫ್ರಿಕಾ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಉದ್ಘಾಟನಾ ಪಂದ್ಯವನ್ನು ಆಡಲಿದೆ. ಹಾಲಿ ಚಾಂಪಿಯನ್ ಟೀಂ ಇಂಡಿಯಾ ಜನವರಿ 20 ರಂದು ಬಾಂಗ್ಲಾದೇಶ ವಿರುದ್ಧ ಆಡುವ ಮೂಲಕ ವಿಶ್ವಕಪ್ ಅಭಿಯಾನವನ್ನು ಆರಂಭಿಸಲಿದೆ.

ಒಟ್ಟು ಐದು ಸ್ಟೇಡಿಯಂಗಳಲ್ಲಿ ಟೂರ್ನಿ ಆಯೋಜಿಸಲಾಗಿದೆ. ಬ್ಲೋಮ್‌ಫಾಂಟೈನ್‌ನ ಮಂಗಾಂಗ್ ಓವಲ್ ಮೈದಾನ, ಪೂರ್ವ ಲಂಡನ್‌ನ ಬಫಲೋ ಪಾರ್ಕ್ ಸ್ಟೇಡಿಯಂ, ಕಿಂಬರ್ಲಿಯಲ್ಲಿ ಕಿಂಬರ್ಲಿ ಓವಲ್ ಮೈದಾನ, ಪಾಚೆಫ್‌ಸ್ಟ್ರೂಮ್‌ನ ಜೆಬಿ ಮಾರ್ಕ್ಸ್ ಓವಲ್ ಮತ್ತು ಬೆನೋನಿಯ ವಿಲೋಮೂರ್ ಪಾರ್ಕ್ ಸ್ಟೇಡಿಯಂಗಳಲ್ಲಿ ಒಟ್ಟು 41 ಪಂದ್ಯಗಳು ನಡೆಯಲಿದೆ.

16 ತಂಡಗಳು 4 ಗ್ರೂಪ್: ಅಂಡರ್​-19 ವಿಶ್ವಕಪ್​ನಲ್ಲಿ ಒಟ್ಟು 16 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು ನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದೆ. ಇಲ್ಲಿ ಪ್ರತಿ ಗ್ರೂಪ್​ಗಳಲ್ಲಿ ಮೊದಲೆರಡು ಅಗ್ರಸ್ಥಾನಗಳನ್ನು ಅಲಂಕರಿಸುವ ತಂಡಗಳು ಮುಂದಿನ ಹಂತಕ್ಕೇರಲಿದೆ.

ಅಂಡರ್-19 ವಿಶ್ವಕಪ್​ ಗ್ರೂಪ್​ಗಳು:
ಗ್ರೂಪ್​-A : ಭಾರತ, ಬಾಂಗ್ಲಾದೇಶ್, ಯುಎಸ್​ಎ, ಐರ್ಲೆಂಡ್

ಗ್ರೂಪ್​-B : ಇಂಗ್ಲೆಂಡ್, ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್, ಸ್ಕಾಟ್ಲೆಂಡ್

ಗ್ರೂಪ್​-C : ಆಸ್ಟ್ರೇಲಿಯಾ, ಶ್ರೀಲಂಕಾ, ಝಿಂಬಾಬ್ವೆ, ನಮೀಬಿಯಾ

ಗ್ರೂಪ್​-D : ಅಫ್ಘಾನಿಸ್ತಾನ್, ಪಾಕಿಸ್ತಾನ್, ನ್ಯೂಝಿಲೆಂಡ್, ನೇಪಾಳ

ಭಾರತ ತಂಡದ ಲೀಗ್​ ಹಂತದ ವೇಳಾಪಟ್ಟಿ:
ಜನವರಿ 20- ಭಾರತ vs ಬಾಂಗ್ಲಾದೇಶ್.
ಜನವರಿ 22- ಭಾರತ vs ಐರ್ಲೆಂಡ್.
ಜನವರಿ 28- ಭಾರತ vs ಯುಎಸ್​ಎ

ಅಂಡರ್-19 ವಿಶ್ವಕಪ್​ ವೇಳಾಪಟ್ಟಿ: 

andolanait

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

8 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

9 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

10 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

10 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

10 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

10 hours ago